AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಚಳಿಚಳಿ: 3.4 ಡಿಗ್ರಿ ಸೆಲ್ಸಿಯಸ್​ಗೆ ಕುಸಿದ ಉಷ್ಣಾಂಶ, ನಡುಗಿದ ಜನ

ದೆಹಲಿಯಲ್ಲಿ ನಿನ್ನೆ 3.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇಂದು ಮತ್ತೆ 0.5ನಷ್ಟು ತಾಪಮಾನ ಕಡಿಮೆಯಾಗಿದೆ. ಜನರು ಚಳಿಯಲ್ಲಿ ನಡುಗುವಂತಾಗಿದೆ.

ದೆಹಲಿಯಲ್ಲಿ ಚಳಿಚಳಿ: 3.4 ಡಿಗ್ರಿ ಸೆಲ್ಸಿಯಸ್​ಗೆ ಕುಸಿದ ಉಷ್ಣಾಂಶ, ನಡುಗಿದ ಜನ
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Apr 06, 2022 | 11:31 PM

Share

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ, ಭಾನುವಾರ ಈ ವರ್ಷದ ಅತ್ಯಂತ ತೀವ್ರ ಚಳಿಯನ್ನು ಅನುಭವಿಸಿತು. ಇಂದು ಬೆಳಿಗ್ಗೆ ಉಷ್ಣಾಂಶವು ಈ ವರ್ಷದ ಅತ್ಯಂತ ಕನಿಷ್ಠ ಅಂದರೆ 3.4 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿತ್ತು.

ದೆಹಲಿಯಲ್ಲಿ ನಿನ್ನೆ 3.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇಂದು ಮತ್ತೆ 0.5ನಷ್ಟು ತಾಪಮಾನ ಕಡಿಮೆಯಾಗಿದೆ. ಜನರು ಚಳಿಯಲ್ಲಿ ನಡುಗುವಂತಾಗಿದೆ. ದೆಹಲಿಯ ಲೋಧಿ ರೋಡ್​ ಬಳಿ ಶೀತಗಾಳಿ ಬೀಸಿದ ಪರಿಣಾಮ ತಾಪಮಾನ 3.3 ಡಿಗ್ರಿ ಸೆಲ್ಸಿಯಸ್​ಗೂ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಪಶ್ಚಿಮ ಹಿಮಾಲಯ ಭಾಗದಿಂದ ಬೀಸಿದ ಗಾಳಿಯಿಂದ ಚಳಿ ಮತ್ತಷ್ಟು ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದೆಹಲಿಯಲ್ಲಿ ಗುರುವಾರ 15.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಶುಕ್ರವಾರ ಗರಿಷ್ಠ 19.8 ಡಿಗ್ರಿ ಸೆಲ್ಸಿಯಸ್ ಮತ್ತು ಶನಿವಾರ 21.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಜಫಾರ್​ಪುರ್ ಕಳೆದ ಶುಕ್ರವಾರ ಕನಿಷ್ಠ 2.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡಿತ್ತು. ಮುಂದಿನ ಐದಾರು ದಿನಗಳ ಕಾಲ, ದೆಹಲಿಯ ಕನಿಷ್ಠ ತಾಪಮಾನವು 5 ಡಿಗ್ರಿ ಸೆಲ್ಸಿಯಸ್​ನಷ್ಟು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜಸ್ಥಾನದ ಮೌಂಟ್ ಅಬು ಪ್ರದೇಶದಲ್ಲೂ ಶೀತಗಾಳಿಯ ಪರಿಣಾಮ ಮೈನಸ್ 1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಚಳಿ ಅನುಭವಿಸುತ್ತಿರುವ ಪ್ರವಾಸಿಗರು, ಮನಾಲಿಯಂಥಾ ಸ್ಥಳಗಳಲ್ಲಿ ನೋಡಬಹುದಾದ ಮಂಜುಗಡ್ಡೆಯನ್ನು ನಾವು ಇಲ್ಲಿ ಕಾಣುತ್ತಿದ್ದೇವೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲೂ ಜನರು ಅತಿಯಾದ ಚಳಿ ಅನುಭವಿಸುತ್ತಿದ್ದಾರೆ. ನಸುಕಿನಲ್ಲಿ ಕೆಲಸಕ್ಕೆ ತೊಡಗುವವರು ರಸ್ತೆ ಬದಿಗಳಲ್ಲಿ ಬೆಂಕಿಹಾಕಿ ಮೈಕಾಯಿಸಿಕೊಳ್ಳುತ್ತಿರುವ ದೃಶ್ಯಗಳನ್ನು ANI ಪ್ರಕಟಿಸಿದೆ.

ಚುಮು ಚುಮು ಚಳಿ, ಫಳಫಳ ಮಂಜು: ಸ್ವೆಟರ್ ತೊಟ್ಟ ಉತ್ತರ ಭಾರತ!

Published On - 4:15 pm, Sun, 20 December 20

ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್