AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಜಂತರ್ ಮಂತರ್​​ನಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ, ಎಫ್ಐಆರ್ ದಾಖಲು

Viral Video: ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೊದಲ್ಲಿ ಮುಸ್ಲಿಮರನ್ನು ಬೆದರಿಸುವ ಘೋಷವಾಕ್ಯ ಜತೆಗೆ "ರಾಮ್, ರಾಮ್" ಘೋಷಣೆಗಳೂ ಇವೆ.  "ಹಿಂದೂಸ್ತಾನ್ ಮೇ ರೆಹನಾ ಹೋಗಾ, ಜೈ ಶ್ರೀ ರಾಮ್ ಕೆಹನಾ ಹೋಗಾ (ಭಾರತದಲ್ಲಿ ಇರಬೇಕಾದರೆ ಜೈ ಶ್ರೀ ರಾಮ್ ಎಂದು ಹೇಳಬೇಕು)" ಎಂಬ ಘೋಷಣೆ ಕೂಗಲಾಗಿದೆ.

ದೆಹಲಿಯ ಜಂತರ್ ಮಂತರ್​​ನಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ, ಎಫ್ಐಆರ್ ದಾಖಲು
ಭಾರತ್ ಜೋಡೋ ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವ ಅಶ್ವನಿ ಉಪಾಧ್ಯಾಯ್ ( ಕೃಪೆ: ಟ್ವಿಟರ್)
TV9 Web
| Edited By: |

Updated on: Aug 09, 2021 | 4:49 PM

Share

ದೆಹಲಿ: ದೆಹಲಿಯ ಹೃದಯ ಭಾಗದಲ್ಲಿರುವ ಜಂತರ್ ಮಂತರ್‌ನಲ್ಲಿ ಭಾನುವಾರ ನಡೆದ ಮೆರವಣಿಗೆಯ ವಿಡಿಯೊ ವೈರಲ್ ಆಗಿದ್ದು, ಈ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ ಕೂಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅದೇ ವೇಳೆ ಅನುಮತಿ ಇಲ್ಲದೆಯೇ ಮೆರವಣಿಗೆ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಮೆರವಣಿಗೆಯನ್ನು ಸುಪ್ರೀಂ ಕೋರ್ಟ್ ವಕೀಲ ಹಾಗೂ ದೆಹಲಿ ಬಿಜೆಪಿ ಮಾಜಿ ವಕ್ತಾರ ಅಶ್ವನಿ ಉಪಾಧ್ಯಾಯ ಆಯೋಜಿಸಿದ್ದರು ಎಂದು ವರದಿಯಾಗಿದೆ. ಆದರೆ ಅವರು ವಿಡಿಯೊದ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.ಕೇವಲ ಐದು ಅಥವಾ ಆರು ಜನರು ಘೋಷಣೆಗಳನ್ನು ಕೂಗುತ್ತಿದ್ದಾರೆ, ಅವರು ಅಂತಹ ಘೋಷಣೆಗಳನ್ನು ಕೂಗಬಾರದಿತ್ತು ಎಂದು ಅವರು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೊದಲ್ಲಿ ಮುಸ್ಲಿಮರನ್ನು ಬೆದರಿಸುವ ಘೋಷವಾಕ್ಯ ಜತೆಗೆ “ರಾಮ್, ರಾಮ್” ಘೋಷಣೆಗಳೂ ಇವೆ.  “ಹಿಂದೂಸ್ತಾನ್ ಮೇ ರೆಹನಾ ಹೋಗಾ, ಜೈ ಶ್ರೀ ರಾಮ್ ಕೆಹನಾ ಹೋಗಾ (ಭಾರತದಲ್ಲಿ ಇರಬೇಕಾದರೆ ಜೈ ಶ್ರೀ ರಾಮ್ ಎಂದು ಹೇಳಬೇಕು)” ಎಂಬ ಘೋಷಣೆ ಕೂಗಲಾಗಿದೆ. ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಮತ್ತು ವಿಡಿಯೊದಲ್ಲಿರುವವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.

ದ್ವೇಷದ ಭಾಷಣಗಳಿಗೆ ಕುಖ್ಯಾತರಾಗಿರುವ ಧಾರ್ಮಿಕ ಮುಖಂಡ ನರಸಿಂಗಾನಂದ ಸರಸ್ವತಿಯವರ ಉಪಸ್ಥಿತಿಯಲ್ಲಿ ಘೋಷಣೆಗಳನ್ನು ಕೂಗಲಾಯಿತು. ವಸಾಹತು ಕಾನೂನುಗಳು ಮತ್ತು ಏಕರೂಪದ ಕಾನೂನುಗಳನ್ನು ಮಾಡಿ” ಎಂದು ಒತ್ತಾಯಿಸಿ ನಡೆಸಲಾದ ಮೆರವಣಿಗೆಯನ್ನು ಹಳೆಯ ವಸಾಹತುಶಾಹಿ ಯುಗದ ಕಾನೂನುಗಳ ವಿರುದ್ಧವಾಗಿ ಆಯೋಜಿಸಲಾಗಿದೆ.

ಕೊವಿಡ್ ನಿಯಮಗಳಿಂದಾಗಿ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಎಂದು ಪೊಲೀಸರು ಹೇಳುತ್ತಾರೆ. “ಅಲ್ಲಿ ನೆರೆದಿದ್ದ ಜನರಿಗೆ ಯಾವುದೇ ಅನುಮತಿಯಿಲ್ಲ. ಕೆಲವರು ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದು ನಮ್ಮ ಗಮನಕ್ಕೆ ಬಂದಿದೆ. ನಮಗೂ ಒಂದು ವಿಡಿಯೊ ಸಿಕ್ಕಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ದೀಪಕ್ ಯಾದವ್ ಹೇಳಿದರು. ಈ ಘಟನೆಯನ್ನು ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಇಂದು ಸಂಸತ್ತಿನಲ್ಲಿ ಪ್ರಸ್ತಾಪಿಸಿದರು. ಒವೈಸಿ ಲೋಕಸಭೆಯಲ್ಲಿ ಮುಸ್ಲಿಮರ ವಿರುದ್ಧ “ನರಮೇಧದ ಘೋಷಣೆಗಳನ್ನು” ಎತ್ತಿದ್ದಾರೆ ಮತ್ತು ಭಾಗವಹಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

ಹೈದರಾಬಾದ್ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾ ಪ್ರಹಾರ ಮಾಡಿದ್ದು, ಪ್ರಧಾನಿ ನಿವಾಸದಿಂದ 20 ನಿಮಿಷಗಳ ದೂರದಲ್ಲಿರುವ ಜಂತರ್ ಮಂತರ್ ನಲ್ಲಿ ಇಂತಹ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳಿದರು.

ಅಷ್ಟಕ್ಕೂ ಈ ಪುಂಡ ಪೋಕರಿಗಳ ಹೆಚ್ಚುತ್ತಿರುವ ಧೈರ್ಯದ ರಹಸ್ಯವೇನು? ಮೋದಿ ಸರ್ಕಾರವು ಅವರ ಜೊತೆ ನಿಂತಿದೆ ಎಂದು ಅವರಿಗೆ ತಿಳಿದಿದೆ. ಜುಲೈ 24 ರಂದು ಕೇಂದ್ರ ಸರ್ಕಾರವು ರಾಷ್ಟ್ರೀಯ ಭದ್ರತಾ ಕಾಯಿದೆ (NSA) ಅಡಿಯಲ್ಲಿ ದೆಹಲಿ ಪೊಲೀಸರಿಗೆ ಯಾವುದೇ ವ್ಯಕ್ತಿಯನ್ನು ಬಂಧಿಸುವ ಹಕ್ಕನ್ನು ನೀಡಿತ್ತು. ಆದರೂ ದೆಹಲಿ ಪೊಲೀಸರು ಸದ್ದಿಲ್ಲದೆ ತಮಾಷೆ ನೋಡುತ್ತಿದ್ದಾರೆ “ಎಂದು ಒವೈಸಿ ಹೇಳಿದರು.

ದೆಹಲಿಯ ಹೊರವಲಯದಲ್ಲಿರುವ ದ್ವಾರಕಾದಲ್ಲಿ ಭಾನುವಾರ ನಡೆದ ಮಹಾಪಂಚಾಯತ್ ಅಥವಾ ದೊಡ್ಡ ಸಾರ್ವಜನಿಕ ಸಭೆ ಬಗ್ಗೆ ಉಲ್ಲೇಖಿಸಿದ ಒವೈಸಿ, ಈ ಪ್ರದೇಶದಲ್ಲಿ ಹಜ್ ಹೌಸ್ ನಿರ್ಮಾಣವನ್ನು ವಿರೋಧಿಸಿದರು. ಇಲ್ಲಿನ ವಿಡಿಯೊಗಳಲ್ಲಿ ಪ್ರತಿಭಟನಾಕಾರರು ಕೋಮು ಪ್ರಚೋದನಾತ್ಮಕ ಟೀಕೆಗಳನ್ನು ಮತ್ತು ಹಿಂಸೆಯ ಬೆದರಿಕೆ ಹಾಕುವುದನ್ನು ಕಾಣಬಹುದು.

ಇದನ್ನೂ ಓದಿ:  Karnataka SSLC Result 2021: ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಟಾಪರ್ಸ್ ಯಾರು? ಇಲ್ಲಿದೆ ವಿವರ

ಇದನ್ನೂ ಓದಿ:  ಸ್ವಾತಂತ್ರ್ಯ ಬಂದ ಮೇಲೆ ಮೋದಿ ಹುಟ್ಟಿದ್ದು; ನಾನು ಮೋದಿಗಿಂತ ಸೀನಿಯರ್ ಗೊತ್ತಾ? ನಮಗೇ ಪಾಠ ಮಾಡ್ತಾರೆ: ಸಿದ್ದರಾಮಯ್ಯ

(Communal slogans raised at the event At Delhi’s Jantar Mantar threatening Muslims can be heard)

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ