AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ತೀವ್ರ ಚಳಿ: ಕನಿಷ್ಠ ತಾಪಮಾನಕ್ಕೆ ಮಂಜುಗಡ್ಡೆಯಂತಾದ ದಾಲ್ ಸರೋವರ

ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. 1995ರಲ್ಲಿ ಶ್ರೀನಗರದಲ್ಲಿ ಮೈನಸ್ 8.3 ತಾಪಮಾನ ದಾಖಲಾಗಿದ್ದು 1991ರಲ್ಲಿ ಮೈನಸ್ 11.3 ಡಿಗ್ರಿ ಸೆಲ್ಶಿಯಸ್ ಆಗಿತ್ತು

ಕಾಶ್ಮೀರದಲ್ಲಿ ತೀವ್ರ ಚಳಿ: ಕನಿಷ್ಠ ತಾಪಮಾನಕ್ಕೆ ಮಂಜುಗಡ್ಡೆಯಂತಾದ ದಾಲ್ ಸರೋವರ
ದಾಲ್ ಸರೋವರ
ರಶ್ಮಿ ಕಲ್ಲಕಟ್ಟ
|

Updated on:Jan 14, 2021 | 4:42 PM

Share

ಶ್ರೀನಗರ: ಕಾಶ್ಮೀರದಲ್ಲಿ 30 ವರ್ಷಗಳಲ್ಲಿ ಅತೀ ತೀವ್ರ ಚಳಿ ದಾಖಲಾಗಿದ್ದು ಇಲ್ಲಿನ ಪ್ರಸಿದ್ಧ ದಾಲ್ ಸರೋವರ ಭಾಗಶಃ ಮಂಜುಗಡ್ಡೆಯಂತಾಗಿದೆ.

ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. 1995 ರಲ್ಲಿ ಶ್ರೀನಗರದಲ್ಲಿ ಮೈನಸ್ 8.3 ತಾಪಮಾನ ದಾಖಲಾಗಿದ್ದು 1991 ರಲ್ಲಿ ಮೈನಸ್ 11.3 ಡಿಗ್ರಿ ಸೆಲ್ಶಿಯಸ್ ಆಗಿತ್ತು. 1893 ರಲ್ಲಿ ಮೈನಸ್ 14.4 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇತರ ಸರೋವರಗಳು ಕೂಡಾ ಇದೇ ರೀತಿ ಮಂಜುಗಡ್ಡೆಯಂತಾಗಿದೆ.

ಪಹಲ್​ಗಮ್ ಟೂರಿಸ್ಟ್ ರೆಸಾರ್ಟ್​ನಲ್ಲಿ ಮೈನಸ್ 11.1 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅತೀ ಹೆಚ್ಚು ಚಳಿ ಇರುವ ಪ್ರದೇಶವಾಗಿದೆ ಇದು.

ಗುಲ್ಮಾರ್ಗ್ ಟೂರಿಸ್ಟ್ ರೆಸಾರ್ಟ್​ನಲ್ಲಿ ಮೈನಸ್ 7 ಡಿಗ್ರಿಸೆಲ್ಶಿಯಸ್ ದಾಖಲಾಗಿದ್ದು, ಕ್ವಾಜಿಗುಂಡ್​ ನಲ್ಲಿ ಮೈನಸ್ 10 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ.

ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಮೈನಸ್ 6.7 ಡಿಗ್ರಿ ಸೆಲ್ಶಿಯಸ್ ಮತ್ತು ದಕ್ಷಿಣ ಭಾಗದ ಕೊಕೆರ್ನಾಗ್ ನಲ್ಲಿ 10.3 ಡಿಗ್ರಿ ಸೆಲ್ಶಿಯಸ್ ಉಷ್ಣತೆ ದಾಖಲಾಗಿದೆ. ಕನಿಷ್ಠ ತಾಪಮಾನದಿಂದಾಗಿ ಪೈಪ್ ನೀರು ಕೂಡಾ ಹೆಪ್ಪುಗಟ್ಟಿದ್ದು ರಸ್ತೆಯೂ ಮಂಜಿನ ಹೊದಿಕೆ ಹೊದ್ದುಕೊಂಡಿದೆ.

ಭಾರೀ ಹಿಮಪಾತ; ಕಾಶ್ಮೀರದಲ್ಲಿ ವಾಹನ ಸಂಚಾರ ಸ್ಥಗಿತ

Published On - 4:33 pm, Thu, 14 January 21

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?