AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಮುಸ್ಲಿಮರ ಪರಿಸ್ಥಿತಿ ಮದುವೆ ಮನೆಯ ಮೆರವಣಿಗೆಯಲ್ಲಿ ಇರುವ ವಾದ್ಯದವರಂತೆ ಆಗಿದೆ‘ -ಅಸಾದುದ್ದೀನ್ ಓವೈಸಿ

ಪ್ರತಿ ಜಾತಿಯಲ್ಲೂ ಒಬ್ಬೊಬ್ಬ ನಾಯಕನಿದ್ದಾನೆ. ಆದರೆ ಮುಸ್ಲಿಮರಲ್ಲಿ ಯಾವ ನಾಯಕರೂ ಇಲ್ಲ. ಉತ್ತರಪ್ರದೇಶದಲ್ಲಿ ಶೇ.19ರಷ್ಟು ಮುಸ್ಲಿಮರಿದ್ದಾರೆ. ಆದರೆ ಅಲ್ಲಿಯೂ ಕೂಡ ಒಬ್ಬೇಒಬ್ಬ ನಾಯಕ ಇಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

’ಮುಸ್ಲಿಮರ ಪರಿಸ್ಥಿತಿ ಮದುವೆ ಮನೆಯ ಮೆರವಣಿಗೆಯಲ್ಲಿ ಇರುವ ವಾದ್ಯದವರಂತೆ ಆಗಿದೆ‘ -ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿ
TV9 Web
| Edited By: |

Updated on: Sep 27, 2021 | 3:21 PM

Share

ದೆಹಲಿ: ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಗೇ ಹೆಸರಾಗಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್​ ಓವೈಸಿ(AIMIM President Asaduddin Owaisi), ಇದೀಗ ಇನ್ನೊಂದು ಅಂಥದ್ದೇ ಮಾತುಗಳನ್ನಾಡಿದ್ದಾರೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಾತನಾಡಿದ ಅವರು, ‘ಈ ದೇಶದಲ್ಲಿ ಮುಸ್ಲಿಮರ ಪರಿಸ್ಥಿತಿ, ಮದುವೆಮನೆಗಳಲ್ಲಿ ಮೆರವಣಿಗೆ ಸಂದರ್ಭದಲ್ಲಿ ಪಾಲ್ಗೊಳ್ಳುವ ವಾದ್ಯದವರಂತೆ ಆಗಿದೆ. ಇಡೀ ಮೆರವಣಿಗೆಯಲ್ಲಿ ಮೊದಲಿಗರಾಗಿ, ಸಂಗೀತ ನುಡಿಸುತ್ತ ಹೋಗುತ್ತಾರೆ. ಆದರೆ ಒಂದು ಸಲ ಮದುವೆ ನಡೆಯುವ ಸ್ಥಳ ತಲುಪುತ್ತಿದ್ದಂತೆ ಅವರಿಗೆ ಹೊರಗೇ ನಿಲ್ಲುವಂತೆ ಹೇಳಲಾಗುತ್ತದೆ’ ಎಂದು ಹೇಳಿದ್ದಾರೆ. ಈ ಮೂಲಕ ಮುಸ್ಲಿಮರನ್ನು ಕೇವಲ ಮತ ಬ್ಯಾಂಕ್​​ನಂತೆ ಬಳಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ಜಾತಿಯಲ್ಲೂ ಒಬ್ಬೊಬ್ಬ ನಾಯಕನಿದ್ದಾನೆ. ಆದರೆ ಮುಸ್ಲಿಮರಲ್ಲಿ ಯಾವ ನಾಯಕರೂ ಇಲ್ಲ. ಉತ್ತರಪ್ರದೇಶದಲ್ಲಿ ಶೇ.19ರಷ್ಟು ಮುಸ್ಲಿಮರಿದ್ದಾರೆ. ಆದರೆ ಅಲ್ಲಿಯೂ ಕೂಡ ಒಬ್ಬೇಒಬ್ಬ ನಾಯಕ ಇಲ್ಲ ಎಂದೂ ಓವೈಸಿ ಹೇಳಿದ್ದಾರೆ.  ಈ ಹಿಂದೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುವಾಗ ಮೃತಪಟ್ಟವರ ಬಗ್ಗೆ ಮಾತನಾಡಿದ ಓವೈಸಿ, ಸಿಎಎ ಮತ್ತು ಎನ್​ಆರ್​ಸಿ ವಿರುದ್ಧದ ಪ್ರತಿಭಟನೆಯಲ್ಲಿ ಜೀವ ಬಿಟ್ಟವರನ್ನೆಲ್ಲ ನಾವು ಹುತಾತ್ಮರೆಂದೇ ಪರಿಗಣಿಸುತ್ತೇವೆ. ಅವರನ್ನು ಕೊಂದವರೆಲ್ಲರೂ ನಾಶವಾಗಿ ಹೋಗಲಿ ಎಂದು ಹೇಳಿದ್ದಾರೆ.

ಹೈದರಾಬಾದ್​ ಸಂಸದ ಅಸಾದುದ್ದೀನ್​ ಓವೈಸಿ ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯ ಭರ್ಜರಿ ಸಿದ್ಧತೆಯಲ್ಲಿ ತೊಡಗಿದ್ದಾರೆ. ತಿಂಗಳ ಪ್ರಾರಂಭದಲ್ಲಿ ಅಯೋಧ್ಯೆಯಿಂದ ಪ್ರಚಾರ ಶುರು ಮಾಡಿರುವ ಅವರು, ಒಂದೊಂದೇ ಕ್ಷೇತ್ರದಲ್ಲಿ ಸಾರ್ವಜನಿಕರ ಸಭೆ ನಡೆಸುತ್ತಿದ್ದಾರೆ.  ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಲ್ಲಿ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗ ಘೋಷಣೆಯನ್ನೂ ಮಾಡಿದ್ದಾರೆ. ಇತ್ತೀಚೆಗಷ್ಟೇ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಅವರ ಅಬ್ಬಾ ಜಾನ್​ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದರು.

ಇದನ್ನೂ ಓದಿ: ಬುದ್ಧಿ ಹೇಳಿದ ಪೊಲೀಸ್ ಕಾನ್ಸ್​​ಟೇಬಲ್​ಗೆ ಪ್ರೇಮಿಗಳಿಂದ ಹಲ್ಲೆ; ಮೈಸೂರಿನಲ್ಲಿ ಪ್ರಕರಣ ದಾಖಲು

‘ಯುವರತ್ನ’ ನಾಯಕಿ ಸಾಯೆಶಾ ಮಗಳಿಗೆ ಅರಿಯಾನಾ ಎಂದು ನಾಮಕರಣ; ಇದರ ಅರ್ಥವೇನು?

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು