ಚೆನ್ನೈನ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ

ಚೆನ್ನೈನಲ್ಲಿ 22 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ, ಪ್ರಜ್ಞೆ ತಪ್ಪಿಸಿ, ಅತ್ಯಾಚಾರವೆಸಗಿದ ಒಂದು ಗ್ಯಾಂಗ್ ನಂತರ ಆಕೆಯನ್ನು ರಸ್ತೆಯಲ್ಲಿ ಬಿಟ್ಟು ಹೋಗಿದ್ದಾರೆ. ತಿರುಚ್ಚಿ ಮೂಲದ ಅಂತಿಮ ವರ್ಷದ ಬಿಟೆಕ್ ವಿದ್ಯಾರ್ಥಿನಿ, ಎರಡು ವಾರಗಳ ಹಿಂದೆ ನಗರದ ಕೇಂದ್ರೀಯ ಸಂಸ್ಥೆಯೊಂದರಲ್ಲಿ ಪ್ರಾಜೆಕ್ಟ್ ಕೆಲಸ ಮಾಡಲು ಚೆನ್ನೈಗೆ ಬಂದಿದ್ದರು. ಆಗ ಈ ಘಟನೆ ನಡೆದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಚೆನ್ನೈನ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ
Woman Harassment

Updated on: Mar 12, 2026 | 4:16 PM

ಚೆನ್ನೈ, ಮಾರ್ಚ್ 12: ತಮಿಳುನಾಡಿನ ತಿರುಚ್ಚಿಯಿಂದ ಪ್ರಾಜೆಕ್ಟ್‌ಗಾಗಿ ಬಂದಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಪಹರಿಸಿದ ಗ್ಯಾಂಗ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚೆನ್ನೈನಲ್ಲಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಯುವತಿ ಅಭಿರಾಮಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಆರಂಭವಾಗಿದೆ.

ಆ ವಿದ್ಯಾರ್ಥಿನಿ ಫೆಬ್ರವರಿ 14ರಂದು ತಿರುಚ್ಚಿಯಿಂದ ಪ್ರಾಜೆಕ್ಟ್‌ಗಾಗಿ ಚೆನ್ನೈಗೆ ಬಂದಿದ್ದರು. ಬಂದ ಕೆಲವೇ ದಿನಗಳಲ್ಲಿ, ಕೆಲವು ವ್ಯಕ್ತಿಗಳು ಆಕೆಯ ಫೋಟೋವನ್ನು ಮಾರ್ಫ್ ಮಾಡಿ ವಾಟ್ಸಾಪ್ ಮೂಲಕ ಕಳುಹಿಸಿದ್ದರು. ಬಳಿಕ, 4 ಜನರ ತಂಡ ಆಕೆಯನ್ನು ಅಡ್ಯಾರ್‌ನ ಖಾಸಗಿ ಹಾಸ್ಟೆಲ್‌ನಿಂದ ಅಪಹರಿಸಿದ್ದರು. ಅವರು ಆ ವಿದ್ಯಾರ್ಥಿನಿಯ ಮುಖಕ್ಕೆ ನಿದ್ರಾಜನಕ ಪುಡಿಯನ್ನು ಹಚ್ಚಿ, ಪ್ರಜ್ಞೆ ತಪ್ಪಿಸಿ ಒಂದು ಗಂಟೆಯ ನಂತರ ಬೇರೆ ಸ್ಥಳದಲ್ಲಿ ಬಿಟ್ಟು ಹೋಗಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮನೆಯಲ್ಲಿ ಮಲಗಿದ್ದ ಮಗುವನ್ನು ಅಪಹರಿಸಿ, ಅತ್ಯಾಚಾರ ಮಾಡಿ, ಎಸೆದು ಹೋದ ಪಾಪಿಗಳು

ಕಾಲೇಜು ವಿದ್ಯಾರ್ಥಿನಿಯ ದೂರಿನ ನಂತರ ಅಭಿರಾಮಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಘಟನೆಯ ನಂತರ, ವಿದ್ಯಾರ್ಥಿನಿ ತನ್ನ ಆರೋಗ್ಯದಲ್ಲಿ ಬದಲಾವಣೆಗಳನ್ನು ಗಮನಿಸಿದರು. ಮಾರ್ಚ್ 10ರ ಸಂಜೆ ಚಿಕಿತ್ಸೆಗಾಗಿ ಅಡ್ಯಾರ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟರು. ಆಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ, ಆ ಗ್ಯಾಂಗ್ ಆಕೆಯನ್ನು ಮತ್ತೆ ಕಾರಿನಲ್ಲಿ ಅಪಹರಿಸಿತು. ಪೊಲೀಸರಿಗೆ ಮಾಹಿತಿ ನೀಡಿದರೆ ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ಬಳಿಕ ಅವರು ಆಕೆಯ ಮೇಲೆ ಅತ್ಯಾಚಾರ ನಡೆಸಿದರು.

ಇದನ್ನೂ ಓದಿ: ಕಾಲೇಜು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಕೇಸ್​​: ತನಿಖೆ ವೇಳೆ ಸಿಸಿಟಿವಿ ರಹಸ್ಯ ಬಯಲು

ಸೋಮವಾರ ಸಂಜೆ ಕೊಟ್ಟೂರುಪುರಂ ಪೊಲೀಸ್ ವ್ಯಾಪ್ತಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಗ್ಯಾಂಗ್ ಒಂದು ಆಕೆಯನ್ನು ಕಾರಿನಲ್ಲಿ ಅಪಹರಿಸಿದೆ ಎಂದು ಆರೋಪಿಸಲಾಗಿದೆ. ದೂರು ನೀಡಿದ ಯುವತಿ ತಾನು ಪ್ರಜ್ಞೆ ಕಳೆದುಕೊಂಡು ಸುಮಾರು 1 ಗಂಟೆಯ ನಂತರ ಬಿಟ್ಟು ಹೋಗಿರುವುದಾಗಿ ಹೇಳಿದ್ದಾರೆ. ಮಹಿಳಾ ಮತ್ತು ಮಕ್ಕಳ ವಿರುದ್ಧದ ಅಪರಾಧ (CAWC) ವಿಭಾಗವು ದೂರಿನ ತನಿಖೆ ನಡೆಸುತ್ತಿದೆ. “ಮಹಿಳೆ ಅಪಹರಣಕ್ಕೊಳಗಾಗಿರುವುದಾಗಿ ಹೇಳಿರುವ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ನಾವು ಪರಿಶೀಲಿಸುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us