AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coldrif Syrup Ban: ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟ ನಿಷೇಧಿಸಿದ ದೆಹಲಿ ಸರ್ಕಾರ

ದೆಹಲಿ ಸರ್ಕಾರವು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟವನ್ನು ನಿಷೇಧಿಸಿದೆ. ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 20 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬಳಿಕ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ದೆಹಲಿಯಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಅನ್ನು ಸರ್ಕಾರ ನಿಷೇಧಿಸಿದೆ. ಇದರರ್ಥ ರಾಜಧಾನಿಯಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟ ಮತ್ತು ಖರೀದಿಯನ್ನು ಈಗ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Coldrif Syrup Ban: ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟ ನಿಷೇಧಿಸಿದ ದೆಹಲಿ ಸರ್ಕಾರ
ಸಿರಪ್
ನಯನಾ ರಾಜೀವ್
|

Updated on: Oct 11, 2025 | 11:38 AM

Share

ನವದೆಹಲಿ, ಅಕ್ಟೋಬರ್ 11: ದೆಹಲಿ ಸರ್ಕಾರವು ಕೋಲ್ಡ್ರಿಫ್ ಕೆಮ್ಮಿನ ಸಿರಪ್(Cough Syrup) ಮಾರಾಟವನ್ನು ನಿಷೇಧಿಸಿದೆ. ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 20 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ ಬಳಿಕ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ದೆಹಲಿಯಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಅನ್ನು ಸರ್ಕಾರ ನಿಷೇಧಿಸಿದೆ. ಇದರರ್ಥ ರಾಜಧಾನಿಯಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟ ಮತ್ತು ಖರೀದಿಯನ್ನು ಈಗ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮಧ್ಯಪ್ರದೇಶದಲ್ಲಿ ನಡೆದ ತನಿಖೆಯ ಸಮಯದಲ್ಲಿ, ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಗುಣಮಟ್ಟವಿಲ್ಲದ ಮತ್ತು ಕಳಪೆ ಗುಣಮಟ್ಟದ್ದಾಗಿದೆ ಎಂಬುದು ಕಂಡುಬಂದಿದೆ ಮತ್ತು ಆದ್ದರಿಂದ, ಈ ಕೆಮ್ಮಿನ ಸಿರಪ್ ಅನ್ನು ದೆಹಲಿಯಲ್ಲಿಯೂ ಸಂಪೂರ್ಣವಾಗಿ ನಿಷೇಧಿಸಲಾಗುತ್ತಿದೆ ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಹಲವು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ.

ಮಕ್ಕಳಿಗೆ ನೆಗಡಿ, ಕೆಮ್ಮು ಕಾಣಿಸಿಕೊಂಡ ಬಳಿಕ ಪೋಷಕರು ಅವರನ್ನು ವೈದ್ಯರ ಬಳಿಗೆ ಕರೆದೊಯ್ದಿದ್ದರು, ವೈದ್ಯರು ಕೋಲ್ಡ್ರಿಫ್ ಸಿರಪ್ ಅನ್ನು ನೀಡಿದ್ದರು. ಅದನ್ನು ಸೇವಿಸಿದ ಬಳಿಕ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. 20 ಮಕ್ಕಳು ಇದುವರೆಗೆ ಪ್ರಾಣ ಕಳೆದುಕೊಂಡಿದ್ದಾರೆ.

ಮತ್ತಷ್ಟು ಓದಿ: ಕರ್ನಾಟಕದಲ್ಲಿಯೂ 2 ಕೆಮ್ಮಿನ ಸಿರಪ್​​ ಅಸುರಕ್ಷಿತ: ಆರೋಗ್ಯ ಇಲಾಖೆ ಕೈಸೇರಿದೆ ಬೆಚ್ಚಿಬೀಳಿಸುವ ವರದಿ

ದೆಹಲಿ ಈಗಾಗಲೇ ನಾಲ್ಕು ವರ್ಷದೊಳಗಿನ ಮಕ್ಕಳಿಗೆ ಡೆಕ್ಸ್ಟ್ರೋಮೆಥೋರ್ಫಾನ್ ಹೈಡ್ರೋಬ್ರೋಮೈಡ್ ಕೆಮ್ಮಿನ ಸಿರಪ್ ಅನ್ನು ಶಿಫಾರಸು ಮಾಡುವುದನ್ನು ನಿಷೇಧಿಸಿದೆ. ಮೊಹಲ್ಲಾ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಕೆಲವು ಮಕ್ಕಳು ಅನಾರೋಗ್ಯಕ್ಕೆ ಒಳಗಾದ ನಂತರ ಮತ್ತು ಮೂವರು ಸಾವನ್ನಪ್ಪಿದ ನಂತರ 2021 ರಲ್ಲಿ ಈ ಆದೇಶವನ್ನು ಹೊರಡಿಸಲಾಯಿತು. ತನಿಖೆಯು ಸಿರಪ್ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು.

ವರದಿಯ ನಂತರ, ಕೇಂದ್ರ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶಕರು (DGHS) ನಾಲ್ಕು ವರ್ಷದೊಳಗಿನ ಮಕ್ಕಳಿಗೆ ಈ ಸಿರಪ್ ಅನ್ನು ಶಿಫಾರಸು ಮಾಡದಂತೆ ದೆಹಲಿ ಸರ್ಕಾರದ DGHS ಗೆ ನಿರ್ದೇಶನ ನೀಡಿದರು.ಡಿಸೆಂಬರ್ 7, 2021 ರಂದು, ಕೇಂದ್ರ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ (DGHS) ದೆಹಲಿ ಸರ್ಕಾರಕ್ಕೆ ಪತ್ರವೊಂದನ್ನು ಕಳುಹಿಸಿದ್ದು, ಕಲಾವತಿ ಸರನ್ ಆಸ್ಪತ್ರೆಯಲ್ಲಿ ಈ ಸಿರಪ್‌ಗೆ ಸಂಬಂಧಿಸಿದ 16 ಪ್ರಕರಣಗಳು ವರದಿಯಾಗಿವೆ ಮತ್ತು ಅದರಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ.

ಮಕ್ಕಳ ವಿಭಾಗದ ಮಕ್ಕಳಿಗೆ ಈ ಸಿರಪ್ ಅನ್ನು ಶಿಫಾರಸು ಮಾಡದಿದ್ದರೂ, ಈ ಮಕ್ಕಳಿಗೆ ಮೊಹಲ್ಲಾ ಚಿಕಿತ್ಸಾಲಯದಲ್ಲಿ ಈ ಸಿರಪ್ ಅನ್ನು ಶಿಫಾರಸು ಮಾಡಲಾಗಿದೆ ಎಂದು ವರದಿಯಾಗಿದೆ. ಇದರ ನಂತರ, ದೆಹಲಿಯ ಎಲ್ಲಾ ಮೊಹಲ್ಲಾ ಚಿಕಿತ್ಸಾಲಯಗಳು ಮತ್ತು ಔಷಧಾಲಯಗಳಿಗೆ ನಾಲ್ಕು ವರ್ಷದೊಳಗಿನ ಮಕ್ಕಳಿಗೆ ಈ ಸಿರಪ್ ನೀಡದಂತೆ ಆದೇಶ ಹೊರಡಿಸಲಾಯಿತು. ತಮಿಳುನಾಡು ಹಾಗೂ ಕೇರಳದಲ್ಲಿ ಈ ಸಿರಪ್ ನಿಷೇಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ