Jagan Mohan Reddy: ಆಂಧ್ರ ಸಿಎಂ ಜಗನ್​ಮೋಹನ್​ ರೆಡ್ಡಿ ಪೋಸ್ಟರ್​ ಹರಿದಿದ್ದಕ್ಕೆ ನಾಯಿ ವಿರುದ್ಧ ದೂರು ದಾಖಲು

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರ ಪೋಸ್ಟರ್ ಹರಿದಿದ್ದಕ್ಕೆ ನಾಯಿಯ ವಿರುದ್ಧ ದೂರು ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Jagan Mohan Reddy: ಆಂಧ್ರ ಸಿಎಂ ಜಗನ್​ಮೋಹನ್​ ರೆಡ್ಡಿ ಪೋಸ್ಟರ್​ ಹರಿದಿದ್ದಕ್ಕೆ ನಾಯಿ ವಿರುದ್ಧ ದೂರು ದಾಖಲು
ಜಗನ್​ಮೋಹನ್ ರೆಡ್ಡಿ ಪೋಸ್ಟರ್​
Image Credit source: NDTV

Updated on: Apr 14, 2023 | 7:48 AM

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರ ಪೋಸ್ಟರ್ ಹರಿದಿದ್ದಕ್ಕೆ ನಾಯಿಯ ವಿರುದ್ಧ ದೂರು ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ತೆಲುಗು ದೇಶಂ ಬೆಂಬಲಿಗರಾದ ದಾಸರಿ ಉದಯಶ್ರೀ ಅವರು ವಿಜಯವಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಡಿಯೋದಲ್ಲಿ ನಾಯಿಯೊಂದು ಬೀದಿಯ ಗೋಡೆಯ ಮೇಲೆ ಅಂಟಿಸಲಾಗಿದ್ದ ಪೋಸ್ಟರ್​ ಅನ್ನು ಕಿತ್ತು ಹಾಕಿದ್ದನ್ನು ಕಾಣಬಹುದು.

ಇದು ಸಿಎಂ ಜಗನ್​ಮೋಹನ್​ ರೆಡ್ಡಿ ಅವರಿಗೆ ಮಾಡಿರುವ ಅವಮಾನವಾಗಿದೆ, ನಾಯಿಗೆ ಪ್ರಚೋದನೆ ನೀಡಿದವರು ಹಾಗೂ ಈ ವೈರಲ್ ಆಗಿರುವ ವಿಡಿಯೋ ತುಣಕನ್ನು ಪ್ರಸಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉದಯಶ್ರೀ ತಿಳಿಸಿದ್ದಾರೆ.

ಮತ್ತಷ್ಟು ಓದಿ: Andhra Capital- ವಿಶಾಖಪಟ್ಟಣಂ ಆಂಧ್ರ ರಾಜಧಾನಿಯಾಗಲಿದೆ: ಸಿಎಂ ಜಗನ್ಮೋಹನ್ ರೆಡ್ಡಿ

ಜಗನ್​ ಮೋಹನ್ ರೆಡ್ಡಿ ಬಗ್ಗೆ ನಮಗೆ ಗೌರವವಿದೆ ಯಾವುದೋ ನಾಯಿ ಅವರಿಗೆ ಅವಮಾನ ಮಾಡುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಪೋಸ್ಟರ್ ಮುಖ್ಯಮಂತ್ರಿಯವರ ಇತ್ತೀಚಿನ ಕಾರ್ಯಕ್ರಮಗಳಲ್ಲಿ ಒಂದಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us