AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ₹2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ವಶ

ಆರಂಭಿಕ ವರದಿಗಳ ಪ್ರಕಾರ, ಕೊಕೇನ್ ಅನ್ನು ದೆಹಲಿಗೆ ತಂದ ಆರೋಪಿ ಲಂಡನ್‌ಗೆ ಪರಾರಿಯಾಗಿದ್ದಾನೆ. ದಕ್ಷಿಣ ದೆಹಲಿಯ ಮಹಿಪಾಲ್‌ಪುರದ ಗೋಡೌನ್‌ನಿಂದ ಅಕ್ಟೋಬರ್ 2 ರಂದು 5,620 ಕೋಟಿ ಮೌಲ್ಯದ ಅಂದಾಜು 560 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.

ದೆಹಲಿಯಲ್ಲಿ ₹2,000 ಕೋಟಿ ಮೌಲ್ಯದ 200 ಕೆಜಿ ಕೊಕೇನ್ ವಶ
ದೆಹಲಿ ಪೊಲೀಸ್
ರಶ್ಮಿ ಕಲ್ಲಕಟ್ಟ
|

Updated on:Oct 10, 2024 | 8:33 PM

Share

ದೆಹಲಿ ಅಕ್ಟೋಬರ್ 10: ದೆಹಲಿ ಪೊಲೀಸ್ ವಿಶೇಷ ಘಟಕ ಗುರುವಾರ ಮತ್ತೊಂದು ಮಾದಕವಸ್ತು ಕಳ್ಳಸಾಗಣೆ ಪ್ರಕರಣ ಭೇದಿಸಿದ್ದು, ರಮೇಶ್ ನಗರ ಪ್ರದೇಶದಲ್ಲಿರುವ ಗೋದಾಮಿನಿಂದ ₹2000 ಕೋಟಿ ಮೌಲ್ಯದ ಸುಮಾರು 200 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಕೇನ್ ಸಾಗಿಸಲು ಬಳಸಿದ ಕಾರಿನಲ್ಲಿ ಜಿಪಿಎಸ್ ಅಳವಡಿಸಿದ್ದರಿಂದ ಡ್ರಗ್ ಸಿಂಡಿಕೇಟ್ ದಂಧೆ ನಡೆದಿದೆ. ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ಕೈಗೊಳ್ಳಲು ಜಿಪಿಎಸ್ ಸ್ಥಳವನ್ನು ಟ್ರ್ಯಾಕ್ ಮಾಡಿ ಡ್ರಗ್ಸ್ ಅನ್ನು ವಶಪಡಿಸಿಕೊಂಡರು ಎಂದು ಅವರು ಹೇಳಿದರು.

ಆರಂಭಿಕ ವರದಿಗಳ ಪ್ರಕಾರ, ಕೊಕೇನ್ ಅನ್ನು ದೆಹಲಿಗೆ ತಂದ ಆರೋಪಿ ಲಂಡನ್‌ಗೆ ಪರಾರಿಯಾಗಿದ್ದಾನೆ. ದಕ್ಷಿಣ ದೆಹಲಿಯ ಮಹಿಪಾಲ್‌ಪುರದ ಗೋಡೌನ್‌ನಿಂದ ಅಕ್ಟೋಬರ್ 2 ರಂದು 5,620 ಕೋಟಿ ಮೌಲ್ಯದ ಅಂದಾಜು 560 ಕೆಜಿ ಕೊಕೇನ್ ಮತ್ತು 40 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿತ್ತು.

ತುಷಾರ್ ಗೋಯಲ್ (40), ಹಿಮಾಂಶು ಕುಮಾರ್ (27) ಮತ್ತು ಔರಂಗಜೇಬ್ ಸಿದ್ದಿಕಿ (23) ಮತ್ತು ಭರತ್ ಕುಮಾರ್ ಜೈನ್ (48) ಎಂದು ಗುರುತಿಸಲಾದ ನಾಲ್ವರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಇಬ್ಬರನ್ನು ಅಮೃತಸರ ಮತ್ತು ಚೆನ್ನೈನಿಂದ ಬಂಧಿಸಲಾಗಿದೆ.

ಉತ್ತರ ಪ್ರದೇಶದ ಹಾಪುರ್‌ನಲ್ಲಿ ಅಖ್ಲಾಕ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಬೆಳಗ್ಗೆ ಬಂಧಿಸಲಾಗಿತ್ತು. ಪೊಲೀಸರ ಪ್ರಕಾರ, ಅಖ್ಲಾಕ್ ಉತ್ತರ ಭಾರತದಲ್ಲಿ ಡ್ರಗ್ಸ್ ಸಾಗಿಸಲು ಸಹಾಯ ಮಾಡುತ್ತಿದ್ದ. 5,620 ಕೋಟಿ ರೂಪಾಯಿಗಳ ಡ್ರಗ್ ಕಾರ್ಟೆಲ್‌ನಲ್ಲಿ ಭಾಗಿಯಾಗಿರುವ ಶಂಕಿತ ಭಾರತೀಯ ಮೂಲದ ದುಬೈ ಮೂಲದ ಉದ್ಯಮಿ ವೀರೇಂದ್ರ ಬಸೋಯಾ ವಿರುದ್ಧ ದೆಹಲಿ ಪೊಲೀಸರು ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಹೊರಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Thu, 10 October 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ