Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಒಮಿಕ್ರಾನ್​ ಸಮುದಾಯ ಪ್ರಸರಣ ಆರಂಭ?-ಆರೋಗ್ಯ ಸಚಿವರು ಹೇಳಿದ್ದೇನು?

ಸದ್ಯ ದೇಶದಲ್ಲಿ ಅತಿಹೆಚ್ಚು ಒಮಿಕ್ರಾನ್​ ಸೋಂಕಿತರು ಇರುವುದು ದೆಹಲಿಯಲ್ಲಿ.  ಅಲ್ಲಿ 263 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ. ದೆಹಲಿ ಬಿಟ್ಟರೆ ಮಹಾರಾಷ್ಟ್ರದಲ್ಲಿ  252 ಒಮಿಕ್ರಾನ್​ ಸೋಂಕಿನ ಕೇಸ್​ಗಳು ದಾಖಲಾಗಿವೆ.

ದೆಹಲಿಯಲ್ಲಿ ಒಮಿಕ್ರಾನ್​ ಸಮುದಾಯ ಪ್ರಸರಣ ಆರಂಭ?-ಆರೋಗ್ಯ ಸಚಿವರು ಹೇಳಿದ್ದೇನು?
ಸತ್ಯೇಂದ್ರ ಜೈನ್​
Follow us
TV9 Web
| Updated By: Lakshmi Hegde

Updated on: Dec 30, 2021 | 1:49 PM

ದೆಹಲಿಯಲ್ಲಿ ಒಟ್ಟಾರೆ ಕೊವಿಡ್​ 19 ಪ್ರಕರಣ(Covid 19)ಗಳಲ್ಲಿ ಶೇ.46ರಷ್ಟು  ಒಮಿಕ್ರಾನ್​ ಪ್ರಕರಣ(Omicron Variant)ಗಳಾಗಿವೆ ಎಂಬುದು ಇತ್ತೀಚಿನ ಜಿನೋಮ್​ ಸಿಕ್ವೆನ್ಸಿಂಗ್​ ವರದಿಯಿಂದ ಗೊತ್ತಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ತಿಳಿಸಿದ್ದಾರೆ. ಹಾಗೇ, ಯಾವುದೇ ಟ್ರಾವೆಲ್​ ಹಿಸ್ಟರಿ ಇಲ್ಲದವರಲ್ಲಿ (ಬೇರೆ ದೇಶಗಳಿಗೆ ಪ್ರಯಾಣ ಬೆಳೆಸದೆ ಇರುವವರು) ಕೂಡ ಒಮಿಕ್ರಾನ್​ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದರೆ, ಈ ರೂಪಾಂತರ ತಳಿ ಸಮುದಾಯದಲ್ಲಿ ಹಬ್ಬುತ್ತಿದೆ ಎಂಬುದಾಗಿ ಅರ್ಥ ಮಾಡಿಕೊಳ್ಳಬೇಕು ಎಂದೂ ತಿಳಿಸಿದ್ದಾರೆ.  

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಿನ್ನೆ 923 ಕೊವಿಡ್ 19 ಕೇಸ್​ಗಳು ದಾಖಲಾಗಿವೆ. ಇಲ್ಲಿ ಪಾಸಿಟಿವಿಟಿ ರೇಟ್​ 1.29ರಷ್ಟಿದೆ.  ನಗರದಲ್ಲಿ ಕೊವಿಡ್​ 19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ ಹಾಗೇ ಅದರೊಂದಿಗೆ ಒಮಿಕ್ರಾನ್​ ಪ್ರಕರಣಗಳೂ ಅಧಿಕವಾಗುತ್ತಿವೆ.  ಇತ್ತೀಚೆಗೆ ಬಂದ ಜಿನೋಮ್​ ಸಿಕ್ವೆನ್ಸಿಂಗ್​ ರಿಪೋರ್ಟ್​ ಪ್ರಕಾರ, ಒಟ್ಟಾರೆ ಕೊವಿಡ್​ 19 ಸೋಂಕಿತರಲ್ಲಿ ಶೇ.46ರಷ್ಟು ಒಮಿಕ್ರಾನ್​ ಪ್ರಕರಣಗಳಾಗಿವೆ. ಹೀಗೆ ಪತ್ತೆಯಾದ ಒಮಿಕ್ರಾನ್​ ಸೋಂಕಿತರಲ್ಲಿ ಕೆಲವರು ವಿದೇಶ ಪ್ರವಾಸಕ್ಕೆ ಹೋಗಿ ಬಂದವರು. ಇನ್ನೂ ಹಲವರಿಗೆ ಯಾವುದೇ ಟ್ರಾವೆಲ್​ ಹಿಸ್ಟರಿ ಇಲ್ಲ. ಅಂದರೆ ಒಮಿಕ್ರಾನ್​ ಕ್ರಮೇಣ ಸಮುದಾಯ ಪ್ರಸರಣವಾಗುತ್ತಿದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ದೆಹಲಿಯಲ್ಲಿಂದು 263 ಕೇಸ್​ಗಳು ಸದ್ಯ ದೇಶದಲ್ಲಿ ಅತಿಹೆಚ್ಚು ಒಮಿಕ್ರಾನ್​ ಸೋಂಕಿತರು ಇರುವುದು ದೆಹಲಿಯಲ್ಲಿ.  ಅಲ್ಲಿ 263 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ. ದೆಹಲಿ ಬಿಟ್ಟರೆ ಮಹಾರಾಷ್ಟ್ರದಲ್ಲಿ  252 ಒಮಿಕ್ರಾನ್​ ಸೋಂಕಿನ ಕೇಸ್​ಗಳು ದಾಖಲಾಗಿವೆ. ಕೊವಿಡ್​ 19ನ ಈ ಹೊಸ ತಳಿ ಈಗಾಗಲೇ 22 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಕಾಲಿಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.  ಮೊದಲು ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡ ಈ ಸೋಂಕು ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಹರಡುತ್ತಿದೆ. ಭಾರತದಲ್ಲಿಯೂ ಕೂಡ ಹರಡುವಿಕೆ ವೇಗ ಹೆಚ್ಚಾಗಿದೆ. ಇನ್ನು ಆರೋಗ್ಯ ತಜ್ಞರ ಪ್ರಕಾರ ಒಮಿಕ್ರಾನ್​ ವೈರಾಣು, ಡೆಲ್ಟಾಕ್ಕಿಂತ ಮೂರು ಪಟ್ಟು ವೇಗವಾಗಿ ಹರಡುತ್ತದೆ.

ಇದನ್ನೂ ಓದಿ: ಆಂಧ್ರ ಹುಡುಗನನ್ನು ವರಿಸಿದ ಟರ್ಕಿ ದೇಶದ ಯುವತಿ: ಭಾರತೀಯ ಸಂಪ್ರದಾಯದಂತೆ ವಿವಾಹವಾದ ಜೋಡಿ

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!