AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಮುಸ್ಲಿಮರ ಪರಿಸ್ಥಿತಿ ಮದುವೆ ಮನೆಯ ಮೆರವಣಿಗೆಯಲ್ಲಿ ಇರುವ ವಾದ್ಯದವರಂತೆ ಆಗಿದೆ‘ -ಅಸಾದುದ್ದೀನ್ ಓವೈಸಿ

ಪ್ರತಿ ಜಾತಿಯಲ್ಲೂ ಒಬ್ಬೊಬ್ಬ ನಾಯಕನಿದ್ದಾನೆ. ಆದರೆ ಮುಸ್ಲಿಮರಲ್ಲಿ ಯಾವ ನಾಯಕರೂ ಇಲ್ಲ. ಉತ್ತರಪ್ರದೇಶದಲ್ಲಿ ಶೇ.19ರಷ್ಟು ಮುಸ್ಲಿಮರಿದ್ದಾರೆ. ಆದರೆ ಅಲ್ಲಿಯೂ ಕೂಡ ಒಬ್ಬೇಒಬ್ಬ ನಾಯಕ ಇಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

’ಮುಸ್ಲಿಮರ ಪರಿಸ್ಥಿತಿ ಮದುವೆ ಮನೆಯ ಮೆರವಣಿಗೆಯಲ್ಲಿ ಇರುವ ವಾದ್ಯದವರಂತೆ ಆಗಿದೆ‘ -ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿ
TV9 Web
| Updated By: Lakshmi Hegde|

Updated on: Sep 27, 2021 | 3:21 PM

Share

ದೆಹಲಿ: ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಗೇ ಹೆಸರಾಗಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್​ ಓವೈಸಿ(AIMIM President Asaduddin Owaisi), ಇದೀಗ ಇನ್ನೊಂದು ಅಂಥದ್ದೇ ಮಾತುಗಳನ್ನಾಡಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಾತನಾಡಿದ ಅವರು, ‘ಈ ದೇಶದಲ್ಲಿ ಮುಸ್ಲಿಮರ ಪರಿಸ್ಥಿತಿ, ಮದುವೆಮನೆಗಳಲ್ಲಿ ಮೆರವಣಿಗೆ ಸಂದರ್ಭದಲ್ಲಿ ಪಾಲ್ಗೊಳ್ಳುವ ವಾದ್ಯದವರಂತೆ ಆಗಿದೆ. ಇಡೀ ಮೆರವಣಿಗೆಯಲ್ಲಿ ಮೊದಲಿಗರಾಗಿ, ಸಂಗೀತ ನುಡಿಸುತ್ತ ಹೋಗುತ್ತಾರೆ. ಆದರೆ ಒಂದು ಸಲ ಮದುವೆ ನಡೆಯುವ ಸ್ಥಳ ತಲುಪುತ್ತಿದ್ದಂತೆ ಅವರಿಗೆ ಹೊರಗೇ ನಿಲ್ಲುವಂತೆ ಹೇಳಲಾಗುತ್ತದೆ’ ಎಂದು ಹೇಳಿದ್ದಾರೆ. ಈ ಮೂಲಕ ಮುಸ್ಲಿಮರನ್ನು ಕೇವಲ ಮತ ಬ್ಯಾಂಕ್​​ನಂತೆ ಬಳಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ಜಾತಿಯಲ್ಲೂ ಒಬ್ಬೊಬ್ಬ ನಾಯಕನಿದ್ದಾನೆ. ಆದರೆ ಮುಸ್ಲಿಮರಲ್ಲಿ ಯಾವ ನಾಯಕರೂ ಇಲ್ಲ. ಉತ್ತರಪ್ರದೇಶದಲ್ಲಿ ಶೇ.19ರಷ್ಟು ಮುಸ್ಲಿಮರಿದ್ದಾರೆ. ಆದರೆ ಅಲ್ಲಿಯೂ ಕೂಡ ಒಬ್ಬೇಒಬ್ಬ ನಾಯಕ ಇಲ್ಲ ಎಂದೂ ಓವೈಸಿ ಹೇಳಿದ್ದಾರೆ.  ಈ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುವಾಗ ಮೃತಪಟ್ಟವರ ಬಗ್ಗೆ ಮಾತನಾಡಿದ ಓವೈಸಿ, ಸಿಎಎ ಮತ್ತು ಎನ್​ಆರ್​ಸಿ ವಿರುದ್ಧದ ಪ್ರತಿಭಟನೆಯಲ್ಲಿ ಜೀವ ಬಿಟ್ಟವರನ್ನೆಲ್ಲ ನಾವು ಹುತಾತ್ಮರೆಂದೇ ಪರಿಗಣಿಸುತ್ತೇವೆ. ಅವರನ್ನು ಕೊಂದವರೆಲ್ಲರೂ ನಾಶವಾಗಿ ಹೋಗಲಿ ಎಂದು ಹೇಳಿದ್ದಾರೆ.

ಹೈದರಾಬಾದ್​ ಸಂಸದ ಅಸಾದುದ್ದೀನ್​ ಓವೈಸಿ ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯ ಭರ್ಜರಿ ಸಿದ್ಧತೆಯಲ್ಲಿ ತೊಡಗಿದ್ದಾರೆ. ತಿಂಗಳ ಪ್ರಾರಂಭದಲ್ಲಿ ಅಯೋಧ್ಯೆಯಿಂದ ಪ್ರಚಾರ ಶುರು ಮಾಡಿರುವ ಅವರು, ಒಂದೊಂದೇ ಕ್ಷೇತ್ರದಲ್ಲಿ ಸಾರ್ವಜನಿಕರ ಸಭೆ ನಡೆಸುತ್ತಿದ್ದಾರೆ.  ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲಿ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗ ಘೋಷಣೆಯನ್ನೂ ಮಾಡಿದ್ದಾರೆ. ಇತ್ತೀಚೆಗಷ್ಟೇ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಅವರ ಅಬ್ಬಾ ಜಾನ್​ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದರು.

ಇದನ್ನೂ ಓದಿ: ಬುದ್ಧಿ ಹೇಳಿದ ಪೊಲೀಸ್ ಕಾನ್ಸ್​​ಟೇಬಲ್​ಗೆ ಪ್ರೇಮಿಗಳಿಂದ ಹಲ್ಲೆ; ಮೈಸೂರಿನಲ್ಲಿ ಪ್ರಕರಣ ದಾಖಲು

‘ಯುವರತ್ನ’ ನಾಯಕಿ ಸಾಯೆಶಾ ಮಗಳಿಗೆ ಅರಿಯಾನಾ ಎಂದು ನಾಮಕರಣ; ಇದರ ಅರ್ಥವೇನು?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ