AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ತಾಪಮಾನ ಕೇಳಿದರೇ ಚಳಿ ಹುಟ್ಟುತ್ತೆ! 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲು

ದೆಹಲಿ: ಕಳೆದ 14 ವರ್ಷಗಳಲ್ಲಿ ಕಂಡು ಕೇಳರಿಯದ ಚಳಿಗಾಲಕ್ಕೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಗಿದೆ. ದೆಹಲಿಯ ತಾಪಮಾನ ಇಂದು ಮುಂಜಾನೆ 1.1 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದ್ದು, ಕಳೆದ 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ಎಂಬ ಸ್ಥಾನಕ್ಕೆ ಇಂದಿನ ಬೆಳಗು ಪ್ರಾಪ್ತವಾಗಿದೆ. ಚಳಿಯ ಜತೆಗೆ ದಟ್ಟ ಮಂಜು ಸಹ ದೆಹಲಿಯ ಹೆದ್ದಾರಿಗಳನ್ನು ಆವರಿಸಿದೆ. 2006ರ ಜನವರಿ 8ರಂದು ಈವರೆಗಿನ ಅತಿ ಕಡಿಮೆ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈ ತಾಪಮಾನವೇ ದೆಹಲಿಯಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. […]

ದೆಹಲಿಯ ತಾಪಮಾನ ಕೇಳಿದರೇ ಚಳಿ ಹುಟ್ಟುತ್ತೆ! 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲು
2021ರ ಮೊದಲ ದಿನದ ಮುಂಜಾನೆ ಮಂಜು ಮುಸುಕಿದ ಹೆದ್ದಾರಿಯಲ್ಲಿ ಸಂಚರಿಸಲು ವಾಹನಗಳ ಪರದಾಟ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Jan 01, 2021 | 11:50 AM

ದೆಹಲಿ: ಕಳೆದ 14 ವರ್ಷಗಳಲ್ಲಿ ಕಂಡು ಕೇಳರಿಯದ ಚಳಿಗಾಲಕ್ಕೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಗಿದೆ. ದೆಹಲಿಯ ತಾಪಮಾನ ಇಂದು ಮುಂಜಾನೆ 1.1 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದ್ದು, ಕಳೆದ 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ಎಂಬ ಸ್ಥಾನಕ್ಕೆ ಇಂದಿನ ಬೆಳಗು ಪ್ರಾಪ್ತವಾಗಿದೆ.

ಚಳಿಯ ಜತೆಗೆ ದಟ್ಟ ಮಂಜು ಸಹ ದೆಹಲಿಯ ಹೆದ್ದಾರಿಗಳನ್ನು ಆವರಿಸಿದೆ. 2006ರ ಜನವರಿ 8ರಂದು ಈವರೆಗಿನ ಅತಿ ಕಡಿಮೆ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈ ತಾಪಮಾನವೇ ದೆಹಲಿಯಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. ಹಿಂದಿನ ವರ್ಷ 2.4 ಡಿಗ್ರಿ ಸೆಲ್ಸಿಯಸ್ ತಾಪಮಾನವೇ ಅತಿ ಕಡಿಮೆ ತಾಪಮಾನವಾಗಿತ್ತು.

ಅತಿ ಹೆಚ್ಚು ಮಂಜು ಆವರಿಸಿದಾದಗ 0 ದಿಂದ 50 ಮೀಟರ್​ವರೆಗಿನ ದೃಶ್ಯವನ್ನು ನೋಡಬಹುದು. ಆದರೆ ಇಂದು ಮುಂಜಾನೆ ಆರು ಘಂಟೆಯ ಮಂಜಿಗೆ ಕಿಂಚಿತ್ ದೂರವೂ ಕಣ್ಣಿಗೆ ಗೋಚರವಾಗುತ್ತಿರಲಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ಮುಖ್ಯಸ್ಥ ಕುಲ್ದೀಪ್ ಶ್ರೀವಾಸ್ತವ್ ತಿಳಿಸಿದ್ದಾರೆ. ಹಿಮಾಲಯದ ಕಡೆಯಿಂದ ಬೀಸುವ ಶೀತ ಮಾರುತಗಳು ಈ ಪ್ರಮಾಣದ ಚಳಿಯನ್ನು ಸೃಷ್ಟಿಸುತ್ತಿವೆ ಎಂದಿರುವ ಅವರು, ಜನವರಿ 5ರವರೆಗೆ ಸರಾಸರಿ 8 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ ಎಂದಿದ್ದಾರೆ.

ಈ ಡಿಸೆಂಬರ್​ನ ಕನಿಷ್ಠ ಸರಾಸರಿ ತಾಪಮಾನ 7.1ಡಿಗ್ರಿ ಸೆಲ್ಸಿಯಸ್​ ಆಗಿದ್ದರೆ 2019ರ ಡಿಸೆಂಬರ್​ನಲ್ಲಿ 7.8 ಡಿಗ್ರಿ ಕನಿಷ್ಠ ಸರಾಸರಿ ತಾಪಮಾನ ದಾಖಲಾಗಿತ್ತು.

ಚುಮು ಚುಮು ಚಳಿ, ಫಳಫಳ ಮಂಜು: ಸ್ವೆಟರ್ ತೊಟ್ಟ ಉತ್ತರ ಭಾರತ!

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ