AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Munawar Faruqui ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇದೆ: ಕಾಮಿಡಿಯನ್ ಮುನಾವರ್ ಫಾರೂಖಿ

Comedian Munawar Faruqui ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಜನವರಿ 1ರಂದು ಮುನಾವರ್​ನ್ನು ಬಂಧಿಸಲಾಗಿತ್ತು. ಜನವರಿ 28ಕ್ಕೆ ಮಧ್ಯಪ್ರದೇಶ ಸರ್ಕಾರ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು

Munawar Faruqui ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇದೆ: ಕಾಮಿಡಿಯನ್ ಮುನಾವರ್ ಫಾರೂಖಿ
ಮುನಾವರ್ ಫರೂಖಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on: Feb 07, 2021 | 7:30 PM

Share

ಮುಂಬೈ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಖಿ 35 ದಿನಗಳ ಜೈಲುವಾಸದ ನಂತರ ಶನಿವಾರ ರಾತ್ರಿ ಬಿಡುಗಡೆಯಾಗಿದ್ದಾರೆ.

ಶುಕ್ರವಾರ ಸುಪ್ರೀಂಕೋರ್ಟ್ ಮುನಾವರ್​ಗೆ ಮಧ್ಯಂತರ ಜಾಮೀನು ನೀಡಿತ್ತು. ಶನಿವಾರ ರಾತ್ರಿ ಇಂದೋರ್ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾದ ನಂತರ ಮಾತನಾಡಿದ ಮುನಾವರ್, ನಾನು ಈಗ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ನನಗೆ ಕಾನೂನು ವ್ಯವಸ್ಥೆಯ ಮೇಲೆ ನಂಬಿಕೆ ಇದ್ದು, ನ್ಯಾಯ ಸಿಗುತ್ತದೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

ಇಂದೋರ್​ನ 56 ಡುಕಾನ್​​ ಎಂಬಲ್ಲಿನ ಕೆಫೆಯೊಂದರಲ್ಲಿ ಹೊಸವರ್ಷಾಚರಣೆ ವೇಳೆ ನಡೆದ ಕಾರ್ಯಕ್ರಮದಲ್ಲಿ ಮುನಾವರ್​ ಹಿಂದೂ ದೇವತೆಗಳು ಮತ್ತು ಗೃಹ ಸಚಿವ ಅಮಿತ್​ ಶಾಗೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಶಾಸಕಿ ಮಾಲಿನಿ ಗೌರ್​ ಪುತ್ರ, ಹಿಂದ್​ ರಕ್ಷಕ್​ ಸಂಘಟನೆಯ ಸಮಾವೇಶಕನೂ ಆಗಿರುವ ಏಕಲವ್ಯ ಗೌರ್​ ದೂರು ದಾಖಲಿಸಿದ್ದರು. ಅವರ ದೂರಿನ ಅನ್ವಯ ಮುನಾವರ್​ ಫಾರೂಖಿ ಸೇರಿ ಒಟ್ಟು ಆರು ಮಂದಿಯ ಬಂಧನವಾಗಿತ್ತು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಲ್ಲಿ ಜನವರಿ 1ರಂದು ಮುನಾವರ್​ನ್ನು ಬಂಧಿಸಲಾಗಿತ್ತು. ಜನವರಿ 28ಕ್ಕೆ ಮಧ್ಯಪ್ರದೇಶ ಸರ್ಕಾರ ಇವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದಾದ ನಂತರ ಫೆಬ್ರುವರಿ 5 ರಂದು ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

Munawar Faruqui ಮುನಾವರ್​ ಫಾರೂಖಿ ವಿರುದ್ಧ ಕೇಸ್​ ದಾಖಲಾಗಿದ್ದು ಕೇವಲ 1 ಕಾರಣಕ್ಕಲ್ಲ !

Follow Us
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ