AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ತೀವ್ರ ಚಳಿ: ಕನಿಷ್ಠ ತಾಪಮಾನಕ್ಕೆ ಮಂಜುಗಡ್ಡೆಯಂತಾದ ದಾಲ್ ಸರೋವರ

ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. 1995ರಲ್ಲಿ ಶ್ರೀನಗರದಲ್ಲಿ ಮೈನಸ್ 8.3 ತಾಪಮಾನ ದಾಖಲಾಗಿದ್ದು 1991ರಲ್ಲಿ ಮೈನಸ್ 11.3 ಡಿಗ್ರಿ ಸೆಲ್ಶಿಯಸ್ ಆಗಿತ್ತು

ಕಾಶ್ಮೀರದಲ್ಲಿ ತೀವ್ರ ಚಳಿ: ಕನಿಷ್ಠ ತಾಪಮಾನಕ್ಕೆ ಮಂಜುಗಡ್ಡೆಯಂತಾದ ದಾಲ್ ಸರೋವರ
ದಾಲ್ ಸರೋವರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 14, 2021 | 4:42 PM

Share

ಶ್ರೀನಗರ: ಕಾಶ್ಮೀರದಲ್ಲಿ 30 ವರ್ಷಗಳಲ್ಲಿ ಅತೀ ತೀವ್ರ ಚಳಿ ದಾಖಲಾಗಿದ್ದು ಇಲ್ಲಿನ ಪ್ರಸಿದ್ಧ ದಾಲ್ ಸರೋವರ ಭಾಗಶಃ ಮಂಜುಗಡ್ಡೆಯಂತಾಗಿದೆ.

ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. 1995 ರಲ್ಲಿ ಶ್ರೀನಗರದಲ್ಲಿ ಮೈನಸ್ 8.3 ತಾಪಮಾನ ದಾಖಲಾಗಿದ್ದು 1991 ರಲ್ಲಿ ಮೈನಸ್ 11.3 ಡಿಗ್ರಿ ಸೆಲ್ಶಿಯಸ್ ಆಗಿತ್ತು. 1893 ರಲ್ಲಿ ಮೈನಸ್ 14.4 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇತರ ಸರೋವರಗಳು ಕೂಡಾ ಇದೇ ರೀತಿ ಮಂಜುಗಡ್ಡೆಯಂತಾಗಿದೆ.

ಪಹಲ್​ಗಮ್ ಟೂರಿಸ್ಟ್ ರೆಸಾರ್ಟ್​ನಲ್ಲಿ ಮೈನಸ್ 11.1 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅತೀ ಹೆಚ್ಚು ಚಳಿ ಇರುವ ಪ್ರದೇಶವಾಗಿದೆ ಇದು.

ಗುಲ್ಮಾರ್ಗ್ ಟೂರಿಸ್ಟ್ ರೆಸಾರ್ಟ್​ನಲ್ಲಿ ಮೈನಸ್ 7 ಡಿಗ್ರಿಸೆಲ್ಶಿಯಸ್ ದಾಖಲಾಗಿದ್ದು, ಕ್ವಾಜಿಗುಂಡ್​ ನಲ್ಲಿ ಮೈನಸ್ 10 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ.

ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಮೈನಸ್ 6.7 ಡಿಗ್ರಿ ಸೆಲ್ಶಿಯಸ್ ಮತ್ತು ದಕ್ಷಿಣ ಭಾಗದ ಕೊಕೆರ್ನಾಗ್ ನಲ್ಲಿ 10.3 ಡಿಗ್ರಿ ಸೆಲ್ಶಿಯಸ್ ಉಷ್ಣತೆ ದಾಖಲಾಗಿದೆ. ಕನಿಷ್ಠ ತಾಪಮಾನದಿಂದಾಗಿ ಪೈಪ್ ನೀರು ಕೂಡಾ ಹೆಪ್ಪುಗಟ್ಟಿದ್ದು ರಸ್ತೆಯೂ ಮಂಜಿನ ಹೊದಿಕೆ ಹೊದ್ದುಕೊಂಡಿದೆ.

ಭಾರೀ ಹಿಮಪಾತ; ಕಾಶ್ಮೀರದಲ್ಲಿ ವಾಹನ ಸಂಚಾರ ಸ್ಥಗಿತ

Published On - 4:33 pm, Thu, 14 January 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ