AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮ್ ಆದ್ಮಿ ನಾಯಕರೊಂದಿಗೆ ನಾಳೆ ಬಿಜೆಪಿ ಕಚೇರಿಗೆ ಬರುತ್ತೇನೆ, ಬಂಧಿಸಿ ನೋಡೋಣ; ಕೇಜ್ರಿವಾಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯಲ್ಲೇ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿರುವ ಆರೋಪದಲ್ಲಿ ಕೇಜ್ರಿವಾಲ್ ಅವರ ಆಪ್ತ ಸಹಾಯ ಬಿಭವ್ ಕುಮಾರ್ ಅವರನ್ನು ಇಂದು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಆಕ್ರೋಶ ಹೊರಹಾಕಿದ್ದಾರೆ.

ಆಮ್ ಆದ್ಮಿ ನಾಯಕರೊಂದಿಗೆ ನಾಳೆ ಬಿಜೆಪಿ ಕಚೇರಿಗೆ ಬರುತ್ತೇನೆ, ಬಂಧಿಸಿ ನೋಡೋಣ; ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: May 18, 2024 | 6:58 PM

ನವದೆಹಲಿ: ಬಿಜೆಪಿ ಆಮ್ ಆದ್ಮಿ ಪಕ್ಷದ (Aam Aadmi Party) ನಾಯಕರು ಮತ್ತು ಕಾರ್ಯಕರ್ತರನ್ನು ಜೈಲಿಗೆ ಹಾಕುವ ಮೂಲಕ ನಮ್ಮ ಪಕ್ಷವನ್ನು ಹತ್ತಿಕ್ಕಲು ಬಯಸುತ್ತಿದೆ ಎಂದು ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ. ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ (Swati Maliwal) ಮೇಲಿನ ಹಲ್ಲೆ ಪ್ರಕರಣದಲ್ಲಿ ಅವರ ಸಹಾಯಕ ಬಿಭವ್ ಕುಮಾರ್ (Bibhav Kumar) ಅವರನ್ನು ಇಂದು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಿಜೆಪಿಗೆ ಸವಾಲು ಹಾಕಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ನಾಳೆ (ಭಾನುವಾರ) ಬಿಜೆಪಿ ಕೇಂದ್ರ ಕಚೇರಿಗೆ ಹೋಗುವುದಾಗಿ ಹೇಳಿದ್ದಾರೆ. ಬಿಜೆಪಿ ಯಾರನ್ನು ಬೇಕಾದರೂ ಬಂಧಿಸಲಿ ಎಂದು ಕೇಜ್ರಿವಾಲ್ ಸವಾಲು ಹಾಕಿದ್ದಾರೆ. ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ.

ಪ್ರಧಾನಿ ಮೋದಿಜೀ, ನೀವು ಈ ಜೈಲಿನ ಆಟವನ್ನು ಆಡುತ್ತಿದ್ದೀರಿ. ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್, ಅರವಿಂದ್ ಕೇಜ್ರಿವಾಲ್ ಅವರನ್ನು ಒಬ್ಬೊಬ್ಬರಾಗಿ ಜೈಲಿಗೆ ಕಳುಹಿಸುತ್ತಿದ್ದೀರಿ. ನಾನು, ನಮ್ಮ ಪಕ್ಷದ ಸಂಸದರು ಮತ್ತು ಶಾಸಕರೊಂದಿಗೆ ನಾಳೆ ಮಧ್ಯಾಹ್ನ 12 ಗಂಟೆಗೆ ನಾನು ಬಿಜೆಪಿ ಕೇಂದ್ರ ಕಚೇರಿಗೆ ಬರುತ್ತೇನೆ. ನೀವು ಜೈಲಿಗೆ ಹಾಕಲು ಬಯಸುವುದಾದರೆ ನೀವು ಅವರೆಲ್ಲರನ್ನೂ ಒಂದೇ ಬಾರಿಗೆ ಬಂಧಿಸಬಹುದು ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಸ್ವಾತಿ ಮಲಿವಾಲ್ ಮೂಲಕ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಷಡ್ಯಂತ್ರ; ಆಮ್ ಆದ್ಮಿ ಆರೋಪ

“ಬಿಜೆಪಿಯವರು ಸಂಜಯ್ ಸಿಂಗ್ ಅವರನ್ನು ಜೈಲಿಗೆ ಹಾಕಿದರು, ಇಂದು ಅವರು ನನ್ನ ಸಹಾಯಕ ಬಿಭವ್ ಕುಮಾರ್​ನನ್ನು ಜೈಲಿಗೆ ಹಾಕಿದ್ದಾರೆ. ಈಗ ಅವರು ರಾಘವ್ ಚಡ್ಡಾ ಲಂಡನ್‌ನಿಂದ ಹಿಂತಿರುಗಿದ್ದಾರೆ ಎಂದು ಹೇಳುತ್ತಿದ್ದಾರೆ ಮತ್ತು ಅವರನ್ನೂ ಜೈಲಿಗೆ ಹಾಕಲು ಪ್ಲಾನ್ ಮಾಡಿದ್ದಾರೆ. ಅವರು ಸೌರಭ್ ಭಾರದ್ವಾಜ್, ಅತಿಶಿ ಅವರನ್ನು ಕೂಡ ಜೈಲಿಗೆ ಹಾಕುತ್ತೇವೆ ಎಂದು ಅವರು ಹೇಳುತ್ತಿದ್ದಾರೆ” ಎಂದು ಅರವಿಂದ್ ಕೇಜ್ರಿವಾಲ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ ತಿಳಿಸಿದ್ದಾರೆ.

ಆಡಳಿತ ಪಕ್ಷವು ಎಲ್ಲ ಆಪ್ ನಾಯಕರನ್ನು ಜೈಲಿಗೆ ಹಾಕಲು ಏಕೆ ಬಯಸುತ್ತಿದೆ? ಎಂಬುದು ನನಗೆ ಗೊತ್ತಾಗಬೇಕಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. “ನಮ್ಮ ತಪ್ಪು ಏನು? ಎಂದು ನಾನು ಆಶ್ಚರ್ಯ ಪಡುತ್ತಿದ್ದೆ. ನಮ್ಮ ತಪ್ಪು ಏನೆಂದರೆ ನಾವು ದೆಹಲಿಯಲ್ಲಿ ಬಡವರಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿದ್ದೇವೆ. ಬಿಜೆಪಿಯವರು ಅದನ್ನು ಮಾಡಲು ಸಾಧ್ಯವಿಲ್ಲ. ನಮ್ಮ ತಪ್ಪು ಎಂದರೆ ನಾವು ನಗರದಲ್ಲಿ ಮೊಹಲ್ಲಾ ಕ್ಲಿನಿಕ್‌ಗಳನ್ನು ರಚಿಸಿದ್ದೇವೆ, ಔಷಧಿಗಳು ಮತ್ತು ಆರೋಗ್ಯ ಸೇವೆಗಳನ್ನು ಒದಗಿಸಿದ್ದೇವೆ. ಬಿಜೆಪಿಯವರು ಮೊಹಲ್ಲಾ ಚಿಕಿತ್ಸಾಲಯಗಳನ್ನು ನಿಲ್ಲಿಸಲು ಬಯಸುತ್ತಾರೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಸಂವಿಧಾನದೊಂದಿಗೆ ಆಟವಾಡಿದವರು ನೀವೇ: ಗಾಂಧಿ ಕುಟುಂಬದ ವಿರುದ್ಧ ಮೋದಿ ವಾಗ್ದಾಳಿ

ಬಿಜೆಪಿಯು ತನ್ನ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಆಮ್ ಆದ್ಮಿ ಪಕ್ಷವನ್ನು ಹತ್ತಿಕ್ಕಲು ಬಯಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಆಮ್ ಆದ್ಮಿ ಪಕ್ಷವು ದೇಶಾದ್ಯಂತದ ಜನರ ಹೃದಯದಲ್ಲಿ ತನ್ನ ಸ್ಥಾನವನ್ನು ಕಂಡುಕೊಂಡಿರುವ ಒಂದು ಚಿಂತನೆಯಾಗಿದೆ. ನೀವು ಜೈಲಿನಲ್ಲಿ ಎಸೆಯುವ ಪ್ರತಿಯೊಬ್ಬ ಎಎಪಿ ನಾಯಕನಿಗೆ ನೂರಾರು ನಾಯಕರು ಹುಟ್ಟುತ್ತಾರೆ” ಎಂದು ಅವರು ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಈ ಸವಾಲಿಗೆ ಪ್ರತಿಕ್ರಿಯಿಸಿದ ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ, ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆಯ ಬಗ್ಗೆ ಅರವಿಂದ್ ಕೇಜ್ರಿವಾಲ್ ಏಕೆ ಮೌನ ತಳೆದಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

“ಈ ನಾಟಕ ಮಾಡುವುದನ್ನು ನಿಲ್ಲಿಸಿ. ನಾವು ಒಂದೇ ಒಂದು ಮಾತು ಕೇಳುತ್ತೇವೆ. ನಿಮ್ಮ ಪಕ್ಷದ ಮಹಿಳಾ ಸಂಸದರನ್ನು ನಿಮ್ಮ ನಿವಾಸದಲ್ಲಿಯೇ ಥಳಿಸಿ 6 ದಿನಗಳು ಕಳೆದರೂ ನೀವು ಮೌನ ಮುರಿದಿಲ್ಲ. ಮಹಿಳಾ ಸಂಸದೆಯೊಂದಿಗೆ ಅನುಚಿತ ವರ್ತನೆಗೆ ಯಾರು ಹೊಣೆ ಎಂದು ನಮಗೆ ತಿಳಿಸಿ. ನೀವು ಅದರ ಬಗ್ಗೆ ಏಕೆ ಮೌನ ವಹಿಸಿದ್ದೀರಿ?” ಎಂದು ಬಿಜೆಪಿ ಮುಖಂಡ ವೀರೇಂದ್ರ ಸಚ್​ದೇವ ಪ್ರಶ್ನಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ