AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರೂಪಾಯಿಯ ಪೇಪರ್​ ಲೋಟಕ್ಕಾಗಿ 11 ಸಾವಿರ ರೂ. ದಂಡ ತೆತ್ತ ಬರಿಸ್ಟಾ ಕಾಫಿ

ಬರಿಸ್ಟಾ ಕಾಫಿ ಕಂಪನಿಯು 5 ರೂ. ಪೇಪರ್​ ಲೋಟಕ್ಕಾಗಿ 11 ಸಾವಿರ ರೂ. ದಂಡ ತೆತ್ತಿರುವ ಘಟನೆ ವರದಿಯಾಗಿದೆ. ಮೊಹಾಲಿಯ ಪ್ಯಾನ್ಸಿ ಸಿಂಗ್ ಸೋನಿ 2020ರ ಡಿಸೆಂಬರ್ 18ರಂದು ಚಂಡೀಗಢದಲ್ಲಿ ಬರಿಸ್ಟಾ ಕಾಫಿ ಅಂಗಡಿಗೆ ಹೋಗಿದ್ದರು.

5 ರೂಪಾಯಿಯ ಪೇಪರ್​ ಲೋಟಕ್ಕಾಗಿ 11 ಸಾವಿರ ರೂ. ದಂಡ ತೆತ್ತ ಬರಿಸ್ಟಾ ಕಾಫಿ
ಕಾಫಿ
ನಯನಾ ರಾಜೀವ್
|

Updated on: Dec 26, 2023 | 3:58 PM

Share

ಬರಿಸ್ಟಾ ಕಾಫಿ ಕಂಪನಿಯು 5 ರೂಪಾಯಿ ಪೇಪರ್​ ಲೋಟಕ್ಕಾಗಿ 11 ಸಾವಿರ ರೂ. ದಂಡ ತೆತ್ತಿರುವ ಘಟನೆ ವರದಿಯಾಗಿದೆ. ಮೊಹಾಲಿಯ ಪ್ಯಾನ್ಸಿ ಸಿಂಗ್ ಸೋನಿ 2020ರ ಡಿಸೆಂಬರ್ 18ರಂದು ಚಂಡೀಗಢದಲ್ಲಿ ಬರಿಸ್ಟಾ ಕಾಫಿ ಅಂಗಡಿಗೆ ಹೋಗಿದ್ದರು.

ಬಿಸಿ ಚಾಕೊಲೇಟ್​ಗೆ ಆರ್ಡರ್ ಮಾಡಿ 230 ರೂ. ಬಿಲ್​ ಪಡೆದಿದ್ದಾರೆ. ಬಿಲ್​ನಲ್ಲಿ ಅಂಗಡಿಯು ಬರಿಸ್ಟಾ ಎಂದು ಬರೆದಿರುವ ಕಾಗದದ ಕಪ್​ಗೆ 5 ರೂ. ವಿಧಿಸಿದ್ದರು. ಪೇಪರ್​ ಲೋಟಕ್ಕೆ 5 ರೂ. ವಿಧಿಸಿದ್ದಕ್ಕೆ ವಸೂಲಿ ಮಾಡುತ್ತಿರುವುದನ್ನು ವಿರೋಧಿಸಿ ದೂರುದಾರರು ಪ್ರತಿಭಟನೆ ನಡೆಸಿದ್ದಾರೆ.

ಆದರೆ ಅಂಗಡಿಯವರು ಆ ಕಡೆ ಕಿಂಚಿತ್ತೂ ಗಮನಹರಿಸಿಲ್ಲ. ಹೀಗಾಗಿ ಅವರು ಚಂಡೀಗಢದ ಗ್ರಾಹಕ ಆಯೋಗದಲ್ಲಿ ದೂರು ದಾಖಲಿಸಿದ್ದರು. ಬರಿಸ್ಟಾ ಕಾಫಿ ಕಂಪನಿ ಲಿಮಿಟೆಡ್ ಪ್ಯಾಕೇಜಿಂಗ್ ಶುಲ್ಕಗಳನ್ನು ಹೆಚ್ಚುವರಿಯಾಗಿ ತೆಗೆದುಕೊಳ್ಳುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಹಣವನ್ನು ಸುಲಿಗೆ ಮಾಡುವ ಉದ್ದೇಶದಿಂದ ಸುಳ್ಳು ಹೇಳಿ ಒಳಸಂಚು ನಡೆಸುತ್ತಿದ್ದಾರೆ ಎಂದು ವಾದಿಸಿದ್ದಾರೆ. ಬಡರೋಗಿಗಳ ನಿಧಿಗೆ 10 ಸಾವಿರ ರೂ ಹಾಗೂ ದೂರುದಾರರಿಗೆ 1 ಸಾವಿರ ರೂ. ಪಾವತಿಸಲು ಗ್ರಾಹಕ ನ್ಯಾಯಾಲಯ ಆದೇಶಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ