AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಂಗಾಳವನ್ನು ಸುಟ್ಟರೆ…’; ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ವಿರುದ್ಧ ದೂರು

ಮಮತಾ ಬ್ಯಾನರ್ಜಿಯವರ ಹೇಳಿಕೆಯು ಪ್ರಚೋದನಕಾರಿಯಾಗಿದೆ. ಇದು ಪ್ರಾದೇಶಿಕ ದ್ವೇಷ ಮತ್ತು ವೈರತ್ವವನ್ನು ಪ್ರಚೋದಿಸುತ್ತದೆ. ಇದರಿಂದಾಗಿ ರಾಷ್ಟ್ರೀಯ ಸಾಮರಸ್ಯ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಅಪಾಯವನ್ನುಂಟುಮಾಡುತ್ತದೆ. ಮುಖ್ಯಮಂತ್ರಿಯಾಗಿ, ಬ್ಯಾನರ್ಜಿಯವರ ಮಾತುಗಳು ತೂಕದ್ದಾಗಿರುತ್ತದೆ. ಈ  ಆಪಾದಿತ ಹೇಳಿಕೆಗಳು ಅಪಾಯಕಾರಿಯಾಗಿವೆ ಎಂದು ಜಿಂದಾಲ್ ಹೇಳಿದ್ದಾರೆ.

'ಬಂಗಾಳವನ್ನು ಸುಟ್ಟರೆ...'; ಪ್ರಧಾನಿ ಮೋದಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ವಿರುದ್ಧ ದೂರು
ಮಮತಾ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
|

Updated on:Aug 29, 2024 | 5:15 PM

Share

ದೆಹಲಿ ಆಗಸ್ಟ್ 29: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಬುಧವಾರ ಮಾಡಿದ ಭಾಷಣದಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ವಕೀಲರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ತೃಣಮೂಲ ಛಾತ್ರ ಪರಿಷತ್ತಿನ (Trinamool Chhatra Parishad )ಕಾರ್ಯಕ್ರಮವೊಂದರಲ್ಲಿ ಬ್ಯಾನರ್ಜಿ ನೀಡಿದ ಹೇಳಿಕೆಯನ್ನು ಕೇಂದ್ರವಾಗಿಟ್ಟುಕೊಂಡು ಸುಪ್ರೀಂಕೋರ್ಟ್‌ನಲ್ಲಿ ವಕೀಲರಾಗಿರುವ ವಿನೀತ್ ಜಿಂದಾಲ್ ಅವರು ಸಲ್ಲಿಸಿದ ದೂರಿನಲ್ಲಿ, “ನೆನಪಿಡಿ, ಬಂಗಾಳ ಸುಟ್ಟುಹೋದರೆ, ಅಸ್ಸಾಂ, ಬಿಹಾರ, ಜಾರ್ಖಂಡ್, ಒಡಿಶಾ, ಮತ್ತು ದೆಹಲಿ ಕೂಡ ಉರಿಯುತ್ತದೆ ಎಂದು ಮಮತಾ ಹೇಳಿರುವುದಾಗಿ ದೂರಿದ್ದಾರೆ.

ಮಮತಾ ಬ್ಯಾನರ್ಜಿಯವರ ಹೇಳಿಕೆಯು ಪ್ರಚೋದನಕಾರಿಯಾಗಿದೆ. ಇದು ಪ್ರಾದೇಶಿಕ ದ್ವೇಷ ಮತ್ತು ವೈರತ್ವವನ್ನು ಪ್ರಚೋದಿಸುತ್ತದೆ. ಇದರಿಂದಾಗಿ ರಾಷ್ಟ್ರೀಯ ಸಾಮರಸ್ಯ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಅಪಾಯವನ್ನುಂಟುಮಾಡುತ್ತದೆ. ಮುಖ್ಯಮಂತ್ರಿಯಾಗಿ, ಬ್ಯಾನರ್ಜಿಯವರ ಮಾತುಗಳು ತೂಕದ್ದಾಗಿರುತ್ತದೆ. ಈ  ಆಪಾದಿತ ಹೇಳಿಕೆಗಳು ಅಪಾಯಕಾರಿಯಾಗಿವೆ ಎಂದು ಜಿಂದಾಲ್ ಹೇಳಿದ್ದಾರೆ.

“ಭಾರತದ ಜನಸಾಮಾನ್ಯರ ನಡುವೆ ಅಸಂಗತತೆಯನ್ನು ಉಂಟುಮಾಡುವ ಮತ್ತು ದ್ವೇಷ ಮತ್ತು ವೈರತ್ವವನ್ನು ಬೆಳೆಸುವ ಉದ್ದೇಶವನ್ನು ಹೊಂದಿರುವ ಅವರ ಹೇಳಿಕೆಯ ಪ್ರಚೋದನಕಾರಿ ಸ್ವರೂಪವನ್ನು ಗಮನಿಸಿದರೆ, ಅವರು ತಮ್ಮ ಹೇಳಿಕೆಯಲ್ಲಿ ದೆಹಲಿಯ ಹೆಸರನ್ನು ರಾಜ್ಯಗಳಲ್ಲಿ ಒಂದಾಗಿ ಉಲ್ಲೇಖಿಸಿದ್ದಾರೆ, ನಾನು ದೆಹಲಿಯ ನಿವಾಸಿಯಾಗಿದ್ದೇನೆ. ಮಮತಾ ಬ್ಯಾನರ್ಜಿ ವಿರುದ್ಧ BNS ನ ಸೆಕ್ಷನ್ 152, 192, 196 ಮತ್ತು 353 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ವಿನಂತಿಸಲಾಗಿದೆ, ಈ ಅಪರಾಧಗಳು ಗುರುತಿಸಬಹುದಾದ ಮತ್ತು ಗಂಭೀರ ಸ್ವರೂಪದ್ದಾಗಿವೆ ಎಂದಿದ್ದಾರೆ ವಕೀಲರು.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ಬುಧವಾರ ಮಮತಾ ಬ್ಯಾನರ್ಜಿ ಬಿಜೆಪಿಯ 12 ಗಂಟೆಗಳ ‘ಬಂಗಾಳ ಬಂದ್’ ಅನ್ನು ಖಂಡಿಸಿದ್ದು  ಇದು ಬಂಗಾಳವನ್ನು “ಕುಖ್ಯಾತಿ” ಮಾಡುವ ಪ್ರಯತ್ನ ಎಂದು ಕರೆದರು. ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷವನ್ನು ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ಇದು (ಆಂದೋಲನ) ಬಾಂಗ್ಲಾದೇಶದ ಪ್ರತಿಭಟನೆಯನ್ನು ಹೋಲುತ್ತದೆ ಎಂದು ಕೆಲವರು ಭಾವಿಸುತ್ತಾರೆ. ನಾನು ಬಾಂಗ್ಲಾದೇಶವನ್ನು ಪ್ರೀತಿಸುತ್ತೇನೆ, ಅವರು ನಮ್ಮಂತೆಯೇ ಮಾತನಾಡುತ್ತಾರೆ (ಬಂಗಾಳಿ). ನಮ್ಮ ಸಂಸ್ಕೃತಿ ಕೂಡ ಅದೇ. ಆದಾಗ್ಯೂ, ಬಾಂಗ್ಲಾದೇಶವು ವಿಭಿನ್ನ ದೇಶವಾಗಿದೆ.

“ಮೋದಿ ಬಾಬು, ನೀವು ನಿಮ್ಮ ಜನರ ಮೂಲಕ ಬಂಗಾಳದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದೀರಿ. ಆದರೆ ನೆನಪಿಡಿ, ನೀವು ಬಂಗಾಳ ಸುಟ್ಟು ಹಾಕಿದರೆ, ಅಸ್ಸಾಂ, ಈಶಾನ್ಯ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ದೆಹಲಿ ಕೂಡಾ ಉರಿಯುತ್ತದೆ ಎಂದು ಮಮತಾ ಹೇಳಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಮತಾ ಬ್ಯಾನರ್ಜಿಯವರ ಹೇಳಿಕೆಗಳ ವಿರುದ್ಧ ಗುಡುಗಿದ್ದು, ಬಂಗಾಳ ಸಿಎಂ ಭಾರತದಾದ್ಯಂತ ಅಶಾಂತಿ ಮತ್ತು ವಿಭಜಕ ರಾಜಕೀಯವನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ದೀದಿ, ಅಸ್ಸಾಂಗೆ ಬೆದರಿಕೆ ಹಾಕಲು ನಿಮಗೆ ಎಷ್ಟು ಧೈರ್ಯ?”. “ನಮ್ಮ ಮೇಲೆ ಸಿಟ್ಟಿಗೇಳಬೇಡಿ. ನಿಮ್ಮ ವೈಫಲ್ಯದ ರಾಜಕಾರಣದಿಂದ ಭಾರತಕ್ಕೆ ಬೆಂಕಿ ಹಚ್ಚಲು ಪ್ರಯತ್ನಿಸಬೇಡಿ. ವಿಭಜನೆಯ ಭಾಷೆ ಮಾತನಾಡುವುದು ನಿಮಗೆ ಸರಿಹೊಂದುವುದಿಲ್ಲ, ”ಎಂದು ಶರ್ಮಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ವೈದ್ಯರಿಗೆ ಯಾವತ್ತೂ ಬೆದರಿಕೆ ಹಾಕಿಲ್ಲ: ಬಿಜೆಪಿ ವಾಗ್ದಾಳಿ ನಡುವೆ ಮಮತಾ ಬ್ಯಾನರ್ಜಿ ಸ್ಪಷ್ಟನೆ

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ರಾಜ್ಯ ಸಚಿವ (MoS) ಸುಕಾಂತ ಮಜುಂದಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಬ್ಯಾನರ್ಜಿಯವರ ಹೇಳಿಕೆಗಳು “ರಾಜ್ಯದ ಅತ್ಯುನ್ನತ ಕಚೇರಿಯಿಂದ ಸೇಡಿನ ರಾಜಕೀಯದ ಸ್ಪಷ್ಟ ಅನುಮೋದನೆ” ಎಂದು ಖಂಡಿಸಿದ್ದಾರೆ. ಬಂಗಾಳ ಸುಟ್ಟುಹೋದರೆ, ಇತರ ರಾಜ್ಯಗಳ ಮೇಲೂ ಪರಿಣಾಮ ಬೀರುತ್ತದೆ ಎಂದು ಸೂಚಿಸುವ ಮೂಲಕ ಬ್ಯಾನರ್ಜಿ ದೇಶವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಮಜುಂದಾರ್ ಆರೋಪಿಸಿದರು.

ಪಕ್ಷಪಾತದ ಧೋರಣೆಗಳನ್ನು ಮೀರಿ ಸಾಂವಿಧಾನಿಕವಾಗಿ ಬದ್ಧರಾಗಿರುವ ಮುಖ್ಯಮಂತ್ರಿಯೊಬ್ಬರು ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡುವ ಇಂತಹ ಬೆದರಿಸುವ ಹೇಳಿಕೆಗಳನ್ನು ನೀಡುವುದು ಯೋಚಿಸಲಾಗದ ಸಂಗತಿ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಜುಂದಾರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Thu, 29 August 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!