AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಚಳಿ! ಇನ್ನೂ ನಾಲ್ಕು ದಿನ ಮುಂದುವರಿಯಲಿದೆ 3-4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ

ಮುಂದಿನ ಕೆಲದಿನಗಳ ಕಾಲ ಮಂಜು ಆವರಿಸಿದ ವಾತವರಣ ಕೂಡ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು (ಮಂಗಳವಾರ) ಹವಾಮಾನ ಇಲಾಖೆಯ ವರದಿಯಂತೆ ಅತಿ ಕನಿಷ್ಠ ತಾಪಮಾನ 5.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ದೆಹಲಿ ಚಳಿ! ಇನ್ನೂ ನಾಲ್ಕು ದಿನ ಮುಂದುವರಿಯಲಿದೆ 3-4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ
ಚಳಿ ತಡೆಯಲು ಬೆಂಕಿ ಹಾಕಿ ಮೈಕಾಯಿಸಿಕೊಳ್ಳುತ್ತಿರುವ ಜನರು
TV9 Web
| Updated By: ganapathi bhat|

Updated on:Apr 06, 2022 | 11:22 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಚಳಿ ಪರಿಸ್ಥಿತಿ ಮತ್ತೆ ಮುಂದುವರೆದಿದೆ. ಕೆಲವು ದಿನಗಳಿಂದ ಕನಿಷ್ಠ ತಾಪಮಾನ 3-4 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಇದೇ ಉಷ್ಣಾಂಶ ನಾಲ್ಕು ದಿನಗಳವರೆಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಂಗಳವಾರ ತಿಳಿಸಿದೆ.

ಮುಂದಿನ ಕೆಲದಿನಗಳ ಕಾಲ ಮಂಜು ಆವರಿಸಿದ ವಾತಾವರಣ ಕೂಡ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು (ಮಂಗಳವಾರ) ಹವಾಮಾನ ಇಲಾಖೆಯ ವರದಿಯಂತೆ ಅತಿ ಕನಿಷ್ಠ ತಾಪಮಾನ 5.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಳೆದ ಭಾನುವಾರ 3.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಆ ಮೂಲಕ ಈ ಋತುವಿನ ಅತಿ ಕಡಿಮೆ ತಾಪಮಾನವನ್ನು ದೆಹಲಿ ಅನುಭವಿಸಿತ್ತು.

ಸೋಮವಾರ 5.5 ಡಿಗ್ರಿ ಸೆಲ್ಸಿಯಸ್ ಇದ್ದ ಕನಿಷ್ಠ ಉಷ್ಣಾಂಶ ಇಂದು ಮತ್ತೆ 0.2ರಷ್ಟು ಕುಸಿತ ಕಂಡಿದೆ. ಸೋಮವಾರ ಗರಿಷ್ಠ 23.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ದೆಹಲಿಯಲ್ಲಿ ಗುರುವಾರ 15.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಶುಕ್ರವಾರ ಗರಿಷ್ಠ 19.8 ಡಿಗ್ರಿ ಸೆಲ್ಸಿಯಸ್ ಮತ್ತು ಶನಿವಾರ 21.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಜಫಾರ್​ಪುರ್ ಕಳೆದ ಶುಕ್ರವಾರ ಕನಿಷ್ಠ 2.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡಿತ್ತು.

ರಾಜಸ್ಥಾನದ ಮೌಂಟ್ ಅಬು ಪ್ರದೇಶದಲ್ಲೂ ಶೀತಗಾಳಿಯ ಪರಿಣಾಮ ಭಾನುವಾರ ಮೈನಸ್ 1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ವಿಪರೀತ ಚಳಿ ಅನುಭವಿಸಿದ ಪ್ರವಾಸಿಗರು, ಮನಾಲಿಯಂಥಾ ಸ್ಥಳಗಳಲ್ಲಿ ನೋಡಬಹುದಾದ ಮಂಜುಗಡ್ಡೆಯನ್ನು ನಾವು ಇಲ್ಲಿ ಕಾಣುತ್ತಿದ್ದೇವೆ ಎಂದು ಹೇಳಿದ್ದರು.

ಮೌಂಟ್ ಅಬು (ಸಂಗ್ರಹ ಚಿತ್ರ)

ಉತ್ತರ ಭಾರತದಲ್ಲೆಡೆ ಚಳಿಯಿಂದ ನಡುಗುತ್ತಿರುವ ಜನರು ಚಳಿಯಿಂದ ಪಾರಾಗಲು ಸ್ವೆಟರ್, ಕಂಬಳಿಯ ಮೊರೆ ಹೋಗಿದ್ದಾರೆ. ಬೆಂಕಿ ಹಾಕಿ ಮೈ ಕಾಯಿಸಿಕೊಳ್ಳುತ್ತಿರುವ ದೃಶ್ಯಗಳು ಉತ್ತರ ಪ್ರದೇಶ, ರಾಜಸ್ಥಾನ ಇತರೆಡೆಗಳಲ್ಲಿ ಕಂಡುಬಂದಿದೆ. ಜೊತೆಗೆ, ಜಮ್ಮು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಹಿಮಪಾತ ಕೂಡ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿಮಾಚಲ ಪ್ರದೇಶ (ಸಂಗ್ರಹ ಚಿತ್ರ)

ದೆಹಲಿಯಲ್ಲಿ ಚಳಿಚಳಿ: 3.4 ಡಿಗ್ರಿ ಸೆಲ್ಸಿಯಸ್​ಗೆ ಕುಸಿದ ಉಷ್ಣಾಂಶ, ನಡುಗಿದ ಜನ

Published On - 10:59 am, Tue, 22 December 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!