AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ತಾಪಮಾನ ಕೇಳಿದರೇ ಚಳಿ ಹುಟ್ಟುತ್ತೆ! 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲು

ದೆಹಲಿ: ಕಳೆದ 14 ವರ್ಷಗಳಲ್ಲಿ ಕಂಡು ಕೇಳರಿಯದ ಚಳಿಗಾಲಕ್ಕೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಗಿದೆ. ದೆಹಲಿಯ ತಾಪಮಾನ ಇಂದು ಮುಂಜಾನೆ 1.1 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದ್ದು, ಕಳೆದ 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ಎಂಬ ಸ್ಥಾನಕ್ಕೆ ಇಂದಿನ ಬೆಳಗು ಪ್ರಾಪ್ತವಾಗಿದೆ. ಚಳಿಯ ಜತೆಗೆ ದಟ್ಟ ಮಂಜು ಸಹ ದೆಹಲಿಯ ಹೆದ್ದಾರಿಗಳನ್ನು ಆವರಿಸಿದೆ. 2006ರ ಜನವರಿ 8ರಂದು ಈವರೆಗಿನ ಅತಿ ಕಡಿಮೆ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈ ತಾಪಮಾನವೇ ದೆಹಲಿಯಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. […]

ದೆಹಲಿಯ ತಾಪಮಾನ ಕೇಳಿದರೇ ಚಳಿ ಹುಟ್ಟುತ್ತೆ! 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲು
2021ರ ಮೊದಲ ದಿನದ ಮುಂಜಾನೆ ಮಂಜು ಮುಸುಕಿದ ಹೆದ್ದಾರಿಯಲ್ಲಿ ಸಂಚರಿಸಲು ವಾಹನಗಳ ಪರದಾಟ
guruganesh bhat
| Updated By: ಸಾಧು ಶ್ರೀನಾಥ್​|

Updated on: Jan 01, 2021 | 11:50 AM

Share

ದೆಹಲಿ: ಕಳೆದ 14 ವರ್ಷಗಳಲ್ಲಿ ಕಂಡು ಕೇಳರಿಯದ ಚಳಿಗಾಲಕ್ಕೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಗಿದೆ. ದೆಹಲಿಯ ತಾಪಮಾನ ಇಂದು ಮುಂಜಾನೆ 1.1 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದ್ದು, ಕಳೆದ 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ಎಂಬ ಸ್ಥಾನಕ್ಕೆ ಇಂದಿನ ಬೆಳಗು ಪ್ರಾಪ್ತವಾಗಿದೆ.

ಚಳಿಯ ಜತೆಗೆ ದಟ್ಟ ಮಂಜು ಸಹ ದೆಹಲಿಯ ಹೆದ್ದಾರಿಗಳನ್ನು ಆವರಿಸಿದೆ. 2006ರ ಜನವರಿ 8ರಂದು ಈವರೆಗಿನ ಅತಿ ಕಡಿಮೆ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈ ತಾಪಮಾನವೇ ದೆಹಲಿಯಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. ಹಿಂದಿನ ವರ್ಷ 2.4 ಡಿಗ್ರಿ ಸೆಲ್ಸಿಯಸ್ ತಾಪಮಾನವೇ ಅತಿ ಕಡಿಮೆ ತಾಪಮಾನವಾಗಿತ್ತು.

ಅತಿ ಹೆಚ್ಚು ಮಂಜು ಆವರಿಸಿದಾದಗ 0 ದಿಂದ 50 ಮೀಟರ್​ವರೆಗಿನ ದೃಶ್ಯವನ್ನು ನೋಡಬಹುದು. ಆದರೆ ಇಂದು ಮುಂಜಾನೆ ಆರು ಘಂಟೆಯ ಮಂಜಿಗೆ ಕಿಂಚಿತ್ ದೂರವೂ ಕಣ್ಣಿಗೆ ಗೋಚರವಾಗುತ್ತಿರಲಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ಮುಖ್ಯಸ್ಥ ಕುಲ್ದೀಪ್ ಶ್ರೀವಾಸ್ತವ್ ತಿಳಿಸಿದ್ದಾರೆ. ಹಿಮಾಲಯದ ಕಡೆಯಿಂದ ಬೀಸುವ ಶೀತ ಮಾರುತಗಳು ಈ ಪ್ರಮಾಣದ ಚಳಿಯನ್ನು ಸೃಷ್ಟಿಸುತ್ತಿವೆ ಎಂದಿರುವ ಅವರು, ಜನವರಿ 5ರವರೆಗೆ ಸರಾಸರಿ 8 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ ಎಂದಿದ್ದಾರೆ.

ಈ ಡಿಸೆಂಬರ್​ನ ಕನಿಷ್ಠ ಸರಾಸರಿ ತಾಪಮಾನ 7.1ಡಿಗ್ರಿ ಸೆಲ್ಸಿಯಸ್​ ಆಗಿದ್ದರೆ 2019ರ ಡಿಸೆಂಬರ್​ನಲ್ಲಿ 7.8 ಡಿಗ್ರಿ ಕನಿಷ್ಠ ಸರಾಸರಿ ತಾಪಮಾನ ದಾಖಲಾಗಿತ್ತು.

ಚುಮು ಚುಮು ಚಳಿ, ಫಳಫಳ ಮಂಜು: ಸ್ವೆಟರ್ ತೊಟ್ಟ ಉತ್ತರ ಭಾರತ!

ಸರಳತೆ ಬಗ್ಗೆ ದೊಡ್ಮನೆ ನೋಡಿ ಕಲಿತಿದ್ದೇನೆ: ಜನಾರ್ದನ ರೆಡ್ಡಿ ಪುತ್ರ ಕಿರೀಟಿ
ಸರಳತೆ ಬಗ್ಗೆ ದೊಡ್ಮನೆ ನೋಡಿ ಕಲಿತಿದ್ದೇನೆ: ಜನಾರ್ದನ ರೆಡ್ಡಿ ಪುತ್ರ ಕಿರೀಟಿ
ಜುಲೈ 22ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ
ಜುಲೈ 22ಕ್ಕೆ ನಟ ದರ್ಶನ್ ಜಾಮೀನು ವಿಚಾರಣೆ ಮುಂದೂಡಿಕೆ
ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಪಾಕಿಸ್ತಾನದಲ್ಲಿ ಭಾರೀ ಪ್ರವಾಹ; 116 ಸಾವು, 253 ಜನರಿಗೆ ಗಾಯ
ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು
ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್