AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ತೀವ್ರ ಚಳಿ: ಕನಿಷ್ಠ ತಾಪಮಾನಕ್ಕೆ ಮಂಜುಗಡ್ಡೆಯಂತಾದ ದಾಲ್ ಸರೋವರ

ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. 1995ರಲ್ಲಿ ಶ್ರೀನಗರದಲ್ಲಿ ಮೈನಸ್ 8.3 ತಾಪಮಾನ ದಾಖಲಾಗಿದ್ದು 1991ರಲ್ಲಿ ಮೈನಸ್ 11.3 ಡಿಗ್ರಿ ಸೆಲ್ಶಿಯಸ್ ಆಗಿತ್ತು

ಕಾಶ್ಮೀರದಲ್ಲಿ ತೀವ್ರ ಚಳಿ: ಕನಿಷ್ಠ ತಾಪಮಾನಕ್ಕೆ ಮಂಜುಗಡ್ಡೆಯಂತಾದ ದಾಲ್ ಸರೋವರ
ದಾಲ್ ಸರೋವರ
ರಶ್ಮಿ ಕಲ್ಲಕಟ್ಟ
|

Updated on:Jan 14, 2021 | 4:42 PM

Share

ಶ್ರೀನಗರ: ಕಾಶ್ಮೀರದಲ್ಲಿ 30 ವರ್ಷಗಳಲ್ಲಿ ಅತೀ ತೀವ್ರ ಚಳಿ ದಾಖಲಾಗಿದ್ದು ಇಲ್ಲಿನ ಪ್ರಸಿದ್ಧ ದಾಲ್ ಸರೋವರ ಭಾಗಶಃ ಮಂಜುಗಡ್ಡೆಯಂತಾಗಿದೆ.

ಶ್ರೀನಗರದಲ್ಲಿ ಕನಿಷ್ಠ ತಾಪಮಾನ ಮೈನಸ್ 8.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿದೆ. 1995 ರಲ್ಲಿ ಶ್ರೀನಗರದಲ್ಲಿ ಮೈನಸ್ 8.3 ತಾಪಮಾನ ದಾಖಲಾಗಿದ್ದು 1991 ರಲ್ಲಿ ಮೈನಸ್ 11.3 ಡಿಗ್ರಿ ಸೆಲ್ಶಿಯಸ್ ಆಗಿತ್ತು. 1893 ರಲ್ಲಿ ಮೈನಸ್ 14.4 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇತರ ಸರೋವರಗಳು ಕೂಡಾ ಇದೇ ರೀತಿ ಮಂಜುಗಡ್ಡೆಯಂತಾಗಿದೆ.

ಪಹಲ್​ಗಮ್ ಟೂರಿಸ್ಟ್ ರೆಸಾರ್ಟ್​ನಲ್ಲಿ ಮೈನಸ್ 11.1 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಅತೀ ಹೆಚ್ಚು ಚಳಿ ಇರುವ ಪ್ರದೇಶವಾಗಿದೆ ಇದು.

ಗುಲ್ಮಾರ್ಗ್ ಟೂರಿಸ್ಟ್ ರೆಸಾರ್ಟ್​ನಲ್ಲಿ ಮೈನಸ್ 7 ಡಿಗ್ರಿಸೆಲ್ಶಿಯಸ್ ದಾಖಲಾಗಿದ್ದು, ಕ್ವಾಜಿಗುಂಡ್​ ನಲ್ಲಿ ಮೈನಸ್ 10 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ.

ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಮೈನಸ್ 6.7 ಡಿಗ್ರಿ ಸೆಲ್ಶಿಯಸ್ ಮತ್ತು ದಕ್ಷಿಣ ಭಾಗದ ಕೊಕೆರ್ನಾಗ್ ನಲ್ಲಿ 10.3 ಡಿಗ್ರಿ ಸೆಲ್ಶಿಯಸ್ ಉಷ್ಣತೆ ದಾಖಲಾಗಿದೆ. ಕನಿಷ್ಠ ತಾಪಮಾನದಿಂದಾಗಿ ಪೈಪ್ ನೀರು ಕೂಡಾ ಹೆಪ್ಪುಗಟ್ಟಿದ್ದು ರಸ್ತೆಯೂ ಮಂಜಿನ ಹೊದಿಕೆ ಹೊದ್ದುಕೊಂಡಿದೆ.

ಭಾರೀ ಹಿಮಪಾತ; ಕಾಶ್ಮೀರದಲ್ಲಿ ವಾಹನ ಸಂಚಾರ ಸ್ಥಗಿತ

Published On - 4:33 pm, Thu, 14 January 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ