AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಚಳಿಯೋ ಚಳಿ! ಮಂಜು ಮುಸುಕಿದ ವಾತಾವರಣದಲ್ಲಿ ಜನ ಪರದಾಟ

ದೆಹಲಿ ಲೋಧಿ ರಸ್ತೆಯಲ್ಲಿ ಕನಿಷ್ಠ 3.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ರಾಜಸ್ಥಾನ ಭಾಗಗಳಲ್ಲೂ ಚಳಿ ಹವಾಮಾನ ಮುಂದುವರೆದಿದೆ. ದೆಹಲಿ ಭಾಗದಲ್ಲಿ ಶೀತಗಾಳಿ ಪರಿಣಾಮ ಮುಂದಿನ ಮೂರು ದಿನಗಳವರೆಗೆ ಇರಲಿದೆ.

ದೆಹಲಿಯಲ್ಲಿ ಚಳಿಯೋ ಚಳಿ! ಮಂಜು ಮುಸುಕಿದ ವಾತಾವರಣದಲ್ಲಿ ಜನ ಪರದಾಟ
ದೆಹಲಿಯಲ್ಲಿ ಮಂಜು ಮುಸುಕಿದ ವಾತಾವರಣ
TV9 Web
| Updated By: ganapathi bhat|

Updated on:Apr 06, 2022 | 11:23 PM

Share

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಚಳಿಯ ಪರಿಸ್ಥಿತಿ ಇಂದೂ ಕೂಡ ಮುಂದುವರೆದಿದೆ. ನಾಲ್ಕೈದು ದಿನಗಳಿಂದ ದೆಹಲಿ ಜನರು ಚಳಿಯಲ್ಲಿ ಗಡಗಡ ನಡುಗುತ್ತಿದ್ದು ಇನ್ನೂ ಮೂರು ದಿನ ಇಷ್ಟೇ ಚಳಿ ಅನುಭವಿಸಬೇಕಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಾಪಮಾನ ಕುಸಿತ ಕಂಡ ಪರಿಣಾಮ ಮಂಜು ಮುಸುಕಿದ ವಾತಾವರಣ ದೆಹಲಿ ಜನರನ್ನು ಕಾಡಿದ್ದು, 201 ಮೀಟರ್​ಗಳ ಗೋಚರತೆ ದಾಖಲಾಗಿದೆ.

ದೆಹಲಿ ಲೋಧಿ ರಸ್ತೆಯಲ್ಲಿ ಕನಿಷ್ಠ 3.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ರಾಜಸ್ಥಾನ ಭಾಗಗಳಲ್ಲೂ ಚಳಿ ಹವಾಮಾನ ಮುಂದುವರೆದಿದೆ. ದೆಹಲಿ ಭಾಗದಲ್ಲಿ ಶೀತಗಾಳಿ ಪರಿಣಾಮ ಮುಂದಿನ ಮೂರು ದಿನಗಳವರೆಗೆ ಇರಲಿದೆ. ತಾಪಮಾನ 3 ಡಿಗ್ರಿ ಸೆಲ್ಸಿಯಸ್​ಗೆ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿಕೆ ಕೊಟ್ಟಿದೆ.

ಡಿಸೆಂಬರ್ 26ರಂದು ಹಿಮಾಲಯ ಭಾಗದಲ್ಲಿ ಮತ್ತೊಂದು ಶೀತಗಾಳಿ ಬೀಸುವ ಸಾಧ್ಯತೆ ಇದ್ದು ತಾಪಮಾನ ಕುಸಿತ ಕಾಣಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಪಂಜಾಬ್, ಹರ್ಯಾಣ ಸಹಿತ ಉತ್ತರ ಭಾರತದ ಇತರ ಪ್ರದೇಶಗಳಲ್ಲೂ ಮಂಜು ಮುಸುಕಿದ ವಾತಾವರಣ, ಚಳಿ ಹವಾಮಾನ ಕಂಡುಬಂದಿದೆ.

ದೆಹಲಿಯಲ್ಲಿ ಗುರುವಾರ 15.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಶುಕ್ರವಾರ ಗರಿಷ್ಠ 19.8 ಡಿಗ್ರಿ ಸೆಲ್ಸಿಯಸ್ ಮತ್ತು ಶನಿವಾರ 21.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಜಫಾರ್​ಪುರ್ ಕಳೆದ ಶುಕ್ರವಾರ ಕನಿಷ್ಠ 2.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡಿತ್ತು.

ನಗರದ ಗಾಳಿ ಗುಣಮಟ್ಟ ಸೂಚ್ಯಂಕವು (AQI) ಇಂದು ಬೆಳಗ್ಗೆ 9 ಗಂಟೆಯ ವರದಿಯಂತೆ 438 ಆಗಿದೆ. ಹಿಂದಿನ 24 ಗಂಟೆಗಳಲ್ಲಿ 418 AQI ದಾಖಲಾಗಿತ್ತು. ಸೋಮವಾರ 332 ಮತ್ತು ಭಾನುವಾರ 290 AQI ಕಂಡುಬಂದಿತ್ತು. ಈ ಮೂಲಕ ಗಾಳಿ ಗುಣಮಟ್ಟ ಸೂಚ್ಯಂಕದಲ್ಲಿ ಏರಿಕೆ ಕಾಣಬಹುದಾಗಿದೆ.

ದೆಹಲಿ ಚಳಿ! ಇನ್ನೂ ನಾಲ್ಕು ದಿನ ಮುಂದುವರಿಯಲಿದೆ 3-4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ

Published On - 12:30 pm, Wed, 23 December 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!