AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ಬಂದಿದ್ದು ಕೇವಲ ಮಹಾತ್ಮ ಗಾಂಧಿಯಿಂದ ಎಂಬುದು ತಪ್ಪು; ಕಾಂಗ್ರೆಸ್​ ವಿರುದ್ಧ ಮಧ್ಯಪ್ರದೇಶ ಸಿಎಂ ಅಸಮಾಧಾನ

ಈ ದೇಶಕ್ಕೆ ಸ್ವಾತಂತ್ರ್ಯ ಬರಲು ಅನೇಕ ಕ್ರಾಂತಿಕಾರಿಗಳೂ ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ತಾಂತ್ಯಾ ಮಾಮಾ, ರಾಣಿ ಲಕ್ಷ್ಮೀಬಾಯಿ, ನಾನಾ ಸಾಹೇಬ್​ ಪೇಶ್ವಾ, ಭೀಮಾ ನಾಯಕ್​, ರಘುನಾಥ್​ ಶಾ, ಶಂಕರ್​ ಶಾ, ಬಿರ್ಸಾ ಮುಂಡಾ ಸೇರಿ ಇನ್ನೂ ಅನೇಕರ ಬಲಿದಾನವಾಗಿದೆ ಎಂದು ಎಂಪಿ ಸಿಎಂ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಿದ್ದು ಕೇವಲ ಮಹಾತ್ಮ ಗಾಂಧಿಯಿಂದ ಎಂಬುದು ತಪ್ಪು; ಕಾಂಗ್ರೆಸ್​ ವಿರುದ್ಧ ಮಧ್ಯಪ್ರದೇಶ ಸಿಎಂ ಅಸಮಾಧಾನ
ತಾಂತ್ಯಾ ಮಾಮಾಗೆ ಗೌರವ ಸಮರ್ಪಿಸಿದ ಶಿವರಾಜ್ ಸಿಂಗ್​ ಚೌಹಾಣ್​
TV9 Web
| Edited By: |

Updated on:Nov 28, 2021 | 8:47 AM

Share

ಇತ್ತೀಚೆಗೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕ ವಿಚಾರ ಪದೇಪದೆ ಮುನ್ನೆಲೆಗೆ ಬರುತ್ತಿದೆ. ನಟಿ ಕಂಗನಾ ರಣಾವತ್​ ಇತ್ತೀಚೆಗಷ್ಟೇ ಈ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಿದ್ದರು. ಈಗ ಆ ಸಾಲಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್ ಚೌಹಾಣ್​ ಸೇರ್ಪಡೆಯಾಗಿದ್ದಾರೆ. ದೇಶಕ್ಕೆ ಕಾಂಗ್ರೆಸ್​ ಇತಿಹಾಸವನ್ನು ತಪ್ಪಾಗಿ ಹೇಳಿದೆ. ಕೇವಲ ಮಹಾತ್ಮ ಗಾಂಧಿ, ಜವಾಹರ್​ಲಾಲ್​ ನೆಹರೂ ಮತ್ತು ಇಂದಿರಾ ಗಾಂಧಿಯವರ ಕೊಡುಗೆಯಿಂದ ಮಾತ್ರ ಸ್ವಾತಂತ್ರ್ಯ ಸಿಕ್ಕದೆ ಎಂದು ಹೇಳುವ ಮೂಲಕ ತಪ್ಪು ಸಂದೇಶ ಸಾರಿದೆ ಎಂದು ಮಧ್ಯಪ್ರದೇಶ ಸಿಎಂ ಹೇಳಿದ್ದಾರೆ. 

ಬುಡಕಟ್ಟು ಕ್ರಾಂತಿಕಾರಿ ತಾಂತ್ಯ ಭಿಲ್ ಅಕಾ ತಾಂತ್ಯ ಮಾಮಾ ಅವರ ಜನ್ಮಸ್ಥಳವಾದ ಬರೋಡಾ ಅಹೀರ್‌ನಲ್ಲಿ ಗೌರವ ಕಲಶ ಯಾತ್ರೆ ಉದ್ಘಾಟಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ನನಗೆ ಮಹಾತ್ಮ ಗಾಂಧಿ ಬಗ್ಗೆ ಅಪಾರ ಗೌರವ ಇದೆ. ಅವರು ವಿಶ್ವ ಬಂಧು. ಆದರೆ ಈ ದೇಶಕ್ಕೆ ಸ್ವಾತಂತ್ರ್ಯ ಬರಲು ಮಹಾತ್ಮ ಗಾಂಧಿ, ನೆಹರೂ ಮಾತ್ರ ಕಾರಣ ಎಂಬುದು ತಪ್ಪು. ಈ ತಪ್ಪು ಇತಿಹಾಸವನ್ನೇ ಕಾಂಗ್ರೆಸ್ ನಮಗೆ ಪಾಠ ಮಾಡಿದೆ ಎಂದು ಹೇಳಿದರು.

ಈ ದೇಶಕ್ಕೆ ಸ್ವಾತಂತ್ರ್ಯ ಬರಲು ಅನೇಕ ಕ್ರಾಂತಿಕಾರಿಗಳೂ ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ತಾಂತ್ಯಾ ಮಾಮಾ, ರಾಣಿ ಲಕ್ಷ್ಮೀಬಾಯಿ, ನಾನಾ ಸಾಹೇಬ್​ ಪೇಶ್ವಾ, ಭೀಮಾ ನಾಯಕ್​, ರಘುನಾಥ್​ ಶಾ, ಶಂಕರ್​ ಶಾ, ಬಿರ್ಸಾ ಮುಂಡಾ ಸೇರಿ ಇನ್ನೂ ಅನೇಕರ ಬಲಿದಾನವಾಗಿದೆ. ಇವರ ಕ್ರಾಂತಿಕಾರಿ ಹೋರಾಟವನ್ನೆಂದೂ ಜನರು ಮರೆಯುವುದಿಲ್ಲ ಎಂದು ಚೌಹಾಣ್​ ಹೇಳಿದರು. ಬುಡಕಟ್ಟು ಜನಾಂಗದ ಪ್ರಮುಖ ನಾಯಕ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಜನಜಾತೀಯ ಗೌರವ ದಿವಸ್​ ಎಂದು ಘೋಷಿಸಿದ ಪ್ರಧಾನಿ ಮೋದಿಯವರಿಗೆ ಇದೇ ಸಂದರ್ಭದಲ್ಲಿ ಧನ್ಯವಾದವನ್ನೂ ಸಲ್ಲಿಸಿದರು. ಬಳಿಕ ತಾಂತ್ಯಾ ಮಾಮಾ ಬಗ್ಗೆ ಮಾತನಾಡಿ, ತಾಂತ್ಯಾ ಮಾಮಾ ಅವರು ಲೇವಾದೇವಿದಾರರ ವಿರುದ್ಧ ಹೋರಾಡಿದವರು. ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ನಡೆಸಿದರು. ಅದರಲ್ಲೂ ತಾಂತ್ಯಾ ಮಾಮಾ ಬ್ರಿಟಿಷರ ಖಜಾನೆಯನ್ನೇ ಲೂಟಿ ಮಾಡಿ, ಆ ಸಂಪತ್ತನ್ನು ಬಡವರಿಗೆ ಹಂಚಿದ್ದರು ಎಂದು ವಿವರಸಿದರು.

ಆದರೆ ಕಾಂಗ್ರೆಸ್​ ಸರ್ಕಾರವಿದ್ದಾಗ ಬುಡಕಟ್ಟು ಜನಾಂಗದ ಯೂನಿವರ್ಸಿಟಿಗಳಿಗೆ ಇಂದಿರಾ ಗಾಂಧಿ ಹೆಸರನ್ನೇ ಇಡಲಾಯಿತು. ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ಬುಡಕಟ್ಟು ಕ್ರಾಂತಿಕಾರಿ ವೀರರನ್ನು ಮರೆಯಲಾಯಿತು. ಕಾಂಗ್ರೆಸ್ ಒಂದೇ ಕುಟುಂಬವನ್ನು ಅತ್ಯಂತ ಹೆಚ್ಚಾಗಿ ಅಟ್ಟಕ್ಕೇರಿಸಿತು. ಉಳಿದೆಲ್ಲರನ್ನೂ ಮರೆಯಿತು. ಆದರೆ ಬಿಜೆಪಿ ಆ ತಪ್ಪನ್ನು ಮಾಡುವುದಿಲ್ಲ ಎಂದಿದ್ದಾರೆ. ಅಂದಹಾಗೆ ಈ ಗೌರವ ಕಲಶ ಯಾತ್ರೆಯು, ತಾಂತ್ಯಾ ಭಿಲ್​ ನೆನಪಲ್ಲಿ ಡಿಸೆಂಬರ್​ 4ರಂದು ನಡೆಯಲಿದೆ.

ಇದನ್ನೂ ಓದಿ: Axar Patel: ಮೂರನೇ ದಿನದಾಟದ ಬಳಿಕ ವಿಶೇಷ ಮಾಹಿತಿ ಹಂಚಿಕೊಂಡ ದಾಖಲೆ ವೀರ ಅಕ್ಷರ್ ಪಟೇಲ್

Published On - 8:47 am, Sun, 28 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ