AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ತಾಪಮಾನ ಕೇಳಿದರೇ ಚಳಿ ಹುಟ್ಟುತ್ತೆ! 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲು

ದೆಹಲಿ: ಕಳೆದ 14 ವರ್ಷಗಳಲ್ಲಿ ಕಂಡು ಕೇಳರಿಯದ ಚಳಿಗಾಲಕ್ಕೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಗಿದೆ. ದೆಹಲಿಯ ತಾಪಮಾನ ಇಂದು ಮುಂಜಾನೆ 1.1 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದ್ದು, ಕಳೆದ 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ಎಂಬ ಸ್ಥಾನಕ್ಕೆ ಇಂದಿನ ಬೆಳಗು ಪ್ರಾಪ್ತವಾಗಿದೆ. ಚಳಿಯ ಜತೆಗೆ ದಟ್ಟ ಮಂಜು ಸಹ ದೆಹಲಿಯ ಹೆದ್ದಾರಿಗಳನ್ನು ಆವರಿಸಿದೆ. 2006ರ ಜನವರಿ 8ರಂದು ಈವರೆಗಿನ ಅತಿ ಕಡಿಮೆ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈ ತಾಪಮಾನವೇ ದೆಹಲಿಯಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. […]

ದೆಹಲಿಯ ತಾಪಮಾನ ಕೇಳಿದರೇ ಚಳಿ ಹುಟ್ಟುತ್ತೆ! 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ದಾಖಲು
2021ರ ಮೊದಲ ದಿನದ ಮುಂಜಾನೆ ಮಂಜು ಮುಸುಕಿದ ಹೆದ್ದಾರಿಯಲ್ಲಿ ಸಂಚರಿಸಲು ವಾಹನಗಳ ಪರದಾಟ
guruganesh bhat
| Edited By: |

Updated on: Jan 01, 2021 | 11:50 AM

Share

ದೆಹಲಿ: ಕಳೆದ 14 ವರ್ಷಗಳಲ್ಲಿ ಕಂಡು ಕೇಳರಿಯದ ಚಳಿಗಾಲಕ್ಕೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಗಿದೆ. ದೆಹಲಿಯ ತಾಪಮಾನ ಇಂದು ಮುಂಜಾನೆ 1.1 ಡಿಗ್ರಿ ಸೆಲ್ಸಿಯಸ್​ಗೆ ಕುಸಿದಿದ್ದು, ಕಳೆದ 14 ವರ್ಷಗಳಲ್ಲೇ ಅತಿ ಕಡಿಮೆ ತಾಪಮಾನ ಎಂಬ ಸ್ಥಾನಕ್ಕೆ ಇಂದಿನ ಬೆಳಗು ಪ್ರಾಪ್ತವಾಗಿದೆ.

ಚಳಿಯ ಜತೆಗೆ ದಟ್ಟ ಮಂಜು ಸಹ ದೆಹಲಿಯ ಹೆದ್ದಾರಿಗಳನ್ನು ಆವರಿಸಿದೆ. 2006ರ ಜನವರಿ 8ರಂದು ಈವರೆಗಿನ ಅತಿ ಕಡಿಮೆ 0.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಈ ತಾಪಮಾನವೇ ದೆಹಲಿಯಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. ಹಿಂದಿನ ವರ್ಷ 2.4 ಡಿಗ್ರಿ ಸೆಲ್ಸಿಯಸ್ ತಾಪಮಾನವೇ ಅತಿ ಕಡಿಮೆ ತಾಪಮಾನವಾಗಿತ್ತು.

ಅತಿ ಹೆಚ್ಚು ಮಂಜು ಆವರಿಸಿದಾದಗ 0 ದಿಂದ 50 ಮೀಟರ್​ವರೆಗಿನ ದೃಶ್ಯವನ್ನು ನೋಡಬಹುದು. ಆದರೆ ಇಂದು ಮುಂಜಾನೆ ಆರು ಘಂಟೆಯ ಮಂಜಿಗೆ ಕಿಂಚಿತ್ ದೂರವೂ ಕಣ್ಣಿಗೆ ಗೋಚರವಾಗುತ್ತಿರಲಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ಮುಖ್ಯಸ್ಥ ಕುಲ್ದೀಪ್ ಶ್ರೀವಾಸ್ತವ್ ತಿಳಿಸಿದ್ದಾರೆ. ಹಿಮಾಲಯದ ಕಡೆಯಿಂದ ಬೀಸುವ ಶೀತ ಮಾರುತಗಳು ಈ ಪ್ರಮಾಣದ ಚಳಿಯನ್ನು ಸೃಷ್ಟಿಸುತ್ತಿವೆ ಎಂದಿರುವ ಅವರು, ಜನವರಿ 5ರವರೆಗೆ ಸರಾಸರಿ 8 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ ಎಂದಿದ್ದಾರೆ.

ಈ ಡಿಸೆಂಬರ್​ನ ಕನಿಷ್ಠ ಸರಾಸರಿ ತಾಪಮಾನ 7.1ಡಿಗ್ರಿ ಸೆಲ್ಸಿಯಸ್​ ಆಗಿದ್ದರೆ 2019ರ ಡಿಸೆಂಬರ್​ನಲ್ಲಿ 7.8 ಡಿಗ್ರಿ ಕನಿಷ್ಠ ಸರಾಸರಿ ತಾಪಮಾನ ದಾಖಲಾಗಿತ್ತು.

ಚುಮು ಚುಮು ಚಳಿ, ಫಳಫಳ ಮಂಜು: ಸ್ವೆಟರ್ ತೊಟ್ಟ ಉತ್ತರ ಭಾರತ!

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ