AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರು ವಾರಗಳ ಒಳಗೆ ಪ್ರತಿಕ್ರಿಯಿಸಿ: ಕುನಾಲ್ ಕಮ್ರಾ ಮತ್ತು ರಚಿತಾ ತನೇಜಾಗೆ ಸುಪ್ರೀಂಕೋರ್ಟ್ ಸೂಚನೆ

ಸುಪ್ರಿಂಕೋರ್ಟ್ ತೀರ್ಪನ್ನು ವ್ಯಂಗ್ಯವಾಗಿ ಟೀಕಿಸಿರುವ ಕುರಿತು ಆರು ವಾರಗಳ ಒಳಗೆ ಪ್ರತಿಕ್ರಿಯೆ ನೀಡುವಂತೆ ಸ್ಟ್ಯಾಂಡ್ ಅಪ್ ಕಾಮೆಡಿಯನ್ ಕುನಾಲ್ ಕಮ್ರಾ ಮತ್ತು ವ್ಯಂಗ್ಯಚಿತ್ರಕಾರ್ತಿ ರಚಿತಾ ತನೇಜಾರಿಗೆ ನ್ಯಾಯಾಲಯವು ನೊಟೀಸ್ ಜಾರಿಮಾಡಿದೆ.

ಆರು ವಾರಗಳ ಒಳಗೆ ಪ್ರತಿಕ್ರಿಯಿಸಿ: ಕುನಾಲ್ ಕಮ್ರಾ ಮತ್ತು ರಚಿತಾ ತನೇಜಾಗೆ ಸುಪ್ರೀಂಕೋರ್ಟ್ ಸೂಚನೆ
ಸುಪ್ರೀಂ ಕೋರ್ಟ್
guruganesh bhat
|

Updated on:Dec 18, 2020 | 6:36 PM

Share

ದೆಹಲಿ: ಸುಪ್ರೀಂಕೋರ್ಟ್ ತೀರ್ಪನ್ನು ವ್ಯಂಗ್ಯವಾಡಿದ ಕುರಿತು ಆರು ವಾರಗಳ ಒಳಗೆ ಪ್ರತಿಕ್ರಿಯೆ ನೀಡುವಂತೆ ಸ್ಟ್ಯಾಂಡ್ ಅಪ್ ಕಾಮೆಡಿಯನ್ ಕುನಾಲ್ ಕಮ್ರಾ ಮತ್ತು ವ್ಯಂಗ್ಯಚಿತ್ರಕಾರ್ತಿ ರಚಿತಾ ತನೇಜಾ ಅವರಿಗೆ ನ್ಯಾಯಾಲಯ ನೊಟೀಸ್ ಜಾರಿಮಾಡಿದೆ.

ಟಿಆರ್​ಪಿ ಹಗರಣದಲ್ಲಿ ರಿಪಬ್ಲಿಕ್ ಟಿವಿಯ ಸಂಪಾದಕ ಆರ್ನಬ್ ಗೋಸ್ವಾಮಿ ಅವರಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್ ನಿರ್ಧಾರವನ್ನು ವ್ಯಂಗ್ಯ ಮಾಡಿ ಕುನಾಲ್ ಕಮ್ರಾ ಟ್ವೀಟ್ ಮಾಡಿದ್ದರು. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್.ಸುಬಾಶ್ ರೆಡ್ಡಿ ಮತ್ತು ಎಂ.ಆರ್.ಶಾ ಅವರಿದ್ದ ನ್ಯಾಯಪೀಠವು ಈ ತೀರ್ಪು ನೀಡಿತು.

ಕುನಾಲ್​ರ ನಾಲ್ಕು ಟ್ವೀಟ್​ಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಕಾನೂನು ವಿದ್ಯಾರ್ಥಿಗಳಿಗೆ ಅನುಮತಿ ನೀಡಿದ್ದ ಅಟಾರ್ನಿ ಜನರಲ್ ತುಷಾರ್ ಮೆಹ್ತಾ, ಈ ನಾಲ್ಕು ಟ್ವೀಟ್​ಗಳು ಕೆಟ್ಟ ಅಭಿರುಚಿ ಹೊಂದಿರುವುದು ಮಾತ್ರವಲ್ಲ, ಹಾಸ್ಯ ಮತ್ತು ನ್ಯಾಯಾಂಗ ನಿಂದನೆಯ ನಡುವೆ ಇರಬೇಕಾದ ತೆಳುರೇಖೆಯನ್ನು ಉಲ್ಲಂಘಿಸಿವೆ ಎಂದಿದ್ದರು. ಕುನಾಲ್ ಕಮ್ರಾ ಮತ್ತು ರಚಿತಾ ತನೇಜಾ ಸುಪ್ರೀಂಕೋರ್ಟ್ ತೀರ್ಪಿನ ಗೌರವಕ್ಕೆ ಭಂಗ ತಂದ ಪ್ರತ್ಯೇಕ ಪ್ರಕರಣಗಳಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ.

ಕುನಾಲ್ ಕಮ್ರಾ ಮೇಲೆ ನ್ಯಾಯಾಂಗ ನಿಂದನೆ ಆರೋಪ: ನಾಳೆ ಸುಪ್ರೀಂಕೋರ್ಟ್ ತೀರ್ಪು

Published On - 12:56 pm, Fri, 18 December 20

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್