AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುನಾಲ್ ಕಮ್ರಾ ಮೇಲೆ ನ್ಯಾಯಾಂಗ ನಿಂದನೆ ಆರೋಪ: ನಾಳೆ ಸುಪ್ರೀಂಕೋರ್ಟ್ ತೀರ್ಪು

ಕುನಾಲ್​ರ ನಾಲ್ಕು ಟ್ವೀಟ್​ಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡಿದ್ದ ಅಟಾರ್ನಿ ಜನರಲ್, ಈ ನಾಲ್ಕು ಟ್ವೀಟ್​ಗಳು ಕೆಟ್ಟ ಅಭಿರುಚಿ ಹೊಂದಿರುವುದು ಮಾತ್ರವಲ್ಲ, ಹಾಸ್ಯ ಮತ್ತು ನ್ಯಾಯಾಂಗ ನಿಂದನೆಯ ನಡುವೆ ಇರಬೇಕಾದ ತೆಳು ರೇಖೆಯನ್ನು ಉಲ್ಲಂಘಿಸಿವೆ ಎಂದಿದ್ದರು.

ಕುನಾಲ್ ಕಮ್ರಾ ಮೇಲೆ ನ್ಯಾಯಾಂಗ ನಿಂದನೆ ಆರೋಪ: ನಾಳೆ ಸುಪ್ರೀಂಕೋರ್ಟ್ ತೀರ್ಪು
ಕುನಾಲ್ ಕಮ್ರಾ ಮತ್ತು ರಚಿತಾ ತನೇಜಾ
Lakshmi Hegde
| Edited By: |

Updated on:Dec 17, 2020 | 3:42 PM

Share

ದೆಹಲಿ: ರಿಪಬ್ಲಿಕ್​ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದನ್ನು ಟ್ವೀಟ್ ಮೂಲಕ ವ್ಯಂಗ್ಯ ಮಾಡಿ, ನ್ಯಾಯಾಂಗ ನಿಂದನೆ ಆರೋಪ ಹೊತ್ತಿದ್ದ ಖ್ಯಾತ ಕಾಮಿಡಿಯನ್​ ಕುನಾಲ್​ ಕಮ್ರಾ ಮತ್ತು ಕಾರ್ಟೂನಿಸ್ಟ್​ ರಚಿತಾ ತನೇಜಾ ವಿಚಾರಣೆಯ ಅಂತಿಮ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯ ನಾಳೆ ನೀಡಲಿದೆ. ಇಂದಿನ ವಿಚಾರಣೆ ವೇಳೆ ಕಮ್ರಾ ಕೋರ್ಟ್​ನಲ್ಲಿ ಹಾಜರು ಇರಲಿಲ್ಲ.

2018ರಲ್ಲಿ ಇಂಟೀರಿಯರ್​ ಡಿಸೈನರ್​ ಓರ್ವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಡಿ ನವೆಂಬರ್​ 4ರಂದು ಅರ್ನಬ್​ ಗೋಸ್ವಾಮಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಅದಾದ ಬಳಿಕ ನವೆಂಬರ್​ 11ರಂದು ಸುಪ್ರೀಂಕೋರ್ಟ್​ನಿಂದ ಮಧ್ಯಂತರ ಜಾಮೀನು ಪಡೆದಿದ್ದರು. ಸುಪ್ರೀಂಕೋರ್ಟ್​ ಜಾಮೀನು ನೀಡಿದ ಬಗ್ಗೆ ಕುನಾಲ್​ ಮತ್ತು ರಚಿತಾ ವ್ಯಂಗ್ಯವಾಡಿ ಟ್ವೀಟ್​ ಮಾಡಿದ್ದರು.

ಕುನಾಲ್​ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ವಕೀಲರು, ಕಾನೂನು ವಿದ್ಯಾರ್ಥಿಗಳು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರಿ​ಗೆ ಪತ್ರ ಬರೆದಿದ್ದರು. ಅಟಾರ್ನಿ ಜನರಲ್​ ಅನುಮತಿಯನ್ನೂ ನೀಡಿದ್ದರು. ರಚಿತಾ ವಿಚಾರದಲ್ಲೂ ಇದೇ ರೀತಿ ಕಾನೂನು ವಿದ್ಯಾರ್ಥಿಗಳ ಮೂಲಕ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಾಗಿತ್ತು. ಕುನಾಲ್​ ಮತ್ತು ರಚಿತಾ ವಿರುದ್ಧ ಅನೇಕರು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿರುವ ಕೋರ್ಟ್​, ನಾಳೆ ಅಂತಿಮವಾಗಿ ಆದೇಶ ನೀಡಲಿದ್ದು, ಇವರಿಬ್ಬರ ಟ್ವೀಟ್​ಗಳು ನ್ಯಾಯಾಂಗ ನಿಂದನೆ ಹೌದಾ? ಅಲ್ಲವಾ ಎಂಬುದನ್ನು ಸ್ಪಷ್ಟಪಡಿಸಲಿದೆ.

ಕುನಾಲ್​ರ ನಾಲ್ಕು ಟ್ವೀಟ್​ಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡಿದ್ದ ಅಟಾರ್ನಿ ಜನರಲ್, ಈ ನಾಲ್ಕು ಟ್ವೀಟ್​ಗಳು ಕೆಟ್ಟ ಅಭಿರುಚಿ ಹೊಂದಿರುವುದು ಮಾತ್ರವಲ್ಲ, ಹಾಸ್ಯ ಮತ್ತು ನ್ಯಾಯಾಂಗ ನಿಂದನೆಯ ನಡುವೆ ಇರಬೇಕಾದ ತೆಳು ರೇಖೆಯನ್ನು ಉಲ್ಲಂಘಿಸಿವೆ ಎಂದಿದ್ದರು. ನ್ಯಾಯಮೂರ್ತಿಗಳಾದ ಅಶೋಕ್​ ಭೂಷಣ್​, ಆರ್.ಸುಭಾಷ್ ರೆಡ್ಡಿ ಮತ್ತು ಎಂ.ಆರ್. ಶಾ ಅವರಿದ್ದ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿತ್ತು.

ವಕೀಲ ಪ್ರಶಾಂತ್ ಭೂಷಣ್​ಗೆ ರೂ. 1 ಜುಲ್ಮಾನೆ ವಿಧಿಸಿದ ಸುಪ್ರೀಂ ಕೋರ್ಟ್

ತಪ್ಪಿತಸ್ಥ ಪ್ರಶಾಂತ್ ಭೂಷಣ್ ಪರ ಆ ಒಂದು ರೂಪಾಯಿ ದಂಡ ಕಟ್ಟಿದ್ದು ಯಾರು ಗೊತ್ತಾ?

ಗಣರಾಜ್ಯೋತ್ಸವ ದಿನಾಚರಣೆಯಂದೇ ಅಯೋಧ್ಯಾ ಮಸೀದಿಗೆ ಶಂಕು ಸ್ಥಾಪನೆ; ಇದು ಬಾಬ್ರಿ ಮಸೀದಿಗಿಂತಲೂ ವಿಶಾಲ, ವಿಭಿನ್ನ

Published On - 3:41 pm, Thu, 17 December 20

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು