AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐವರು ಹಿರಿಯ ನಾಯಕರ ಟ್ವಿಟರ್​ ಖಾತೆ ತಾತ್ಕಾಲಿಕ ಅಮಾನತು: ಲಾರ್ಡ್​ ನರೇಂದ್ರ ಮೋದಿ ಕಾರಣವೆಂದ ಕಾಂಗ್ರೆಸ್​

ಟ್ವಿಟರ್ ಖಾತೆ ಲಾಕ್​ ಆಗಿದ್ದು ಲಾರ್ಡ್ ನರೇಂದ್ರ ಮೋದಿಯವರಿಂದಲೇ ಎಂದು ಕಾಂಗ್ರೆಸ್​ನ ಸಂವಹನ ವಿಭಾಗದ ಉಸ್ತುವಾರಿ ಪ್ರಣವ್​ ಝಾ ಟ್ವೀಟ್ ಮಾಡಿದ್ದಾರೆ..

ಐವರು ಹಿರಿಯ ನಾಯಕರ ಟ್ವಿಟರ್​ ಖಾತೆ  ತಾತ್ಕಾಲಿಕ ಅಮಾನತು: ಲಾರ್ಡ್​ ನರೇಂದ್ರ ಮೋದಿ ಕಾರಣವೆಂದ ಕಾಂಗ್ರೆಸ್​
ಟ್ವಿಟರ್​ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 12, 2021 | 9:45 AM

Share

ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ (Rahul Gandhi) ಯವರ ಟ್ವಿಟರ್​ ಖಾತೆ (Twitter Account)ಯನ್ನು ಲಾಕ್​ ಮಾಡಿದ್ದ ಟ್ವಿಟರ್​, ಬುಧವಾರ ರಣದೀಪ್​ ಸುರ್ಜೇವಾಲಾ ಸೇರಿ ಒಟ್ಟು ಐವರು ಹಿರಿಯ ನಾಯಕರ ಟ್ವಿಟರ್​ ಅಕೌಂಟ್​ಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿತ್ತು ಎಂದು ಕಾಂಗ್ರೆಸ್ (Congress) ಆರೋಪ ಮಾಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್​ ಮೇಕನ್​, ಲೋಕಸಭೆಯ ಕಾಂಗ್ರೆಸ್​ ಸಚೇತಕ ಮಾಣಿಕ್ಯಂ ಠಾಗೋರ್​, ಕಾಂಗ್ರೆಸ್​ನ ಅಸ್ಸಾಂ ಉಸ್ತುವಾರಿ ಮತ್ತು ಮಾಜಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್​, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಷ್ಮಿತಾ ದೇವ್​ ಅವರ ಟ್ವಿಟರ್ ಖಾತೆಗಳನ್ನು ಸಹ ತಾತ್ಕಾಲಿಕವಾಗಿ ಲಾಕ್​ ಮಾಡಲಾಗಿತ್ತು ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಐಸಿಸಿ ಸಂವಹನ ವಿಭಾಗದ ಉಸ್ತುವಾರಿ ಪ್ರಣವ್​ ಝಾ, ಟ್ವಿಟರ್ ಖಾತೆ ಲಾಕ್​ ಆಗಿದ್ದು ಲಾರ್ಡ್ ನರೇಂದ್ರ ಮೋದಿಯವರಿಂದಲೇ ಎಂದೂ ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ನಮ್ಮನ್ನು ಎಷ್ಟೇ ಲಾಕ್​ ಮಾಡಿದರೂ, ನಾವು ಬೀಗದ ಹಿಂದಿನಿಂದಲೇ ಹೋರಾಟ ಮಾಡುತ್ತೇವೆ ಎಂದೂ ಹೇಳಿಕೊಂಡಿದ್ದಾರೆ.

ಟ್ವಿಟರ್​ ಸರ್ಕಾರದ ಒತ್ತಡಕ್ಕೆ ಮಣಿದು, ರಾಹುಲ್​ ಗಾಂಧಿ ವಿರುದ್ಧ ಇಂಥ ಕ್ರಮಕ್ಕೆ ಮುಂದಾಗುತ್ತಿದೆ ಎಂದೂ ಕಾಂಗ್ರೆಸ್ ಆರೋಪ ಮಾಡಿದೆ. ದೆಹಲಿಯಲ್ಲಿ ಇತ್ತೀಚೆಗೆ 9ವರ್ಷದ ದಲಿತ ಹುಡುಗಿಯನ್ನು ಚಿತಾಗಾರದಲ್ಲಿ ಗ್ಯಾಂಗ್​ರೇಪ್​ ಮಾಡಿ ಹತ್ಯೆ ಮಾಡಲಾಗಿತ್ತು. ಆಕೆಯ ಕುಟುಂಬವನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ್ದ ರಾಹುಲ್​ ಗಾಂಧಿ ಪಾಲಕರ ಫೋಟೋವನ್ನು ಟ್ವೀಟ್ ಮಾಡಿಕೊಂಡಿದ್ದರು. ಹೀಗೆ ಸಂತ್ರಸ್ತೆಯ ಕುಟುಂಬದ ಫೋಟೋ ಬಹಿರಂಗ ಪಡಿಸಿದ ರಾಹುಲ್ ಗಾಂಧಿ ವಿರುದ್ಧ ದೂರು ಕೂಡ ದಾಖಲಾಗಿತ್ತು. ಅವರ ಟ್ವಿಟರ್​​ನ್ನು ಅಮಾನತು ಮಾಡುವಂತೆ ಮಕ್ಕಳ ಹಕ್ಕು ರಕ್ಷಣಾ ರಾಷ್ಟ್ರೀಯ ಆಯೋಗ ಟ್ವಿಟರ್​ ಇಂಡಿಯಾಕ್ಕೆ ಹೇಳಿತ್ತು. ಅದೆಲ್ಲ ಆದ ನಂತರ ರಾಹುಲ್​ ಗಾಂಧಿಯವರ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಅಮಾನತುಗೊಂಡಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್​ನ ಕೆಲವು ಹಿರಿಯ ನಾಯಕರ ಅಕೌಂಟ್​ಗಳೂ ಕೂಡ ಲಾಕ್​ ಆಗಿವೆ ಎಂಬುದು ಈಗಿನ ಆರೋಪ.

ಇದನ್ನೂ ಓದಿ: ಕೊರೊನಾ ಮೂರನೇ ಅಲೆ ಆತಂಕ; ಇಂದಿನಿಂದ ತುಮಕೂರಿನಲ್ಲಿ ನಿಷೇಧಾಜ್ಞೆ ಜಾರಿ

ಆಫ್ರಿಕಾ ಪ್ರಜೆಗಳ ಪುಂಡಾಟಕ್ಕೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ‘ಹಲೋ ಆಫ್ರಿಕಾ’ ಕಾರ್ಯಕ್ರಮ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್