AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಚಳಿ! ಇನ್ನೂ ನಾಲ್ಕು ದಿನ ಮುಂದುವರಿಯಲಿದೆ 3-4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ

ಮುಂದಿನ ಕೆಲದಿನಗಳ ಕಾಲ ಮಂಜು ಆವರಿಸಿದ ವಾತವರಣ ಕೂಡ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು (ಮಂಗಳವಾರ) ಹವಾಮಾನ ಇಲಾಖೆಯ ವರದಿಯಂತೆ ಅತಿ ಕನಿಷ್ಠ ತಾಪಮಾನ 5.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ದೆಹಲಿ ಚಳಿ! ಇನ್ನೂ ನಾಲ್ಕು ದಿನ ಮುಂದುವರಿಯಲಿದೆ 3-4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ
ಚಳಿ ತಡೆಯಲು ಬೆಂಕಿ ಹಾಕಿ ಮೈಕಾಯಿಸಿಕೊಳ್ಳುತ್ತಿರುವ ಜನರು
TV9 Web
| Edited By: |

Updated on:Apr 06, 2022 | 11:22 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಚಳಿ ಪರಿಸ್ಥಿತಿ ಮತ್ತೆ ಮುಂದುವರೆದಿದೆ. ಕೆಲವು ದಿನಗಳಿಂದ ಕನಿಷ್ಠ ತಾಪಮಾನ 3-4 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಇದೇ ಉಷ್ಣಾಂಶ ನಾಲ್ಕು ದಿನಗಳವರೆಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಂಗಳವಾರ ತಿಳಿಸಿದೆ.

ಮುಂದಿನ ಕೆಲದಿನಗಳ ಕಾಲ ಮಂಜು ಆವರಿಸಿದ ವಾತಾವರಣ ಕೂಡ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು (ಮಂಗಳವಾರ) ಹವಾಮಾನ ಇಲಾಖೆಯ ವರದಿಯಂತೆ ಅತಿ ಕನಿಷ್ಠ ತಾಪಮಾನ 5.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಳೆದ ಭಾನುವಾರ 3.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಆ ಮೂಲಕ ಈ ಋತುವಿನ ಅತಿ ಕಡಿಮೆ ತಾಪಮಾನವನ್ನು ದೆಹಲಿ ಅನುಭವಿಸಿತ್ತು.

ಸೋಮವಾರ 5.5 ಡಿಗ್ರಿ ಸೆಲ್ಸಿಯಸ್ ಇದ್ದ ಕನಿಷ್ಠ ಉಷ್ಣಾಂಶ ಇಂದು ಮತ್ತೆ 0.2ರಷ್ಟು ಕುಸಿತ ಕಂಡಿದೆ. ಸೋಮವಾರ ಗರಿಷ್ಠ 23.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ದೆಹಲಿಯಲ್ಲಿ ಗುರುವಾರ 15.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಶುಕ್ರವಾರ ಗರಿಷ್ಠ 19.8 ಡಿಗ್ರಿ ಸೆಲ್ಸಿಯಸ್ ಮತ್ತು ಶನಿವಾರ 21.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಜಫಾರ್​ಪುರ್ ಕಳೆದ ಶುಕ್ರವಾರ ಕನಿಷ್ಠ 2.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡಿತ್ತು.

ರಾಜಸ್ಥಾನದ ಮೌಂಟ್ ಅಬು ಪ್ರದೇಶದಲ್ಲೂ ಶೀತಗಾಳಿಯ ಪರಿಣಾಮ ಭಾನುವಾರ ಮೈನಸ್ 1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ವಿಪರೀತ ಚಳಿ ಅನುಭವಿಸಿದ ಪ್ರವಾಸಿಗರು, ಮನಾಲಿಯಂಥಾ ಸ್ಥಳಗಳಲ್ಲಿ ನೋಡಬಹುದಾದ ಮಂಜುಗಡ್ಡೆಯನ್ನು ನಾವು ಇಲ್ಲಿ ಕಾಣುತ್ತಿದ್ದೇವೆ ಎಂದು ಹೇಳಿದ್ದರು.

ಮೌಂಟ್ ಅಬು (ಸಂಗ್ರಹ ಚಿತ್ರ)

ಉತ್ತರ ಭಾರತದಲ್ಲೆಡೆ ಚಳಿಯಿಂದ ನಡುಗುತ್ತಿರುವ ಜನರು ಚಳಿಯಿಂದ ಪಾರಾಗಲು ಸ್ವೆಟರ್, ಕಂಬಳಿಯ ಮೊರೆ ಹೋಗಿದ್ದಾರೆ. ಬೆಂಕಿ ಹಾಕಿ ಮೈ ಕಾಯಿಸಿಕೊಳ್ಳುತ್ತಿರುವ ದೃಶ್ಯಗಳು ಉತ್ತರ ಪ್ರದೇಶ, ರಾಜಸ್ಥಾನ ಇತರೆಡೆಗಳಲ್ಲಿ ಕಂಡುಬಂದಿದೆ. ಜೊತೆಗೆ, ಜಮ್ಮು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಹಿಮಪಾತ ಕೂಡ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿಮಾಚಲ ಪ್ರದೇಶ (ಸಂಗ್ರಹ ಚಿತ್ರ)

ದೆಹಲಿಯಲ್ಲಿ ಚಳಿಚಳಿ: 3.4 ಡಿಗ್ರಿ ಸೆಲ್ಸಿಯಸ್​ಗೆ ಕುಸಿದ ಉಷ್ಣಾಂಶ, ನಡುಗಿದ ಜನ

Published On - 10:59 am, Tue, 22 December 20

ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಮಾತೃ ಭಾಷೆ ತೆಲುಗು, ಜೀವನದ ಭಾಷೆ ಕನ್ನಡ: ಸಾಯಿಕುಮಾರ್
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ