AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ ಕಮೆಡಿಯನ್ ಶ್ಯಾಮ್ ರಂಗೀಲಾ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಮೆಡಿಯನ್​ ಶ್ಯಾಮ್ ರಂಗೀಲಾ ಸ್ಪಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶೀಘ್ರದಲ್ಲೇ ವಾರಾಣಸಿಗೆ ಬರಲಿದ್ದು, ಯಾವಾಗ ನಾಮಪತ್ರ ಸಲ್ಲಿಸಬೇಕು ಎಂಬ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದರು.

ವಾರಾಣಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲಿದ್ದಾರೆ ಕಮೆಡಿಯನ್ ಶ್ಯಾಮ್ ರಂಗೀಲಾ
ಶ್ಯಾಮ್ ರಂಗೀಲಾImage Credit source: Patrika.com
ನಯನಾ ರಾಜೀವ್
|

Updated on: May 02, 2024 | 8:04 AM

Share

ಹಾಸ್ಯದ ಮೂಲಕವೇ ಎಲ್ಲರಚಿತ್ತವನ್ನು ತನ್ನೆಡೆಗೆ ನೆಡುವಂತೆ ಮಾಡಿದ್ದ ಕಮೆಡಿಯನ್​ ಶ್ಯಾಮ್ ರಂಗೀಲಾ(Shyam Rangeela) ವಾರಾಣಸಿಯಲ್ಲಿ ಪ್ರಧಾನಿ  ನರೇಂದ್ರ ಮೋದಿ(Narendra Modi) ವಿರುದ್ಧ ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶೀಘ್ರದಲ್ಲೇ ವಾರಣಾಸಿಗೆ ಬರಲಿದ್ದು, ಯಾವಾಗ ನಾಮಪತ್ರ ಸಲ್ಲಿಸಬೇಕು ಎಂಬ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದರು.

ಕೆಲವರು ಇದನ್ನು ತಮಾಷೆ ಎಂದುಕೊಂಡಿದ್ದಾರೆ ಆದರೆ ನಾನು ವಾರಾಣಸಿಯಲ್ಲಿ ಮೋದಿ ಎದುರು ಸ್ಪರ್ಧಿಸುತ್ತಿದ್ದೇನೆ ಎಂದರು.

ಇದರ ಅಗತ್ಯವೇನಿತ್ತು ಎಂದು ಎಲ್ಲರಿಗೂ ಅನಿಸುತ್ತಿರಬಹುದು ಆದರೆ ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು. ನಾನು ಚುನಾವಣೆಗೆ ಸ್ಪರ್ಧಿಸಲು ಕಾರಣವಿದೆ ಎಂದಿದ್ದಾರೆ.

ಶ್ಯಾಮ್ ರಂಗೀಲಾ ಅವರು ಚುನಾವಣೆಯ ಬಗ್ಗೆ ಉತ್ಸುಕರಾಗಿದ್ದಾರೆ ಆದರೆ ಅವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ ಆದ್ದರಿಂದ ಅವರಿಗೆ ಜನರ ಬೆಂಬಲ ಬೇಕು ಎಂದು ಹೇಳಿದರು. ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವುದು ಹೇಗೆ, ಅಲ್ಲಿ ಹೇಗೆ ಕೆಲಸ ಮಾಡಬೇಕು ಎಂಬುದು ಗೊತ್ತಿಲ್ಲ, ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದರು.

ಮತ್ತಷ್ಟು ಓದಿ: ಲೋಕಸಭಾ ಚುನಾವಣೆ 2024: ವಾರಾಣಸಿಯಲ್ಲಿ ಮೋದಿ ವಿರುದ್ಧ ತೃತೀಯ ಲಿಂಗಿ ಸ್ಪರ್ಧೆ

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿರುವ ಪ್ರತಿಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದರೂ ನಾನು ಯಾವುದೇ ಬೆಲೆ ತೆತ್ತಾದರೂ ಚುನಾವಣೆಗೆ ಸ್ಪರ್ಧಿಸುತ್ತೇನೆ. ಪ್ರಧಾನಿ ವಿರುದ್ಧ ಯಾರು ಬೇಕಾದರೂ ಚುನಾವಣೆಗೆ ಸ್ಪರ್ಧಿಸಬಹುದು, ಇದು ಪ್ರಜಾಪ್ರಭುತ್ವ. ಸಾರ್ವಜನಿಕರ ಬೆಂಬಲದೊಂದಿಗೆ ವಾರಾಣಸಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದರು.

ವಾರಾಣಸಿಯಿಂದ ನನಗೆ ಅನೇಕ ಜನರಿಂದ ಫೋನ್ ಕರೆಗಳು ಬರುತ್ತಿವೆ, ಅವರೆಲ್ಲರೂ ನನ್ನೊಂದಿಗೆ ನಿಲ್ಲಲು ಸಿದ್ಧರಾಗಿದ್ದಾರೆ. ಸೋಲು-ಗೆಲುವು ಬೇರೆ ವಿಷಯ, ಆದರೆ ನಾನು ಪ್ರಧಾನಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ನಾನು ಪ್ರಸಿದ್ಧನಾಗಲು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ, ನಾನು ಈಗಾಗಲೇ ಸಾರ್ವಜನಿಕರಲ್ಲಿ ಬಹಳ ಪ್ರಸಿದ್ಧನಾಗಿದ್ದೇನೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!