AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಜಮ್ಮು, ಕಾಶ್ಮೀರ ಹಾಗೂ ಲಡಾಖ್​ ಪ್ರತ್ಯೇಕ: WHO ಪ್ರಮಾದಕ್ಕೆ ಭಾರತೀಯರು ಗರಂ

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಪ್ರಾಂತ್ಯವನ್ನು ಭಾರತ ಇತ್ತೀಚೆಗಷ್ಟೇ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸಿದೆ. ಆದರೆ, ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿರುವ ಭೂಪಟದಲ್ಲಿ ಇಡೀ ದೇಶಕ್ಕೆ ಒಂದು ಬಣ್ಣ ನೀಡಿದ್ದರೆ, ಈ ಪ್ರಾಂತ್ಯಗಳನ್ನು ಮಾತ್ರ ಬೇರೆ ಬಣ್ಣದಿಂದ ಗುರುತಿಸಲಾಗಿದೆ.

ಭಾರತದಿಂದ ಜಮ್ಮು, ಕಾಶ್ಮೀರ ಹಾಗೂ ಲಡಾಖ್​ ಪ್ರತ್ಯೇಕ: WHO ಪ್ರಮಾದಕ್ಕೆ ಭಾರತೀಯರು ಗರಂ
ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಭೂಪಟದಲ್ಲಿ ಪ್ರಮಾದ
Skanda
| Edited By: |

Updated on: Jan 11, 2021 | 12:25 PM

Share

ದೆಹಲಿ: ಜಾಗತಿಕ ಮಟ್ಟದಲ್ಲಿ ಕೊವಿಡ್ ಪ್ರಕರಣಗಳ ಪ್ರಮಾಣವನ್ನು ಬಿಂಬಿಸಲು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿರುವ ಭೂಪಟ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಭಾರತದ ಅವಿಭಾಜ್ಯ ಅಂಗವಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಪ್ರದೇಶಗಳನ್ನು ಬೇರೆ ಬಣ್ಣದಲ್ಲಿ ನೀಡಲಾಗಿದ್ದು ಇದು ಭಾರತದಿಂದ ಪ್ರತ್ಯೇಕಗೊಂಡ ಪ್ರದೇಶಗಳೆಂಬಂತೆ ಭೂಪಟದಲ್ಲಿ ಬಿಂಬಿಸಲ್ಪಟ್ಟಿದೆ.

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಪ್ರಾಂತ್ಯವನ್ನು ಭಾರತ ಇತ್ತೀಚೆಗಷ್ಟೇ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸಿದೆ. ಆದರೆ, ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿರುವ ಭೂಪಟದಲ್ಲಿ ಇಡೀ ದೇಶಕ್ಕೆ ಒಂದು ಬಣ್ಣ ನೀಡಿದ್ದರೆ, ಈ ಪ್ರಾಂತ್ಯಗಳನ್ನು ಮಾತ್ರ ಬೇರೆ ಬಣ್ಣದಿಂದ ಗುರುತಿಸಲಾಗಿದೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರು ವಿಶ್ವ ಆರೋಗ್ಯ ಸಂಸ್ಥೆಯ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತದ ಭೂಪಟ ವಿರೂಪಗೊಳಿಸಲು ಚೀನಾ ಕುಮ್ಮಕ್ಕು ನೀಡಿರಬಹುದು. ನೂತನ ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತ್ಯೇಕವಾಗಿ ಬಿಂಬಿಸಲೆಂದೇ WHOಗೆ ಚೀನಾ ಹಣ ಸಂದಾಯ ಮಾಡಿರುವ ಸಾಧ್ಯತೆಯೂ ಇದೆ ಎಂದು ಬ್ರಿಟನ್​ನಲ್ಲಿ ನೆಲೆಸಿರುವ ತಾಂತ್ರಿಕ ಸಲಹೆಗಾರರು ಆರೋಪಿಸಿದ್ದಾರೆ.

ಇತ್ತ ಘಟನೆ ಸಂಬಂಧ ಸ್ಪಷ್ಟನೆ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆ, ಭೂಪಟಕ್ಕೆ ಸಂಬಂಧಿಸಿದಂತೆ ಬ್ರಿಟನ್​ನ ನಿಯಮಾವಳಿಗಳನ್ನು ಪಾಲಿಸಲಾಗಿದೆ ಹಾಗೂ ಇದರಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಹೇಳಿದೆ. ಆದರೆ, ಭಾರತೀಯರು ಪ್ರತಿರೋಧ ಒಡ್ಡಿದ ನಂತರವೂ ಭೂಪಟದಲ್ಲಿ ಯಾವುದೇ ಬದಲಾವಣೆ ಮಾಡದ ವಿಶ್ವ ಆರೋಗ್ಯ ಸಂಸ್ಥೆ ನಡೆ ಕುರಿತು ಸಾಕಷ್ಟು ಅನುಮಾನ ವ್ಯಕ್ತವಾಗುತ್ತಿದೆ.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​