AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐವರು ಹಿರಿಯ ನಾಯಕರ ಟ್ವಿಟರ್​ ಖಾತೆ ತಾತ್ಕಾಲಿಕ ಅಮಾನತು: ಲಾರ್ಡ್​ ನರೇಂದ್ರ ಮೋದಿ ಕಾರಣವೆಂದ ಕಾಂಗ್ರೆಸ್​

ಟ್ವಿಟರ್ ಖಾತೆ ಲಾಕ್​ ಆಗಿದ್ದು ಲಾರ್ಡ್ ನರೇಂದ್ರ ಮೋದಿಯವರಿಂದಲೇ ಎಂದು ಕಾಂಗ್ರೆಸ್​ನ ಸಂವಹನ ವಿಭಾಗದ ಉಸ್ತುವಾರಿ ಪ್ರಣವ್​ ಝಾ ಟ್ವೀಟ್ ಮಾಡಿದ್ದಾರೆ..

ಐವರು ಹಿರಿಯ ನಾಯಕರ ಟ್ವಿಟರ್​ ಖಾತೆ  ತಾತ್ಕಾಲಿಕ ಅಮಾನತು: ಲಾರ್ಡ್​ ನರೇಂದ್ರ ಮೋದಿ ಕಾರಣವೆಂದ ಕಾಂಗ್ರೆಸ್​
ಟ್ವಿಟರ್​ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 12, 2021 | 9:45 AM

Share

ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ (Rahul Gandhi) ಯವರ ಟ್ವಿಟರ್​ ಖಾತೆ (Twitter Account)ಯನ್ನು ಲಾಕ್​ ಮಾಡಿದ್ದ ಟ್ವಿಟರ್​, ಬುಧವಾರ ರಣದೀಪ್​ ಸುರ್ಜೇವಾಲಾ ಸೇರಿ ಒಟ್ಟು ಐವರು ಹಿರಿಯ ನಾಯಕರ ಟ್ವಿಟರ್​ ಅಕೌಂಟ್​ಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿತ್ತು ಎಂದು ಕಾಂಗ್ರೆಸ್ (Congress) ಆರೋಪ ಮಾಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್​ ಮೇಕನ್​, ಲೋಕಸಭೆಯ ಕಾಂಗ್ರೆಸ್​ ಸಚೇತಕ ಮಾಣಿಕ್ಯಂ ಠಾಗೋರ್​, ಕಾಂಗ್ರೆಸ್​ನ ಅಸ್ಸಾಂ ಉಸ್ತುವಾರಿ ಮತ್ತು ಮಾಜಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್​, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಷ್ಮಿತಾ ದೇವ್​ ಅವರ ಟ್ವಿಟರ್ ಖಾತೆಗಳನ್ನು ಸಹ ತಾತ್ಕಾಲಿಕವಾಗಿ ಲಾಕ್​ ಮಾಡಲಾಗಿತ್ತು ಎಂದು ಕಾಂಗ್ರೆಸ್ ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಐಸಿಸಿ ಸಂವಹನ ವಿಭಾಗದ ಉಸ್ತುವಾರಿ ಪ್ರಣವ್​ ಝಾ, ಟ್ವಿಟರ್ ಖಾತೆ ಲಾಕ್​ ಆಗಿದ್ದು ಲಾರ್ಡ್ ನರೇಂದ್ರ ಮೋದಿಯವರಿಂದಲೇ ಎಂದೂ ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ನಮ್ಮನ್ನು ಎಷ್ಟೇ ಲಾಕ್​ ಮಾಡಿದರೂ, ನಾವು ಬೀಗದ ಹಿಂದಿನಿಂದಲೇ ಹೋರಾಟ ಮಾಡುತ್ತೇವೆ ಎಂದೂ ಹೇಳಿಕೊಂಡಿದ್ದಾರೆ.

ಟ್ವಿಟರ್​ ಸರ್ಕಾರದ ಒತ್ತಡಕ್ಕೆ ಮಣಿದು, ರಾಹುಲ್​ ಗಾಂಧಿ ವಿರುದ್ಧ ಇಂಥ ಕ್ರಮಕ್ಕೆ ಮುಂದಾಗುತ್ತಿದೆ ಎಂದೂ ಕಾಂಗ್ರೆಸ್ ಆರೋಪ ಮಾಡಿದೆ. ದೆಹಲಿಯಲ್ಲಿ ಇತ್ತೀಚೆಗೆ 9ವರ್ಷದ ದಲಿತ ಹುಡುಗಿಯನ್ನು ಚಿತಾಗಾರದಲ್ಲಿ ಗ್ಯಾಂಗ್​ರೇಪ್​ ಮಾಡಿ ಹತ್ಯೆ ಮಾಡಲಾಗಿತ್ತು. ಆಕೆಯ ಕುಟುಂಬವನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ್ದ ರಾಹುಲ್​ ಗಾಂಧಿ ಪಾಲಕರ ಫೋಟೋವನ್ನು ಟ್ವೀಟ್ ಮಾಡಿಕೊಂಡಿದ್ದರು. ಹೀಗೆ ಸಂತ್ರಸ್ತೆಯ ಕುಟುಂಬದ ಫೋಟೋ ಬಹಿರಂಗ ಪಡಿಸಿದ ರಾಹುಲ್ ಗಾಂಧಿ ವಿರುದ್ಧ ದೂರು ಕೂಡ ದಾಖಲಾಗಿತ್ತು. ಅವರ ಟ್ವಿಟರ್​​ನ್ನು ಅಮಾನತು ಮಾಡುವಂತೆ ಮಕ್ಕಳ ಹಕ್ಕು ರಕ್ಷಣಾ ರಾಷ್ಟ್ರೀಯ ಆಯೋಗ ಟ್ವಿಟರ್​ ಇಂಡಿಯಾಕ್ಕೆ ಹೇಳಿತ್ತು. ಅದೆಲ್ಲ ಆದ ನಂತರ ರಾಹುಲ್​ ಗಾಂಧಿಯವರ ಟ್ವಿಟರ್ ಖಾತೆ ತಾತ್ಕಾಲಿಕವಾಗಿ ಅಮಾನತುಗೊಂಡಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್​ನ ಕೆಲವು ಹಿರಿಯ ನಾಯಕರ ಅಕೌಂಟ್​ಗಳೂ ಕೂಡ ಲಾಕ್​ ಆಗಿವೆ ಎಂಬುದು ಈಗಿನ ಆರೋಪ.

ಇದನ್ನೂ ಓದಿ: ಕೊರೊನಾ ಮೂರನೇ ಅಲೆ ಆತಂಕ; ಇಂದಿನಿಂದ ತುಮಕೂರಿನಲ್ಲಿ ನಿಷೇಧಾಜ್ಞೆ ಜಾರಿ

ಆಫ್ರಿಕಾ ಪ್ರಜೆಗಳ ಪುಂಡಾಟಕ್ಕೆ ಬ್ರೇಕ್ ಹಾಕಲು ಬೆಂಗಳೂರು ಪೊಲೀಸರಿಂದ ‘ಹಲೋ ಆಫ್ರಿಕಾ’ ಕಾರ್ಯಕ್ರಮ

Follow Us
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಈ ವಾರ ಈ ರಾಶಿಗೆ ಆಕಸ್ಮಿಕ ಧನಲಾಭ, ಹಳೆಯ ಬಾಕಿ ವಸೂಲಿ
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಹೋಟೆಲ್, ಮೊಬೈಲ್ ಶಾಪ್ ಸೇರಿ 12ಕ್ಕೂ ಅಧಿಕ ಅಂಗಡಿಗಳು ಬೆಂಕಿಗಾಹುತಿ!
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಲಷ್ಕರ್ ಕಮಾಂಡರ್ ಬಿಲಾಲ್ ಆರಿಫ್ ಮೇಲೆ ಗುಂಡಿನ ದಾಳಿ
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂ. ಹಣ ಜಪ್ತಿ!
ಓಡಿ ಬಂದು ರಸ್ತೆ ದಾಟಲು ಹೋಗಿ ಜಾರಿಬಿದ್ದು ವಾಹನದಡಿಗಾದ ಯುವತಿ
ಓಡಿ ಬಂದು ರಸ್ತೆ ದಾಟಲು ಹೋಗಿ ಜಾರಿಬಿದ್ದು ವಾಹನದಡಿಗಾದ ಯುವತಿ
ಸೂರ್ಯ ಭಗವಾನರಿಗೆ ಅರ್ಘ್ಯ ಕೊಡುವುದರ ಮಹತ್ವವೇನು?
ಸೂರ್ಯ ಭಗವಾನರಿಗೆ ಅರ್ಘ್ಯ ಕೊಡುವುದರ ಮಹತ್ವವೇನು?