AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ತಾಪಮಾನ ಕೇಳಿದರೇ ಚಳಿ ಹುಟ್ಟುತ್ತೆ! 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲು

ದೆಹಲಿ: ಕಳೆದ 14 ವರ್ಷಗಳಲ್ಲಿ ಕಂಡು ಕೇಳರಿಯದ ಚಳಿಗಾಲಕ್ಕೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಗಿದೆ. ದೆಹಲಿಯ ತಾಪಮಾನ ಇಂದು ಮುಂಜಾನೆ 1.1 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದ್ದು, ಕಳೆದ 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ಎಂಬ ಸ್ಥಾನಕ್ಕೆ ಇಂದಿನ ಬೆಳಗು ಪ್ರಾಪ್ತವಾಗಿದೆ. ಚಳಿಯ ಜತೆಗೆ ದಟ್ಟ ಮಂಜು ಸಹ ದೆಹಲಿಯ ಹೆದ್ದಾರಿಗಳನ್ನು ಆವರಿಸಿದೆ. 2006ರ ಜನವರಿ 8ರಂದು ಈವರೆಗಿನ ಅತಿ ಕಡಿಮೆ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈ ತಾಪಮಾನವೇ ದೆಹಲಿಯಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. […]

ದೆಹಲಿಯ ತಾಪಮಾನ ಕೇಳಿದರೇ ಚಳಿ ಹುಟ್ಟುತ್ತೆ! 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲು
2021ರ ಮೊದಲ ದಿನದ ಮುಂಜಾನೆ ಮಂಜು ಮುಸುಕಿದ ಹೆದ್ದಾರಿಯಲ್ಲಿ ಸಂಚರಿಸಲು ವಾಹನಗಳ ಪರದಾಟ
guruganesh bhat
| Edited By: ಸಾಧು ಶ್ರೀನಾಥ್​|

Updated on: Jan 01, 2021 | 11:50 AM

Share

ದೆಹಲಿ: ಕಳೆದ 14 ವರ್ಷಗಳಲ್ಲಿ ಕಂಡು ಕೇಳರಿಯದ ಚಳಿಗಾಲಕ್ಕೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಗಿದೆ. ದೆಹಲಿಯ ತಾಪಮಾನ ಇಂದು ಮುಂಜಾನೆ 1.1 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದ್ದು, ಕಳೆದ 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ಎಂಬ ಸ್ಥಾನಕ್ಕೆ ಇಂದಿನ ಬೆಳಗು ಪ್ರಾಪ್ತವಾಗಿದೆ.

ಚಳಿಯ ಜತೆಗೆ ದಟ್ಟ ಮಂಜು ಸಹ ದೆಹಲಿಯ ಹೆದ್ದಾರಿಗಳನ್ನು ಆವರಿಸಿದೆ. 2006ರ ಜನವರಿ 8ರಂದು ಈವರೆಗಿನ ಅತಿ ಕಡಿಮೆ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈ ತಾಪಮಾನವೇ ದೆಹಲಿಯಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. ಹಿಂದಿನ ವರ್ಷ 2.4 ಡಿಗ್ರಿ ಸೆಲ್ಸಿಯಸ್ ತಾಪಮಾನವೇ ಅತಿ ಕಡಿಮೆ ತಾಪಮಾನವಾಗಿತ್ತು.

ಅತಿ ಹೆಚ್ಚು ಮಂಜು ಆವರಿಸಿದಾದಗ 0 ದಿಂದ 50 ಮೀಟರ್​ವರೆಗಿನ ದೃಶ್ಯವನ್ನು ನೋಡಬಹುದು. ಆದರೆ ಇಂದು ಮುಂಜಾನೆ ಆರು ಘಂಟೆಯ ಮಂಜಿಗೆ ಕಿಂಚಿತ್ ದೂರವೂ ಕಣ್ಣಿಗೆ ಗೋಚರವಾಗುತ್ತಿರಲಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ಮುಖ್ಯಸ್ಥ ಕುಲ್ದೀಪ್ ಶ್ರೀವಾಸ್ತವ್ ತಿಳಿಸಿದ್ದಾರೆ. ಹಿಮಾಲಯದ ಕಡೆಯಿಂದ ಬೀಸುವ ಶೀತ ಮಾರುತಗಳು ಈ ಪ್ರಮಾಣದ ಚಳಿಯನ್ನು ಸೃಷ್ಟಿಸುತ್ತಿವೆ ಎಂದಿರುವ ಅವರು, ಜನವರಿ 5ರವರೆಗೆ ಸರಾಸರಿ 8 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ ಎಂದಿದ್ದಾರೆ.

ಈ ಡಿಸೆಂಬರ್​ನ ಕನಿಷ್ಠ ಸರಾಸರಿ ತಾಪಮಾನ 7.1ಡಿಗ್ರಿ ಸೆಲ್ಸಿಯಸ್​ ಆಗಿದ್ದರೆ 2019ರ ಡಿಸೆಂಬರ್​ನಲ್ಲಿ 7.8 ಡಿಗ್ರಿ ಕನಿಷ್ಠ ಸರಾಸರಿ ತಾಪಮಾನ ದಾಖಲಾಗಿತ್ತು.

ಚುಮು ಚುಮು ಚಳಿ, ಫಳಫಳ ಮಂಜು: ಸ್ವೆಟರ್ ತೊಟ್ಟ ಉತ್ತರ ಭಾರತ!

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ