AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆ: ಆಟೋಮೊಬೈಲ್ ಸಂಸ್ಥೆಗೆ ಪೂರೈಕೆಯಾಗಿದ್ದ ಸಮೋಸಾದಲ್ಲಿ ಕಾಂಡೋಮ್, ಗುಟ್ಕಾ, ಕಲ್ಲುಗಳು ಪತ್ತೆ

ಪುಣೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿರುವ ಪ್ರಮುಖ ಆಟೋಮೊಬೈಲ್ ಸಂಸ್ಥೆಗೆ ಪೂರೈಕೆಯಾಗಿದ್ದ ಸಮೋಸಾಗಳಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು ಪತ್ತೆಯಾಗಿವೆ. ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಮೋಸಾಗಳನ್ನು ಸರಬರಾಜು ಮಾಡಿದವರು ಹಾಗೂ ಉಪಗುತ್ತಿಗೆ ಪಡೆದವರು, ಇಬ್ಬರು ಕಾರ್ಮಿಕರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪುಣೆ: ಆಟೋಮೊಬೈಲ್ ಸಂಸ್ಥೆಗೆ ಪೂರೈಕೆಯಾಗಿದ್ದ ಸಮೋಸಾದಲ್ಲಿ ಕಾಂಡೋಮ್, ಗುಟ್ಕಾ, ಕಲ್ಲುಗಳು ಪತ್ತೆ
ಸಮೋಸಾ
ನಯನಾ ರಾಜೀವ್
|

Updated on: Apr 09, 2024 | 11:04 AM

Share

ಪುಣೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿರುವ ಪ್ರಮುಖ ಆಟೋಮೊಬೈಲ್ ಸಂಸ್ಥೆಗೆ ಪೂರೈಕೆಯಾಗಿದ್ದ ಸಮೋಸಾಗಳಲ್ಲಿ ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳು ಪತ್ತೆಯಾಗಿವೆ. ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಮೋಸಾಗಳನ್ನು ಸರಬರಾಜು ಮಾಡಿದವರು ಹಾಗೂ ಉಪಗುತ್ತಿಗೆ ಪಡೆದವರು, ಇಬ್ಬರು ಕಾರ್ಮಿಕರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕ್ಯಾಟಲಿಸ್ಟ್ ಸರ್ವೀಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಆಟೋಮೊಬೈಲ್ ಸಂಸ್ಥೆಯ ಕ್ಯಾಂಟೀನ್‌ಗೆ ಆಹಾರ ಪದಾರ್ಥಗಳನ್ನು ಒದಗಿಸುವ ಜವಾಬ್ದಾರಿಯನ್ನು ಹೊಂದಿದೆ. ಸಂಸ್ಥೆಯು ಮನೋಹರ್ ಎಂಟರ್‌ಪ್ರೈಸಸ್ ಎಂಬ ಮತ್ತೊಂದು ಉಪಗುತ್ತಿಗೆ ಸಂಸ್ಥೆಗೆ ಸಮೋಸಾ ನೀಡುವ ಗುತ್ತಿಗೆಯನ್ನು ನೀಡಿತ್ತು.

ಶನಿವಾರ, ಆಟೋಮೊಬೈಲ್ ಸಂಸ್ಥೆಯ ಕೆಲವು ಉದ್ಯೋಗಿಗಳಿಗೆ ಸಮೋಸಾದಲ್ಲಿ ಕಾಂಡೋಮ್, ಗುಟ್ಕಾ ಸಿಕ್ಕಿತ್ತು. ಘಟನೆಯ ಕುರಿತು ಮನೋಹರ್ ಎಂಟರ್‌ಪ್ರೈಸಸ್ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಫಿರೋಜ್ ಶೇಖ್ ಮತ್ತು ವಿಕ್ಕಿ ಶೇಖ್ ಎಂದು ಗುರುತಿಸಲಾದ ಇಬ್ಬರು ಕಾರ್ಮಿಕರು ಕಾಂಡೋಮ್, ಗುಟ್ಕಾ ಮತ್ತು ಕಲ್ಲುಗಳನ್ನು ಸಮೋಸಾಗಳಲ್ಲಿ ತುಂಬಿದ್ದರು ಎಂಬುದು ತಿಳಿದುಬಂದಿದೆ.

ಮತ್ತಷ್ಟು ಓದಿ: ಕಾಂಡೋಮ್ ಕಂಪನಿಯಿಂದ ಹಿಡಿದು ಡೈಮಂಡ್ ಪವರ್​ವರೆಗೆ 6 ತಿಂಗಳಲ್ಲಿ ಭರ್ಜರಿ ಲಾಭ ತಂದ 7 ಮಲ್ಟಿಬ್ಯಾಗರ್ ಸ್ಟಾಕ್​ಗಳು

ಇಬ್ಬರು ಆರೋಪಿಗಳು ತಾವು ಎಸ್‌ಆರ್‌ಎ ಎಂಟರ್‌ಪ್ರೈಸಸ್‌ನ ಉದ್ಯೋಗಿಗಳೆಂದು ನಮಗೆ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳನ್ನು ರಹೀಮ್ ಶೇಖ್, ಅಜರ್ ಶೇಖ್ ಮತ್ತು ಮಜರ್ ಶೇಖ್ ಎಂದು ಗುರುತಿಸಲಾಗಿದೆ, ಮನೋಹರ್ ಎಂಟರ್‌ಪ್ರೈಸಸ್‌ನ ಮಾರುಕಟ್ಟೆ ಖ್ಯಾತಿಗೆ ಮಸಿ ಬಳಿಯಲು ಬಯಸಿದ್ದರು ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?