AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶವನ್ನು ವಿಭಜಿಸುವ ಸಂಘಟನೆಗಳೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿದೆ: ಅಮಿತ್ ಶಾ

Amit Shah in Assam: ಅಸ್ಸಾಂ ರಾಜ್ಯ ಅಜ್ಮಲ್ ಕೈಯಲ್ಲಿ ಸುರಕ್ಷಿತವಲ್ಲ. ಅಸ್ಸಾಂನ ಜನರು ಪ್ರಧಾನಿ ನರೇಂದ್ರ ಮೋದಿ ಅಥನಾ ಬದ್ರುದ್ದೀನ್ ಅಜ್ಮಲ್ ಇವರಲ್ಲಿ ಯಾವ ರಾಜಕೀಯ ನಾಯಕರು ಜನರ ಕಲ್ಯಾಣದ ಬಗ್ಗೆ ಕಾಳಜಿ ವಹಿಸುತ್ತಾರೆ ಎಂಬುದನ್ನು ನಿರ್ಧರಿಸಲಿ ಎಂದಿದ್ದಾರೆ ಅಮಿತ್ ಶಾ.

ದೇಶವನ್ನು ವಿಭಜಿಸುವ ಸಂಘಟನೆಗಳೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿದೆ: ಅಮಿತ್ ಶಾ
ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on:Mar 14, 2021 | 5:44 PM

ನಜೀರಾ: ಕಾಂಗ್ರೆಸ್ ಮತ್ತು ಅವರ ನೇತಾರ ರಾಹುಲ್ ಗಾಂಧಿ ದೇಶವನ್ನು ವಿಭಜನೆ ಮಾಡಲು ಬಯಸುವ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಮತ ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಾನುವಾರ ಅಸ್ಸಾಂನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಶಾ, ಅತೀ ಪುರಾತನ ಪಕ್ಷ 15 ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರ ನಡೆಸಿದೆ. ಅಸ್ಸಾಂನ್ನು ಪ್ರತಿನಿಧಿಕರಿಸಿದವರೇ ಪ್ರಧಾನಿ ಆಗಿದ್ದಾರೆ. ಆದರೆ ನೆರೆ ರಾಜ್ಯದಿಂದ ಬರುವ ಅಕ್ರಮ ವಲಸಿಗರ ಬಗ್ಗೆ ಕ್ರಮಕೈಗೊಳ್ಳಲು ಸಾಧ್ಯವಾಗಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಸಂಸತ್ತಿನ ಮೇಲ್ಮನೆಯಲ್ಲಿ ಅಸ್ಸಾಂನ್ನು ಪ್ರತಿನಿಧಿಕರಿಸಿದ್ದ ಮನಮೋಹನ್ ಸಿಂಗ್ ಅವರನ್ನು ಉಲ್ಲೇಖಿಸಿ ಶಾ ಈ ಮಾತನ್ನು ಹೇಳಿದ್ದಾರೆ. ಚುನಾವಣೆ ಗೆಲ್ಲಲು ಕಾಂಗ್ರೆಸ್ ಯಾವ ಹಂತಕ್ಕೆ ಬೇಕಾದರೂ ಹೋಗಬಹುದು ಎಂದು ಅವರು ಹೇಳಿದ್ದಾರೆ.

ಅಸ್ಸಾಂನಲ್ಲಿ ಕಾಂಗ್ರೆಸ್ ಎಐಯುಡಿಎಫ್ ಜತೆ, ಕೇರಳದಲ್ಲಿ ಮುಸ್ಲಿಂ ಲೀಗ್ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂಡಿಯನ್ ಸೆಕ್ಯುಲರ್ ಫ್ರಂಟ್ ಜತೆ ಮೈತ್ರಿ ಮಾಡಿಕೊಂಡಿದೆ. ಅಸ್ಸಾಂ ರಾಜ್ಯ ಅಜ್ಮಲ್ ಕೈಯಲ್ಲಿ ಸುರಕ್ಷಿತವಲ್ಲ. ಅಸ್ಸಾಂನ ಜನರು ಪ್ರಧಾನಿ ನರೇಂದ್ರ ಮೋದಿ ಅಥನಾ ಬದ್ರುದ್ದೀನ್ ಅಜ್ಮಲ್ ಇವರಲ್ಲಿ ಯಾವ ರಾಜಕೀಯ ನಾಯಕರು ಜನರ ಕಲ್ಯಾಣದ ಬಗ್ಗೆ ಕಾಳಜಿ ವಹಿಸುತ್ತಾರೆ ಎಂಬುದನ್ನು ನಿರ್ಧರಿಸಲಿ ಎಂದಿದ್ದಾರೆ.

ಕಳೆದ 5 ವರ್ಷಗಳಲ್ಲಿ ಕಾಝಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಭೂಮಿ ಒತ್ತುವರಿ ಮಾಡಿಕೊಂಡು ಧಾರ್ಮಿಕ ಸಂಘಟನೆಗಳ ಜಮೀನು ವಶಪಡಿಸಿಕೊಂಡಿದ್ದ ನುಸುಳುಕೋರರನ್ನು ಬಿಜೆಪಿ ಯಶಸ್ವಿಯಾಗಿ ಹೊರದಬ್ಬಿದೆ. 5 ವರ್ಷಗಳ ಹಿಂದೆ ನಾನು ಬಿಜೆಪಿ ಅಧ್ಯಕ್ಷನಾಗಿದ್ದಾಗ ಅಸ್ಸಾಂನ್ನು ಆಂದೋಲನ ಮುಕ್ತ, ಭಯೋತ್ಪಾದನೆ ಮುಕ್ತ ರಾಜ್ಯಮಾಡುವುದಾಗಿ ಭರವಸೆ ನೀಡಿದ್ದೆ. ನಾವು ನಮ್ಮ ಭರವಸೆಯನ್ನು ಪೂರೈಸಿದ್ದೇವೆ. ಇಲ್ಲಿ ಈಗ ಯಾವುದೇ ಚಳವಳಿ ಅಥವಾ ಭಯೋತ್ಪಾದಕರು ಇಲ್ಲ. ಅಸ್ಸಾಂ ಶಾಂತಿ ಮತ್ತು ಅಭಿವೃದ್ಧಿಯ ಮಂತ್ರ  ಪಠಿಸುತ್ತಿದೆ. ನಮಗೆ ಇನ್ನೊಂದು ಐದು ವರ್ಷ ಕೊಡಿ ನಾವು ಒಳನುಸುಳುವಿಕೆ ಸಮಸ್ಯೆಯನ್ನು ಪರಿಹರಿಸುತ್ತೇವೆ ಎಂದಿದ್ದಾರೆ ಅಮಿತ್ ಶಾ.

ತಮ್ಮ ಭಾಷಣದಲ್ಲಿ ಕಾಂಗ್ರೆಸ್ ನೇತಾರರ ವಿರುದ್ಧ ಕಿಡಿಕಾರಿದ ಶಾ, ಕಾಂಗ್ರೆಸ್ ಅಧಿಕಾರಕ್ಕೇರಿದರೆ ಚಹಾ ತೋಟದ ಕಾರ್ಮಿಕರ ಕಲ್ಯಾಣಕ್ಕಾಗಿ ದುಡಿಯುವುದಾಗಿ ಹೇಳಿತ್ತು. ಆದರೆ ಚುನಾವಣೆ ಸಮಯ ಬಂದಾಗ ಮಾತ್ರ ಕಾಂಗ್ರೆಸ್ ಗೆ ಚಹಾ ತೋಟದ ಕಾರ್ಮಿಕರು ನೆನಪಾಗುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಚಹಾ ತೋಟದ ಕಾರ್ಮಿಕರ ಬ ದುಕು ಸುಧಾರಿಸಲು ಈಗಾಗಲೇ ಹಲವಾರು ಯೋಜನೆಗಳನ್ನು ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.

Published On - 5:40 pm, Sun, 14 March 21

Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್