AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಿಯಾ ಗಾಂಧಿಗೆ ಶ್ವಾನ ಉಡುಗೊರೆ, ನೂರಿ ಹೆಸರಿನ ಕುರಿತು ಆಕ್ಷೇಪ, ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು

ತಾಯಿ ಸೋನಿಯಾ ಗಾಂಧಿ(Sonia Gandhi)ಗೆ ಶ್ವಾನವನ್ನು ಉಡುಗೊರೆಯಾಗಿ ನೀಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ತಮ್ಮ ನಾಯಿಗೆ ನೂರಿ ಎಂದು ಹೆಸರಿಟ್ಟ ಪ್ರಕರಣದಲ್ಲಿ ಹೊಸ ವಿವಾದ ಎದ್ದಿದೆ. ಎಐಎಂಐಎಂ ರಾಜ್ಯ ವಕ್ತಾರ ಮೊಹಮ್ಮದ್ ಫರ್ಹಾನ್ ಪ್ರಯಾಗ್‌ರಾಜ್‌ನ ಸಿಜೆಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ರಾಹುಲ್ ಗಾಂಧಿ ಅವರ ನಾಯಿಗೆ ನೂರಿ ಎಂದು ಹೆಸರಿಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಮೊಹಮ್ಮದ್ ಫರ್ಹಾನ್ ಆರೋಪಿಸಿದ್ದಾರೆ.

ಸೋನಿಯಾ ಗಾಂಧಿಗೆ ಶ್ವಾನ ಉಡುಗೊರೆ, ನೂರಿ ಹೆಸರಿನ ಕುರಿತು ಆಕ್ಷೇಪ, ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು
ರಾಹುಲ್ ಗಾಂಧಿImage Credit source: Indian Express
ನಯನಾ ರಾಜೀವ್
|

Updated on:Oct 18, 2023 | 10:43 AM

Share

ತಾಯಿ ಸೋನಿಯಾ ಗಾಂಧಿ(Sonia Gandhi)ಗೆ ಶ್ವಾನವನ್ನು ಉಡುಗೊರೆಯಾಗಿ ನೀಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ತಮ್ಮ ನಾಯಿಗೆ ನೂರಿ ಎಂದು ಹೆಸರಿಟ್ಟ ಪ್ರಕರಣದಲ್ಲಿ ಹೊಸ ವಿವಾದ ಎದ್ದಿದೆ. ಎಐಎಂಐಎಂ ರಾಜ್ಯ ವಕ್ತಾರ ಮೊಹಮ್ಮದ್ ಫರ್ಹಾನ್ ಪ್ರಯಾಗ್‌ರಾಜ್‌ನ ಸಿಜೆಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ರಾಹುಲ್ ಗಾಂಧಿ ಅವರ ನಾಯಿಗೆ ನೂರಿ ಎಂದು ಹೆಸರಿಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಮೊಹಮ್ಮದ್ ಫರ್ಹಾನ್ ಆರೋಪಿಸಿದ್ದಾರೆ.

ರಾಹುಲ್ ಗಾಂಧಿಯವರ ಈ ಕೃತ್ಯ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದೆ. ಇಸ್ಲಾಂನಲ್ಲಿ ನೂರಿ ಎಂಬ ಪದವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ.

ಈ ಪದವು ಇಸ್ಲಾಂ ಧರ್ಮದಲ್ಲಿ ಪ್ರವಾದಿ ಮೊಹಮ್ಮದ್‌ಗೆ ಸಂಬಂಧಿಸಿದೆ ಎಂದು ಅವರು ಹೇಳಿದರು. ನೂರ್ ಎಂಬ ಪದವನ್ನು ಪವಿತ್ರ ಕುರಾನ್‌ನಲ್ಲಿ 42 ಬಾರಿ ಉಲ್ಲೇಖಿಸಲಾಗಿದೆ ಮತ್ತು ನೂರ್‌ನ ಸಮಾನಾರ್ಥಕ ಪದವು ನೂರಿ.

ಮತ್ತಷ್ಟು ಓದಿ:ಸೋನಿಯಾ ಗಾಂಧಿಗೆ ಕ್ಯೂಟ್ ಗಿಫ್ಟ್; ಕುಟುಂಬದ ಹೊಸ ಸದಸ್ಯೆಯನ್ನು ಪರಿಚಯಿಸಿದ ರಾಹುಲ್ ಗಾಂಧಿ

ಇದಲ್ಲದೆ ಪ್ರವಾದಿ ಮೊಹಮ್ಮದ್ ಸಾಹಿಬ್ ಅವರನ್ನು ನೂರಿ ಬಶರ್ ಎಂದೂ ಕರೆಯುತ್ತಾರೆ. ಇದಲ್ಲದೇ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳಿಗೆ ನೂರಿ ಎಂದು ಹೆಸರಿಡಲಾಗಿದೆ. ಸದ್ಯ ರಾಹುಲ್ ಗಾಂಧಿ ವಿರುದ್ಧದ ದೂರನ್ನು ಪ್ರಯಾಗ್‌ರಾಜ್‌ನ ಸಿಜೆಎಂ ನ್ಯಾಯಾಲಯ ಅಂಗೀಕರಿಸಿದೆ.

ನಾಯಿಗೆ ನೂರಿ ಎಂದು ಹೆಸರಿಡಬಾರದಿತ್ತು

ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಅಕ್ಟೋಬರ್​ 4 ರಂದು ಗೋವಾದಿಂದ ತಂದ ನಾಯಿಮರಿಯನ್ನು ತನ್ನ ತಾಯಿಗೆ ಉಡುಗೊರೆಯಾಗಿ ನೀಡಿದ್ದರು. ಅದಕ್ಕೆ ನೂರಿ ಎಂದು ಹೆಸರಿಟ್ಟಿದ್ದರು. ರಾಹುಲ್ ಗಾಂಧಿ ವಿರುದ್ಧ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಮತ್ತು ಅವಮಾನಿಸಿರುವ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮುಸ್ಲಿಮ್ ಸಮುದಾಯದ ಜನರಲ್ಲಿ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಲಾಗಿದೆ.

ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡು ಈ ಪ್ರಕರಣದಲ್ಲಿ ನ್ಯಾಯಾಲಯ ಮುಂದಿನ ಕ್ರಮ ಕೈಗೊಂಡರೆ ರಾಹುಲ್ ಗಾಂಧಿ ವಿರುದ್ಧ ಸೆಕ್ಷನ್ 295ಎ ಅಡಿಯಲ್ಲಿ ಪ್ರಕರಣ ದಾಖಲಿಸಬಹುದಾಗಿದೆ. ಈ ಸೆಕ್ಷನ್ ಅಡಿಯಲ್ಲಿ, ಆರೋಪ ಸಾಬೀತಾದರೆ, ಆರೋಪಿಗೆ 3 ವರ್ಷಕ್ಕಿಂತ ಹೆಚ್ಚು ಶಿಕ್ಷೆ ವಿಧಿಸಲು ಅವಕಾಶವಿದೆ.

ರಾಹುಲ್ ಗಾಂಧಿ ಧರ್ಮಕ್ಕೆ ಅವಮಾನ ಮಾಡಿದ್ದಾರೆ

IPCC ಯ ಸೆಕ್ಷನ್ 295A ಅಡಿಯಲ್ಲಿ, ಯಾವುದೇ ವ್ಯಕ್ತಿ ಉದ್ದೇಶಪೂರ್ವಕವಾಗಿ ಅಥವಾ ದುರುದ್ದೇಶದಿಂದ ಭಾರತದ ಯಾವುದೇ ಭಾಗದ ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ಪ್ರಯತ್ನ ಎಂದು ಹೇಳಲಾಗುತ್ತದೆ.

ನವೆಂಬರ್ 8 ರಂದು ತನ್ನ ಹೇಳಿಕೆಗಾಗಿ ದೂರುದಾರನಿಗೆ ಸಮನ್ಸ್ ನೀಡಿದ್ದಾರೆ. ರಾಹುಲ್ ಗಾಂಧಿಯವರ ಈ ಕೃತ್ಯ ಪ್ರವಾದಿಯವರ ಜೊತೆಗೆ ಹಿರಿಯರಿಗೂ ಅವಮಾನ ಮಾಡಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇಸ್ಲಾಂ ಧರ್ಮದ ಉದಯದ ನಂತರ, ಯಾವುದೇ ಪ್ರಾಣಿಗಳಿಗೆ ನೂರಿ ಎಂದು ಹೆಸರಿಸಲಾಗಿಲ್ಲ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:42 am, Wed, 18 October 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು