AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಜಮ್ಮು, ಕಾಶ್ಮೀರ ಹಾಗೂ ಲಡಾಖ್​ ಪ್ರತ್ಯೇಕ: WHO ಪ್ರಮಾದಕ್ಕೆ ಭಾರತೀಯರು ಗರಂ

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಪ್ರಾಂತ್ಯವನ್ನು ಭಾರತ ಇತ್ತೀಚೆಗಷ್ಟೇ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸಿದೆ. ಆದರೆ, ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿರುವ ಭೂಪಟದಲ್ಲಿ ಇಡೀ ದೇಶಕ್ಕೆ ಒಂದು ಬಣ್ಣ ನೀಡಿದ್ದರೆ, ಈ ಪ್ರಾಂತ್ಯಗಳನ್ನು ಮಾತ್ರ ಬೇರೆ ಬಣ್ಣದಿಂದ ಗುರುತಿಸಲಾಗಿದೆ.

ಭಾರತದಿಂದ ಜಮ್ಮು, ಕಾಶ್ಮೀರ ಹಾಗೂ ಲಡಾಖ್​ ಪ್ರತ್ಯೇಕ: WHO ಪ್ರಮಾದಕ್ಕೆ ಭಾರತೀಯರು ಗರಂ
ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಭೂಪಟದಲ್ಲಿ ಪ್ರಮಾದ
Skanda
| Updated By: ಸಾಧು ಶ್ರೀನಾಥ್​|

Updated on: Jan 11, 2021 | 12:25 PM

Share

ದೆಹಲಿ: ಜಾಗತಿಕ ಮಟ್ಟದಲ್ಲಿ ಕೊವಿಡ್ ಪ್ರಕರಣಗಳ ಪ್ರಮಾಣವನ್ನು ಬಿಂಬಿಸಲು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿರುವ ಭೂಪಟ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಭಾರತದ ಅವಿಭಾಜ್ಯ ಅಂಗವಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಪ್ರದೇಶಗಳನ್ನು ಬೇರೆ ಬಣ್ಣದಲ್ಲಿ ನೀಡಲಾಗಿದ್ದು ಇದು ಭಾರತದಿಂದ ಪ್ರತ್ಯೇಕಗೊಂಡ ಪ್ರದೇಶಗಳೆಂಬಂತೆ ಭೂಪಟದಲ್ಲಿ ಬಿಂಬಿಸಲ್ಪಟ್ಟಿದೆ.

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಪ್ರಾಂತ್ಯವನ್ನು ಭಾರತ ಇತ್ತೀಚೆಗಷ್ಟೇ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸಿದೆ. ಆದರೆ, ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿರುವ ಭೂಪಟದಲ್ಲಿ ಇಡೀ ದೇಶಕ್ಕೆ ಒಂದು ಬಣ್ಣ ನೀಡಿದ್ದರೆ, ಈ ಪ್ರಾಂತ್ಯಗಳನ್ನು ಮಾತ್ರ ಬೇರೆ ಬಣ್ಣದಿಂದ ಗುರುತಿಸಲಾಗಿದೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರು ವಿಶ್ವ ಆರೋಗ್ಯ ಸಂಸ್ಥೆಯ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತದ ಭೂಪಟ ವಿರೂಪಗೊಳಿಸಲು ಚೀನಾ ಕುಮ್ಮಕ್ಕು ನೀಡಿರಬಹುದು. ನೂತನ ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತ್ಯೇಕವಾಗಿ ಬಿಂಬಿಸಲೆಂದೇ WHOಗೆ ಚೀನಾ ಹಣ ಸಂದಾಯ ಮಾಡಿರುವ ಸಾಧ್ಯತೆಯೂ ಇದೆ ಎಂದು ಬ್ರಿಟನ್​ನಲ್ಲಿ ನೆಲೆಸಿರುವ ತಾಂತ್ರಿಕ ಸಲಹೆಗಾರರು ಆರೋಪಿಸಿದ್ದಾರೆ.

ಇತ್ತ ಘಟನೆ ಸಂಬಂಧ ಸ್ಪಷ್ಟನೆ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆ, ಭೂಪಟಕ್ಕೆ ಸಂಬಂಧಿಸಿದಂತೆ ಬ್ರಿಟನ್​ನ ನಿಯಮಾವಳಿಗಳನ್ನು ಪಾಲಿಸಲಾಗಿದೆ ಹಾಗೂ ಇದರಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಹೇಳಿದೆ. ಆದರೆ, ಭಾರತೀಯರು ಪ್ರತಿರೋಧ ಒಡ್ಡಿದ ನಂತರವೂ ಭೂಪಟದಲ್ಲಿ ಯಾವುದೇ ಬದಲಾವಣೆ ಮಾಡದ ವಿಶ್ವ ಆರೋಗ್ಯ ಸಂಸ್ಥೆ ನಡೆ ಕುರಿತು ಸಾಕಷ್ಟು ಅನುಮಾನ ವ್ಯಕ್ತವಾಗುತ್ತಿದೆ.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ