AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiren Rijiju: ನ್ಯಾಯಾಧೀಶರ ವಿರುದ್ಧ ದೂರು ನೀಡಬಹುದು: ಕಾನೂನು ಸಚಿವಾಲಯ

ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ದೂರುಗಳನ್ನು ಸ್ವೀಕರಿಸಲಾಗುತ್ತದೆ ಎಂದು ಕಾನೂನು ಸಚಿವಾಲಯವು ತಿಳಿಸಿದೆ.

Kiren Rijiju: ನ್ಯಾಯಾಧೀಶರ ವಿರುದ್ಧ ದೂರು ನೀಡಬಹುದು: ಕಾನೂನು ಸಚಿವಾಲಯ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 07, 2023 | 10:59 AM

ದೆಹಲಿ: ಕಾಲಕಾಲಕ್ಕೆ ಅನುಗುಣವಾಗಿ ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ದೂರುಗಳನ್ನು ಸ್ವೀಕರಿಸಲಾಗುತ್ತದೆ ಎಂದು ಕಾನೂನು ಸಚಿವಾಲಯವು ತಿಳಿಸಿದೆ. ಆದರೆ ಅದು ಉನ್ನತ ನ್ಯಾಯಾಂಗದ ಸೇವೆಯಲ್ಲಿರುವ ಸದಸ್ಯರ ನೇಮಕಾತಿ ಮತ್ತು ಸೇವಾ ಷರತ್ತುಗಳಿಗೆ ಸಂಬಂಧಿಸಿದರೆ ಮಾತ್ರ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಗುರುವಾರ ರಾಜ್ಯಸಭೆಗೆ ತಿಳಿಸಿದರು. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರ ಪ್ರಕಾರ ಸುಪ್ರೀಂ ಕೋರ್ಟ್‌ನ ಕೆಲವು ಮಾಜಿ ನ್ಯಾಯಾಧೀಶರು ಭಾರತ ವಿರೋಧಿ ಗುಂಪುಗಳನ್ನು ಬೆಂಬಲಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಮಾಹಿತಿಯ ಮೂಲವನ್ನು ಬಹಿರಂಗಪಡಿಸಲು ಮತ್ತು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಸರ್ಕಾರವು ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಮಾಹಿತಿ ನೀಡಿದೆಯೇ ಎಂದು ಸಹ ಸಚಿವರನ್ನು ಕೇಳಲಾಯಿತು.

ಈ ಪ್ರಶ್ನೆಗೆ ಲಿಖಿತ ರೂಪದಲ್ಲಿ ನೀಡಲಾಗಿದ್ದ ನಾಲ್ಕು ಉಪ-ಪ್ರಶ್ನೆಗಳಿಗೆ ರಿಜಿಜು ಅವರು ನೇರ ಪ್ರತಿಕ್ರಿಯೆಯನ್ನು ನೀಡಿಲ್ಲ, ಆದರೆ ಇದೇ ಪ್ರಶ್ನೆಗೆ ಹಿಂದಿ ಪತ್ರಕ್ಕೆ ನಕಾರಾತ್ಮಕವಾಗಿ ಉತ್ತರಿಸಿದ್ದಾರೆ. ಅವರು ಎ 2 ಡಿ ಉಪ ಪ್ರಶ್ನೆಗಳಿಗೆ ಹೌದು, ಇಲ್ಲ ಎಂದು ತಿಳಿಸಿದ್ದಾರೆ. ಕಾಲಕಾಲಕ್ಕೆ, ನ್ಯಾಯಾಂಗ ಇಲಾಖೆಯಲ್ಲಿ (ಕಾನೂನು ಸಚಿವಾಲಯದಲ್ಲಿ) ಹಾಲಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ಜೊತೆಗೆ ನಿವೃತ್ತ ನ್ಯಾಯಾಧೀಶರ ವಿರುದ್ಧ ದೂರುಗಳನ್ನು ಸ್ವೀಕರಿಸಲಾಗುತ್ತದೆ. ನ್ಯಾಯಾಂಗ ಇಲಾಖೆಯು ಹಾಲಿ ನ್ಯಾಯಾಧೀಶರ ನೇಮಕಾತಿ ಮತ್ತು ಸೇವಾ ಷರತ್ತುಗಳಿಗೆ ಮಾತ್ರ ಈ ಅವಕಾಶಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನಿವೃತ್ತ ನ್ಯಾಯಮೂರ್ತಿಗಳಿಗೆ ಸಂಬಂಧಿಸಿದ ದೂರುಗಳನ್ನು ನ್ಯಾಯಾಂಗ ಇಲಾಖೆಯು ನಿರ್ವಹಿಸುವುದಿಲ್ಲ ಎಂದು ಅವರು ಹೇಳಿದರು. ಉನ್ನತ ನ್ಯಾಯಾಂಗದ “ಇನ್-ಹೌಸ್ ಮೆಕ್ಯಾನಿಸಂ”(ಆಂತರಿಕ ಯಾಂತ್ರಿಕ ವ್ಯವಸ್ಥೆ) ಮೂಲಕ ನಿರ್ವಹಿಸಲಾಗುತ್ತದೆ ಎಂದು ಅವರು ಹೇಳಿದರು. ಮೇ 7, 1997 ರಂದು ಸುಪ್ರೀಂ ಕೋರ್ಟ್ ತನ್ನ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಎರಡು ನಿರ್ಣಯಗಳನ್ನು ಅಂಗೀಕರಿಸಿದೆ. ಒಂದು ನ್ಯಾಯಾಂಗ ಜೀವನದ ಮೌಲ್ಯಗಳ ಮರುಸ್ಥಾಪನೆ ಮತ್ತು ನ್ಯಾಯಾಂಗ ಜೀವನದ ಸಾರ್ವತ್ರಿಕವಾಗಿ ಅಂಗೀಕರಿಸಲ್ಪಟ್ಟ ಮೌಲ್ಯಗಳನ್ನು ಅನುಸರಿಸದ ನ್ಯಾಯಾಧೀಶರ ವಿರುದ್ಧ ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವ ಆಂತರಿಕ ಕಾರ್ಯವಿಧಾನವಾಗಿದೆ.

ಇದನ್ನೂ ಓದಿ: ನ್ಯಾಯಮೂರ್ತಿಗಳ ನೇಮಕದ ಕೊಲಿಜಿಯಂ ವ್ಯವಸ್ಥೆ ಬಗ್ಗೆ  ಕಾನೂನು ಸಚಿವ ಕಿರಣ್ ರಿಜಿಜು ಹೇಳಿಕೆಗೆ ಸುಪ್ರೀಂಕೋರ್ಟ್ ಆಕ್ಷೇಪ

ಉನ್ನತ ನ್ಯಾಯಾಂಗದಲ್ಲಿ ಸ್ಥಾಪಿತವಾದ “ಆಂತರಿಕ ಕಾರ್ಯವಿಧಾನ” ದ ಪ್ರಕಾರ, ಭಾರತದ ಮುಖ್ಯ ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ಮತ್ತು ಉಚ್ಚ ನ್ಯಾಯಾಲಯಗಳ ಮುಖ್ಯ ನ್ಯಾಯಮೂರ್ತಿಗಳ ನಡವಳಿಕೆಯ ವಿರುದ್ಧ ದೂರುಗಳನ್ನು ಸ್ವೀಕರಿಸಲು ಸಮರ್ಥರಾಗಿರುತ್ತಾರೆ.

ಅದೇ ರೀತಿ, ಹೈಕೋರ್ಟ್ ನ್ಯಾಯಾಧೀಶರ ನಡವಳಿಕೆಯ ವಿರುದ್ಧ ದೂರುಗಳನ್ನು ಸ್ವೀಕರಿಸಲು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಸಮರ್ಥರಾಗಿರುತ್ತಾರೆ. ನ್ಯಾಯಾಂಗ ಸಚಿವಾಲಯವು ಸ್ವೀಕರಿಸಿದ ದೂರುಗಳನ್ನು ಭಾರತದ ಮುಖ್ಯ ನ್ಯಾಯಾಧೀಶರಿಗೆ ಅಥವಾ ಸಂಬಂಧಪಟ್ಟ ಹೈಕೋರ್ಟ್‌ಗಳ ಮುಖ್ಯ ನ್ಯಾಯಾಧೀಶರಿಗೆ ಸೂಕ್ತ ಕ್ರಮಕ್ಕಾಗಿ ರವಾನಿಸಲಾಗುತ್ತದೆ ಎಂದು ಅವರು ಹೇಳಿದರು.

Published On - 10:59 am, Fri, 7 April 23

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ