AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ತೀವ್ರ ಚಳಿ: ಕನಿಷ್ಠ ತಾಪಮಾನಕ್ಕೆ ಮಂಜುಗಡ್ಡೆಯಂತಾದ ದಾಲ್ ಸರೋವರ

ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. 1995ರಲ್ಲಿ ಶ್ರೀನಗರದಲ್ಲಿ ಮೈನಸ್ 8.3 ತಾಪಮಾನ ದಾಖಲಾಗಿದ್ದು 1991ರಲ್ಲಿ ಮೈನಸ್ 11.3 ಡಿಗ್ರಿ ಸೆಲ್ಶಿಯಸ್ ಆಗಿತ್ತು

ಕಾಶ್ಮೀರದಲ್ಲಿ ತೀವ್ರ ಚಳಿ: ಕನಿಷ್ಠ ತಾಪಮಾನಕ್ಕೆ ಮಂಜುಗಡ್ಡೆಯಂತಾದ ದಾಲ್ ಸರೋವರ
ದಾಲ್ ಸರೋವರ
Follow us
ರಶ್ಮಿ ಕಲ್ಲಕಟ್ಟ
|

Updated on:Jan 14, 2021 | 4:42 PM

ಶ್ರೀನಗರ: ಕಾಶ್ಮೀರದಲ್ಲಿ 30 ವರ್ಷಗಳಲ್ಲಿ ಅತೀ ತೀವ್ರ ಚಳಿ ದಾಖಲಾಗಿದ್ದು ಇಲ್ಲಿನ ಪ್ರಸಿದ್ಧ ದಾಲ್ ಸರೋವರ ಭಾಗಶಃ ಮಂಜುಗಡ್ಡೆಯಂತಾಗಿದೆ.

ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. 1995 ರಲ್ಲಿ ಶ್ರೀನಗರದಲ್ಲಿ ಮೈನಸ್ 8.3 ತಾಪಮಾನ ದಾಖಲಾಗಿದ್ದು 1991 ರಲ್ಲಿ ಮೈನಸ್ 11.3 ಡಿಗ್ರಿ ಸೆಲ್ಶಿಯಸ್ ಆಗಿತ್ತು. 1893 ರಲ್ಲಿ ಮೈನಸ್ 14.4 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇತರ ಸರೋವರಗಳು ಕೂಡಾ ಇದೇ ರೀತಿ ಮಂಜುಗಡ್ಡೆಯಂತಾಗಿದೆ.

ಪಹಲ್​ಗಮ್ ಟೂರಿಸ್ಟ್ ರೆಸಾರ್ಟ್​ನಲ್ಲಿ ಮೈನಸ್ 11.1 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅತೀ ಹೆಚ್ಚು ಚಳಿ ಇರುವ ಪ್ರದೇಶವಾಗಿದೆ ಇದು.

ಗುಲ್ಮಾರ್ಗ್ ಟೂರಿಸ್ಟ್ ರೆಸಾರ್ಟ್​ನಲ್ಲಿ ಮೈನಸ್ 7 ಡಿಗ್ರಿಸೆಲ್ಶಿಯಸ್ ದಾಖಲಾಗಿದ್ದು, ಕ್ವಾಜಿಗುಂಡ್​ ನಲ್ಲಿ ಮೈನಸ್ 10 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ.

ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಮೈನಸ್ 6.7 ಡಿಗ್ರಿ ಸೆಲ್ಶಿಯಸ್ ಮತ್ತು ದಕ್ಷಿಣ ಭಾಗದ ಕೊಕೆರ್ನಾಗ್ ನಲ್ಲಿ 10.3 ಡಿಗ್ರಿ ಸೆಲ್ಶಿಯಸ್ ಉಷ್ಣತೆ ದಾಖಲಾಗಿದೆ. ಕನಿಷ್ಠ ತಾಪಮಾನದಿಂದಾಗಿ ಪೈಪ್ ನೀರು ಕೂಡಾ ಹೆಪ್ಪುಗಟ್ಟಿದ್ದು ರಸ್ತೆಯೂ ಮಂಜಿನ ಹೊದಿಕೆ ಹೊದ್ದುಕೊಂಡಿದೆ.

ಭಾರೀ ಹಿಮಪಾತ; ಕಾಶ್ಮೀರದಲ್ಲಿ ವಾಹನ ಸಂಚಾರ ಸ್ಥಗಿತ

Published On - 4:33 pm, Thu, 14 January 21

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಐಪಿಎಲ್ ಫೈನಲ್ಸ್​ಗೆ ಮೇ 4 ಮೀಸಲಿಟ್ಟ ದಿನ, ಆಟ ನಾಳೆ ನಡೆಯುತ್ತದೆ!
ಐಪಿಎಲ್ ಫೈನಲ್ಸ್​ಗೆ ಮೇ 4 ಮೀಸಲಿಟ್ಟ ದಿನ, ಆಟ ನಾಳೆ ನಡೆಯುತ್ತದೆ!