AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ ಕಮೆಡಿಯನ್ ಶ್ಯಾಮ್ ರಂಗೀಲಾ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಮೆಡಿಯನ್​ ಶ್ಯಾಮ್ ರಂಗೀಲಾ ಸ್ಪಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶೀಘ್ರದಲ್ಲೇ ವಾರಾಣಸಿಗೆ ಬರಲಿದ್ದು, ಯಾವಾಗ ನಾಮಪತ್ರ ಸಲ್ಲಿಸಬೇಕು ಎಂಬ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದರು.

ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ ಕಮೆಡಿಯನ್ ಶ್ಯಾಮ್ ರಂಗೀಲಾ
ಶ್ಯಾಮ್ ರಂಗೀಲಾImage Credit source: Patrika.com
ನಯನಾ ರಾಜೀವ್
|

Updated on: May 02, 2024 | 8:04 AM

Share

ಹಾಸ್ಯದ ಮೂಲಕವೇ ಎಲ್ಲರಚಿತ್ತವನ್ನು ತನ್ನೆಡೆಗೆ ನೆಡುವಂತೆ ಮಾಡಿದ್ದ ಕಮೆಡಿಯನ್​ ಶ್ಯಾಮ್ ರಂಗೀಲಾ(Shyam Rangeela) ವಾರಾಣಸಿಯಲ್ಲಿ ಪ್ರಧಾನಿ  ನರೇಂದ್ರ ಮೋದಿ(Narendra Modi) ವಿರುದ್ಧ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶೀಘ್ರದಲ್ಲೇ ವಾರಣಾಸಿಗೆ ಬರಲಿದ್ದು, ಯಾವಾಗ ನಾಮಪತ್ರ ಸಲ್ಲಿಸಬೇಕು ಎಂಬ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದರು.

ಕೆಲವರು ಇದನ್ನು ತಮಾಷೆ ಎಂದುಕೊಂಡಿದ್ದಾರೆ ಆದರೆ ನಾನು ವಾರಾಣಸಿಯಲ್ಲಿ ಮೋದಿ ಎದುರು ಸ್ಪರ್ಧಿಸುತ್ತಿದ್ದೇನೆ ಎಂದರು.

ಇದರ ಅಗತ್ಯವೇನಿತ್ತು ಎಂದು ಎಲ್ಲರಿಗೂ ಅನಿಸುತ್ತಿರಬಹುದು ಆದರೆ ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು. ನಾನು ಚುನಾವಣೆಗೆ ಸ್ಪರ್ಧಿಸಲು ಕಾರಣವಿದೆ ಎಂದಿದ್ದಾರೆ.

ಶ್ಯಾಮ್ ರಂಗೀಲಾ ಅವರು ಚುನಾವಣೆಯ ಬಗ್ಗೆ ಉತ್ಸುಕರಾಗಿದ್ದಾರೆ ಆದರೆ ಅವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ ಆದ್ದರಿಂದ ಅವರಿಗೆ ಜನರ ಬೆಂಬಲ ಬೇಕು ಎಂದು ಹೇಳಿದರು. ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವುದು ಹೇಗೆ, ಅಲ್ಲಿ ಹೇಗೆ ಕೆಲಸ ಮಾಡಬೇಕು ಎಂಬುದು ಗೊತ್ತಿಲ್ಲ, ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದರು.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆ 2024: ವಾರಾಣಸಿಯಲ್ಲಿ ಮೋದಿ ವಿರುದ್ಧ ತೃತೀಯ ಲಿಂಗಿ ಸ್ಪರ್ಧೆ

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿರುವ ಪ್ರತಿಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದರೂ ನಾನು ಯಾವುದೇ ಬೆಲೆ ತೆತ್ತಾದರೂ ಚುನಾವಣೆಗೆ ಸ್ಪರ್ಧಿಸುತ್ತೇನೆ. ಪ್ರಧಾನಿ ವಿರುದ್ಧ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು, ಇದು ಪ್ರಜಾಪ್ರಭುತ್ವ. ಸಾರ್ವಜನಿಕರ ಬೆಂಬಲದೊಂದಿಗೆ ವಾರಾಣಸಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದರು.

ವಾರಾಣಸಿಯಿಂದ ನನಗೆ ಅನೇಕ ಜನರಿಂದ ಫೋನ್ ಕರೆಗಳು ಬರುತ್ತಿವೆ, ಅವರೆಲ್ಲರೂ ನನ್ನೊಂದಿಗೆ ನಿಲ್ಲಲು ಸಿದ್ಧರಾಗಿದ್ದಾರೆ. ಸೋಲು-ಗೆಲುವು ಬೇರೆ ವಿಷಯ, ಆದರೆ ನಾನು ಪ್ರಧಾನಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನಾನು ಪ್ರಸಿದ್ಧನಾಗಲು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ, ನಾನು ಈಗಾಗಲೇ ಸಾರ್ವಜನಿಕರಲ್ಲಿ ಬಹಳ ಪ್ರಸಿದ್ಧನಾಗಿದ್ದೇನೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ