AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ₹2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ವಶ

ಆರಂಭಿಕ ವರದಿಗಳ ಪ್ರಕಾರ, ಕೊಕೇನ್ ಅನ್ನು ದೆಹಲಿಗೆ ತಂದ ಆರೋಪಿ ಲಂಡನ್‌ಗೆ ಪರಾರಿಯಾಗಿದ್ದಾನೆ. ದಕ್ಷಿಣ ದೆಹಲಿಯ ಮಹಿಪಾಲ್‌ಪುರದ ಗೋಡೌನ್‌ನಿಂದ ಅಕ್ಟೋಬರ್ 2 ರಂದು 5,620 ಕೋಟಿ ಮೌಲ್ಯದ ಅಂದಾಜು 560 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.

ದೆಹಲಿಯಲ್ಲಿ ₹2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ವಶ
ದೆಹಲಿ ಪೊಲೀಸ್
ರಶ್ಮಿ ಕಲ್ಲಕಟ್ಟ
|

Updated on:Oct 10, 2024 | 8:33 PM

Share

ದೆಹಲಿ ಅಕ್ಟೋಬರ್ 10: ದೆಹಲಿ ಪೊಲೀಸ್ ವಿಶೇಷ ಘಟಕ ಗುರುವಾರ ಮತ್ತೊಂದು ಮಾದಕವಸ್ತು ಕಳ್ಳಸಾಗಣೆ ಪ್ರಕರಣ ಭೇದಿಸಿದ್ದು, ರಮೇಶ್ ನಗರ ಪ್ರದೇಶದಲ್ಲಿರುವ ಗೋದಾಮಿನಿಂದ ₹2000 ಕೋಟಿ ಮೌಲ್ಯದ ಸುಮಾರು 200 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಕೇನ್ ಸಾಗಿಸಲು ಬಳಸಿದ ಕಾರಿನಲ್ಲಿ ಜಿಪಿಎಸ್ ಅಳವಡಿಸಿದ್ದರಿಂದ ಡ್ರಗ್ ಸಿಂಡಿಕೇಟ್ ದಂಧೆ ನಡೆದಿದೆ. ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ಕೈಗೊಳ್ಳಲು ಜಿಪಿಎಸ್ ಸ್ಥಳವನ್ನು ಟ್ರ್ಯಾಕ್ ಮಾಡಿ ಡ್ರಗ್ಸ್ ಅನ್ನು ವಶಪಡಿಸಿಕೊಂಡರು ಎಂದು ಅವರು ಹೇಳಿದರು.

ಆರಂಭಿಕ ವರದಿಗಳ ಪ್ರಕಾರ, ಕೊಕೇನ್ ಅನ್ನು ದೆಹಲಿಗೆ ತಂದ ಆರೋಪಿ ಲಂಡನ್‌ಗೆ ಪರಾರಿಯಾಗಿದ್ದಾನೆ. ದಕ್ಷಿಣ ದೆಹಲಿಯ ಮಹಿಪಾಲ್‌ಪುರದ ಗೋಡೌನ್‌ನಿಂದ ಅಕ್ಟೋಬರ್ 2 ರಂದು 5,620 ಕೋಟಿ ಮೌಲ್ಯದ ಅಂದಾಜು 560 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.

ತುಷಾರ್ ಗೋಯಲ್ (40), ಹಿಮಾಂಶು ಕುಮಾರ್ (27) ಮತ್ತು ಔರಂಗಜೇಬ್ ಸಿದ್ದಿಕಿ (23) ಮತ್ತು ಭರತ್ ಕುಮಾರ್ ಜೈನ್ (48) ಎಂದು ಗುರುತಿಸಲಾದ ನಾಲ್ವರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಇಬ್ಬರನ್ನು ಅಮೃತಸರ ಮತ್ತು ಚೆನ್ನೈನಿಂದ ಬಂಧಿಸಲಾಗಿದೆ.

ಉತ್ತರ ಪ್ರದೇಶದ ಹಾಪುರ್‌ನಲ್ಲಿ ಅಖ್ಲಾಕ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಬೆಳಗ್ಗೆ ಬಂಧಿಸಲಾಗಿತ್ತು. ಪೊಲೀಸರ ಪ್ರಕಾರ, ಅಖ್ಲಾಕ್ ಉತ್ತರ ಭಾರತದಲ್ಲಿ ಡ್ರಗ್ಸ್ ಸಾಗಿಸಲು ಸಹಾಯ ಮಾಡುತ್ತಿದ್ದ. 5,620 ಕೋಟಿ ರೂಪಾಯಿಗಳ ಡ್ರಗ್ ಕಾರ್ಟೆಲ್‌ನಲ್ಲಿ ಭಾಗಿಯಾಗಿರುವ ಶಂಕಿತ ಭಾರತೀಯ ಮೂಲದ ದುಬೈ ಮೂಲದ ಉದ್ಯಮಿ ವೀರೇಂದ್ರ ಬಸೋಯಾ ವಿರುದ್ಧ ದೆಹಲಿ ಪೊಲೀಸರು ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Thu, 10 October 24

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ