AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಯೋಗದೊಂದಿಗೆ ಸಂಯೋಗದಿಂದ ಫಿಸಿಯೋಥೆರಪಿಯ ಶಕ್ತಿ ಹೆಚ್ಚಿದೆ; ಪ್ರಧಾನಿ ಮೋದಿ

ಯೋಗದೊಂದಿಗೆ ಸಂಯೋಗದಿಂದ ಫಿಸಿಯೋಥೆರಪಿಯ ಶಕ್ತಿ ಹೆಚ್ಚಿದೆ. ಟರ್ಕಿ ಭೂಕಂಪದಂಥ ಪರಿಸ್ಥಿತಿ ಎದುರಾದಾಗ ಫಿಸಿಯೋಥೆರಪಿಸ್ಟ್​​ಗಳ ವಿಡಿಯೋ ಕನ್ಸಲ್ಟಿಂಗ್​ನಿಂದ ಪ್ರಯೋಜನವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Narendra Modi: ಯೋಗದೊಂದಿಗೆ ಸಂಯೋಗದಿಂದ ಫಿಸಿಯೋಥೆರಪಿಯ ಶಕ್ತಿ ಹೆಚ್ಚಿದೆ; ಪ್ರಧಾನಿ ಮೋದಿ
ನರೇಂದ್ರ ಮೋದಿ
ಗಣಪತಿ ಶರ್ಮಾ
|

Updated on: Feb 11, 2023 | 4:10 PM

Share

ನವದೆಹಲಿ: ಯೋಗದೊಂದಿಗೆ (Yoga) ಸಂಯೋಗದಿಂದ ಫಿಸಿಯೋಥೆರಪಿಯ ಶಕ್ತಿ ಹೆಚ್ಚಿದೆ. ಟರ್ಕಿ ಭೂಕಂಪದಂಥ ಪರಿಸ್ಥಿತಿ ಎದುರಾದಾಗ ಫಿಸಿಯೋಥೆರಪಿಸ್ಟ್​​ಗಳ (physiotherapists) ವಿಡಿಯೋ ಕನ್ಸಲ್ಟಿಂಗ್​ನಿಂದ ಪ್ರಯೋಜನವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಭಾರತೀಯ ಫಿಸಿಯೋಥೆರಪಿಸ್ಟ್​​ಗಳ ಸಂಘದ (IAP) 60ನೇ ರಾಷ್ಟ್ರೀಯ ಸಮಾವೇಶ ಉದ್ದೇಶಿಸಿ ಅವರು ಮಾತನಾಡಿದರು. ವೃತ್ತಿಪರರು ವಿಡಿಯೋ ಕನ್ಸಲ್ಟಿಂಗ್ ಮತ್ತು ಟೆಲಿ-ಮೆಡಿಸಿನ್ (ದೂರವಾಣಿ ಮೂಲಕ ವೈದ್ಯಕೀಯ ಸಲಹೆ ನೀಡುವ ಪ್ರಕ್ರಿಯೆ) ಮಾರ್ಗಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಟರ್ಕಿ ಭೂಕಂಪದಂಥ ಸಂದರ್ಭಗಳಲ್ಲಿ ಇದರಿಂದ ಪ್ರಯೋಜನವಾಗಲಿದೆ. ಭಾರತದ ಫಿಸಿಯೋಥೆರಪಿಸ್ಟ್​​ಗಳು ದೂರವಾಣಿಗಳ ಸಹಾಯದಿಂದ ಅವರಿಗೆ ನೆರವಾಗಬಹುದು. ನಿಮ್ಮಂಥವರ ನೇತೃತ್ವದಲ್ಲಿ ಭಾರತವು ಫೀಟ್ ಮತ್ತು ಸೂಪರ್ ಹಿಟ್ ಆಗಿರಲಿದೆ ಎಂಬ ಬಗ್ಗೆ ನನಗೆ ನಂಬಿಕೆ ಇದೆ ಎಂದು ಮೋದಿ ಹೇಳಿದರು.

ಸಾಂತ್ವನ, ಭರವಸೆ, ಚೇತರಿಕೆಯಲ್ಲಿ ಫಿಸಿಯೋಥೆರಪಿಸ್ಟ್ ಪಾತ್ರ ಬಹು ಮುಖ್ಯವಾದದ್ದು. ಫಿಸಿಯೋಥೆರಪಿಸ್ಟ್​​ಗಳು ಕೇವಲ ಭೌತಿಕ ಗಾಯಕ್ಕಷ್ಟೇ ಚಿಕಿತ್ಸೆ ನೀಡುವುದಿಲ್ಲ. ಚಿಕಿತ್ಸೆಯ ಜತೆಗೆ ರೋಗಿಗಳಲ್ಲಿ ಧೈರ್ಯವನ್ನೂ ತುಂಬುತ್ತಾರೆ ಎಂದು ಪ್ರಧಾನಿ ಹೇಳಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಫಿಸಿಯೋಥೆರಪಿಸ್ಟ್​​ಗಳಿಗೆ ಬಹು ನಿರೀಕ್ಷಿತ ಮನ್ನಣೆ ದೊರೆತಿದೆ. ಆರೋಗ್ಯ ಕ್ಷೇತ್ರದ ವೃತ್ತಿಪರರ ರಾಷ್ಟ್ರೀಯ ಆಯೋಗ ಕಾಯ್ದೆ ಮೂಲಕ ಫಿಸಿಯೋಥೆರಪಿಸ್ಟ್​​ಗಳಿಗೂ ಸರ್ಕಾರ ಮನ್ನಣೆ ನೀಡಿದೆ. ಕಾಯ್ದೆಯ ಪರಿಣಾಮ ಫಿಸಿಯೋಥೆರಪಿಸ್ಟ್​​ಗಳಿಗೆ ಭಾರತದಾದ್ಯಂತ ಎಲ್ಲಿ ಬೇಕಾದರೂ ಮತ್ತು ವಿದೇಶಗಳಲ್ಲಿಯೂ ಕಾರ್ಯನಿರ್ವಹಿಸುವುದು ಸುಲಭವಾಗಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Narendra Modi: ದಶಪಥ ಹೆದ್ದಾರಿ ಅದ್ಬುತ ದೃಶ್ಯ: ಸಿಎಂ ಬೊಮ್ಮಾಯಿ ಟ್ವೀಟ್​ಗೆ ಮೋದಿ ಪ್ರತಿಕ್ರಿಯೆ

ಸರ್ಕಾರವು ಫಿಸಿಯೋಥೆರಪಿಸ್ಟ್​​ಗಳನ್ನು ಆಹಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ನೆಟ್​​ವರ್ಕ್​​ಗೂ ಸೇರ್ಪಡೆ ಮಾಡಿದೆ. ಇದರಿಂದ ಫಿಸಿಯೋಥೆರಪಿಸ್ಟ್​​ಗಳಿಗೆ ರೋಗಿಗಳ ಜತೆ ಸಂಪರ್ಕ ಸಾಧಿಸುವುದು ಸುಲಭಸಾಧ್ಯವಾಗಿದೆ. ಫಿಟ್​​ ಇಂಡಿಯಾ ಚಳವಳಿ, ಖೇಲೋ ಇಂಡಿಯಾದಂಥ ಚಳವಳಿಗಳಿಂದ ಫಿಸಿಯೋಥೆರಪಿಸ್ಟ್​ಗಳ ವ್ಯಾಪ್ತಿ ವಿಸ್ತಾರಗೊಂಡಿದೆ ಎಂದು ಮೋದಿ ಹೇಳಿದರು.

ಸರಿಯಾದ ಭಂಗಿ, ಅಭ್ಯಾಸಗಳು ಮತ್ತು ವ್ಯಾಯಾಮಗಳ ಬಗ್ಗೆ ಜನರಿಗೆ ಶಿಕ್ಷಣ ನೀಡುವ ಕಾರ್ಯವನ್ನು ಮಾಡಬೇಕು ಎಂದು ಫಿಸಿಯೋಥೆರಪಿಸ್ಟ್​ಗಳ ಬಳಿ ಮೋದಿ ವಿನಂತಿ ಮಾಡಿದರು. ಲೇಖನಗಳು, ಉಪನ್ಯಾಸಗಳು ಮತ್ತು ವಿಡಿಯೋಗಳ ಮೂಲಕ ಜನರಲ್ಲಿ ಫಿಟ್‌ನೆಸ್ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್