AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಿಂದ ಜಮ್ಮು, ಕಾಶ್ಮೀರ ಹಾಗೂ ಲಡಾಖ್​ ಪ್ರತ್ಯೇಕ: WHO ಪ್ರಮಾದಕ್ಕೆ ಭಾರತೀಯರು ಗರಂ

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಪ್ರಾಂತ್ಯವನ್ನು ಭಾರತ ಇತ್ತೀಚೆಗಷ್ಟೇ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸಿದೆ. ಆದರೆ, ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿರುವ ಭೂಪಟದಲ್ಲಿ ಇಡೀ ದೇಶಕ್ಕೆ ಒಂದು ಬಣ್ಣ ನೀಡಿದ್ದರೆ, ಈ ಪ್ರಾಂತ್ಯಗಳನ್ನು ಮಾತ್ರ ಬೇರೆ ಬಣ್ಣದಿಂದ ಗುರುತಿಸಲಾಗಿದೆ.

ಭಾರತದಿಂದ ಜಮ್ಮು, ಕಾಶ್ಮೀರ ಹಾಗೂ ಲಡಾಖ್​ ಪ್ರತ್ಯೇಕ: WHO ಪ್ರಮಾದಕ್ಕೆ ಭಾರತೀಯರು ಗರಂ
ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿದ ಭೂಪಟದಲ್ಲಿ ಪ್ರಮಾದ
Skanda
| Edited By: ಸಾಧು ಶ್ರೀನಾಥ್​|

Updated on: Jan 11, 2021 | 12:25 PM

Share

ದೆಹಲಿ: ಜಾಗತಿಕ ಮಟ್ಟದಲ್ಲಿ ಕೊವಿಡ್ ಪ್ರಕರಣಗಳ ಪ್ರಮಾಣವನ್ನು ಬಿಂಬಿಸಲು ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿರುವ ಭೂಪಟ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ. ಭಾರತದ ಅವಿಭಾಜ್ಯ ಅಂಗವಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಪ್ರದೇಶಗಳನ್ನು ಬೇರೆ ಬಣ್ಣದಲ್ಲಿ ನೀಡಲಾಗಿದ್ದು ಇದು ಭಾರತದಿಂದ ಪ್ರತ್ಯೇಕಗೊಂಡ ಪ್ರದೇಶಗಳೆಂಬಂತೆ ಭೂಪಟದಲ್ಲಿ ಬಿಂಬಿಸಲ್ಪಟ್ಟಿದೆ.

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಪ್ರಾಂತ್ಯವನ್ನು ಭಾರತ ಇತ್ತೀಚೆಗಷ್ಟೇ ಕೇಂದ್ರಾಡಳಿತ ಪ್ರದೇಶಗಳಾಗಿ ಘೋಷಿಸಿದೆ. ಆದರೆ, ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿರುವ ಭೂಪಟದಲ್ಲಿ ಇಡೀ ದೇಶಕ್ಕೆ ಒಂದು ಬಣ್ಣ ನೀಡಿದ್ದರೆ, ಈ ಪ್ರಾಂತ್ಯಗಳನ್ನು ಮಾತ್ರ ಬೇರೆ ಬಣ್ಣದಿಂದ ಗುರುತಿಸಲಾಗಿದೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಬ್ರಿಟನ್​ನಲ್ಲಿ ನೆಲೆಸಿರುವ ಭಾರತೀಯರು ವಿಶ್ವ ಆರೋಗ್ಯ ಸಂಸ್ಥೆಯ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತದ ಭೂಪಟ ವಿರೂಪಗೊಳಿಸಲು ಚೀನಾ ಕುಮ್ಮಕ್ಕು ನೀಡಿರಬಹುದು. ನೂತನ ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತ್ಯೇಕವಾಗಿ ಬಿಂಬಿಸಲೆಂದೇ WHOಗೆ ಚೀನಾ ಹಣ ಸಂದಾಯ ಮಾಡಿರುವ ಸಾಧ್ಯತೆಯೂ ಇದೆ ಎಂದು ಬ್ರಿಟನ್​ನಲ್ಲಿ ನೆಲೆಸಿರುವ ತಾಂತ್ರಿಕ ಸಲಹೆಗಾರರು ಆರೋಪಿಸಿದ್ದಾರೆ.

ಇತ್ತ ಘಟನೆ ಸಂಬಂಧ ಸ್ಪಷ್ಟನೆ ನೀಡಿರುವ ವಿಶ್ವ ಆರೋಗ್ಯ ಸಂಸ್ಥೆ, ಭೂಪಟಕ್ಕೆ ಸಂಬಂಧಿಸಿದಂತೆ ಬ್ರಿಟನ್​ನ ನಿಯಮಾವಳಿಗಳನ್ನು ಪಾಲಿಸಲಾಗಿದೆ ಹಾಗೂ ಇದರಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಹೇಳಿದೆ. ಆದರೆ, ಭಾರತೀಯರು ಪ್ರತಿರೋಧ ಒಡ್ಡಿದ ನಂತರವೂ ಭೂಪಟದಲ್ಲಿ ಯಾವುದೇ ಬದಲಾವಣೆ ಮಾಡದ ವಿಶ್ವ ಆರೋಗ್ಯ ಸಂಸ್ಥೆ ನಡೆ ಕುರಿತು ಸಾಕಷ್ಟು ಅನುಮಾನ ವ್ಯಕ್ತವಾಗುತ್ತಿದೆ.

ಗಡಿ ದಾಟಿ.. ದೇಶದ ಭೂ ಭಾಗ ಪ್ರವೇಶಿಸಿದ ಚೀನಾ ಸೈನಿಕ ಭಾರತೀಯ ಸೇನೆ ವಶಕ್ಕೆ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ