AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಒಮಿಕ್ರಾನ್​ ಸಮುದಾಯ ಪ್ರಸರಣ ಆರಂಭ?-ಆರೋಗ್ಯ ಸಚಿವರು ಹೇಳಿದ್ದೇನು?

ಸದ್ಯ ದೇಶದಲ್ಲಿ ಅತಿಹೆಚ್ಚು ಒಮಿಕ್ರಾನ್​ ಸೋಂಕಿತರು ಇರುವುದು ದೆಹಲಿಯಲ್ಲಿ.  ಅಲ್ಲಿ 263 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ. ದೆಹಲಿ ಬಿಟ್ಟರೆ ಮಹಾರಾಷ್ಟ್ರದಲ್ಲಿ  252 ಒಮಿಕ್ರಾನ್​ ಸೋಂಕಿನ ಕೇಸ್​ಗಳು ದಾಖಲಾಗಿವೆ.

ದೆಹಲಿಯಲ್ಲಿ ಒಮಿಕ್ರಾನ್​ ಸಮುದಾಯ ಪ್ರಸರಣ ಆರಂಭ?-ಆರೋಗ್ಯ ಸಚಿವರು ಹೇಳಿದ್ದೇನು?
ಸತ್ಯೇಂದ್ರ ಜೈನ್​
TV9 Web
| Edited By: |

Updated on: Dec 30, 2021 | 1:49 PM

Share

ದೆಹಲಿಯಲ್ಲಿ ಒಟ್ಟಾರೆ ಕೊವಿಡ್​ 19 ಪ್ರಕರಣ(Covid 19)ಗಳಲ್ಲಿ ಶೇ.46ರಷ್ಟು  ಒಮಿಕ್ರಾನ್​ ಪ್ರಕರಣ(Omicron Variant)ಗಳಾಗಿವೆ ಎಂಬುದು ಇತ್ತೀಚಿನ ಜಿನೋಮ್​ ಸಿಕ್ವೆನ್ಸಿಂಗ್​ ವರದಿಯಿಂದ ಗೊತ್ತಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್​ ತಿಳಿಸಿದ್ದಾರೆ. ಹಾಗೇ, ಯಾವುದೇ ಟ್ರಾವೆಲ್​ ಹಿಸ್ಟರಿ ಇಲ್ಲದವರಲ್ಲಿ (ಬೇರೆ ದೇಶಗಳಿಗೆ ಪ್ರಯಾಣ ಬೆಳೆಸದೆ ಇರುವವರು) ಕೂಡ ಒಮಿಕ್ರಾನ್​ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದರೆ, ಈ ರೂಪಾಂತರ ತಳಿ ಸಮುದಾಯದಲ್ಲಿ ಹಬ್ಬುತ್ತಿದೆ ಎಂಬುದಾಗಿ ಅರ್ಥ ಮಾಡಿಕೊಳ್ಳಬೇಕು ಎಂದೂ ತಿಳಿಸಿದ್ದಾರೆ.  

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಿನ್ನೆ 923 ಕೊವಿಡ್ 19 ಕೇಸ್​ಗಳು ದಾಖಲಾಗಿವೆ. ಇಲ್ಲಿ ಪಾಸಿಟಿವಿಟಿ ರೇಟ್​ 1.29ರಷ್ಟಿದೆ.  ನಗರದಲ್ಲಿ ಕೊವಿಡ್​ 19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ ಹಾಗೇ ಅದರೊಂದಿಗೆ ಒಮಿಕ್ರಾನ್​ ಪ್ರಕರಣಗಳೂ ಅಧಿಕವಾಗುತ್ತಿವೆ.  ಇತ್ತೀಚೆಗೆ ಬಂದ ಜಿನೋಮ್​ ಸಿಕ್ವೆನ್ಸಿಂಗ್​ ರಿಪೋರ್ಟ್​ ಪ್ರಕಾರ, ಒಟ್ಟಾರೆ ಕೊವಿಡ್​ 19 ಸೋಂಕಿತರಲ್ಲಿ ಶೇ.46ರಷ್ಟು ಒಮಿಕ್ರಾನ್​ ಪ್ರಕರಣಗಳಾಗಿವೆ. ಹೀಗೆ ಪತ್ತೆಯಾದ ಒಮಿಕ್ರಾನ್​ ಸೋಂಕಿತರಲ್ಲಿ ಕೆಲವರು ವಿದೇಶ ಪ್ರವಾಸಕ್ಕೆ ಹೋಗಿ ಬಂದವರು. ಇನ್ನೂ ಹಲವರಿಗೆ ಯಾವುದೇ ಟ್ರಾವೆಲ್​ ಹಿಸ್ಟರಿ ಇಲ್ಲ. ಅಂದರೆ ಒಮಿಕ್ರಾನ್​ ಕ್ರಮೇಣ ಸಮುದಾಯ ಪ್ರಸರಣವಾಗುತ್ತಿದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ದೆಹಲಿಯಲ್ಲಿಂದು 263 ಕೇಸ್​ಗಳು ಸದ್ಯ ದೇಶದಲ್ಲಿ ಅತಿಹೆಚ್ಚು ಒಮಿಕ್ರಾನ್​ ಸೋಂಕಿತರು ಇರುವುದು ದೆಹಲಿಯಲ್ಲಿ.  ಅಲ್ಲಿ 263 ಒಮಿಕ್ರಾನ್​ ಪ್ರಕರಣಗಳು ದಾಖಲಾಗಿವೆ. ದೆಹಲಿ ಬಿಟ್ಟರೆ ಮಹಾರಾಷ್ಟ್ರದಲ್ಲಿ  252 ಒಮಿಕ್ರಾನ್​ ಸೋಂಕಿನ ಕೇಸ್​ಗಳು ದಾಖಲಾಗಿವೆ. ಕೊವಿಡ್​ 19ನ ಈ ಹೊಸ ತಳಿ ಈಗಾಗಲೇ 22 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಕಾಲಿಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.  ಮೊದಲು ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡ ಈ ಸೋಂಕು ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಹರಡುತ್ತಿದೆ. ಭಾರತದಲ್ಲಿಯೂ ಕೂಡ ಹರಡುವಿಕೆ ವೇಗ ಹೆಚ್ಚಾಗಿದೆ. ಇನ್ನು ಆರೋಗ್ಯ ತಜ್ಞರ ಪ್ರಕಾರ ಒಮಿಕ್ರಾನ್​ ವೈರಾಣು, ಡೆಲ್ಟಾಕ್ಕಿಂತ ಮೂರು ಪಟ್ಟು ವೇಗವಾಗಿ ಹರಡುತ್ತದೆ.

ಇದನ್ನೂ ಓದಿ: ಆಂಧ್ರ ಹುಡುಗನನ್ನು ವರಿಸಿದ ಟರ್ಕಿ ದೇಶದ ಯುವತಿ: ಭಾರತೀಯ ಸಂಪ್ರದಾಯದಂತೆ ವಿವಾಹವಾದ ಜೋಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್