AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

P Chidambaram | 2022ರ ಗೋವಾ ವಿಧಾನಸಭಾ ಚುನಾವಣೆ ವೀಕ್ಷಕರಾಗಿ ಕಾಂಗ್ರೆಸ್​ನಿಂದ ಪಿ. ಚಿದಂಬರಂ ನೇಮಕ

Goa Assembly Election 2022 | ಕಾಂಗ್ರೆಸ್ ಪಕ್ಷದಿಂದ ಗೋವಾ ಚುನಾವಣಾ ಹಿರಿಯ ವೀಕ್ಷಕರಾಗಿ ಪಿ. ಚಿದಂಬರಂ ಅವರನ್ನು ನೇಮಕ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.

P Chidambaram | 2022ರ ಗೋವಾ ವಿಧಾನಸಭಾ ಚುನಾವಣೆ ವೀಕ್ಷಕರಾಗಿ ಕಾಂಗ್ರೆಸ್​ನಿಂದ ಪಿ. ಚಿದಂಬರಂ ನೇಮಕ
ಪಿ. ಚಿದಂಬರಂ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 09, 2021 | 6:49 PM

Share

ನವದೆಹಲಿ: 2022ರಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯ ವೀಕ್ಷಕರಾಗಿ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ (P Chidambaram) ಅವರನ್ನು ನೇಮಕ ಮಾಡಿ ಪಕ್ಷ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದಿಂದ ಗೋವಾ ಚುನಾವಣಾ ಹಿರಿಯ ವೀಕ್ಷಕರಾಗಿ ಪಿ. ಚಿದಂಬರಂ ಅವರನ್ನು ನೇಮಕ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಕಾಂಗ್ರೆಸ್​ನ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವರೂ ಆಗಿರುವ ಪಿ. ಚಿದಂಬರಂ ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಕಾರ್ಯತಂತ್ರಗಳು ಮತ್ತು ಸಂಘಟನೆಯನ್ನು ನೋಡಿಕೊಳ್ಳುತ್ತಾರೆ ಎಂದು ಕೆ.ಸಿ. ವೇಣುಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.

2017ರಲ್ಲಿ ನಡೆದ ಗೋವಾ ಚುನಾವಣೆಯಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿ ಇತರೆ ಪ್ರಾದೇಶಿಕ ಪಕ್ಷಗಳೊಂದಿಗೆ ಸೇರಿ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್ ಅಧಿಕಾರಕ್ಕೇರಲು ಸಾಧ್ಯವಾಗಿರಲಿಲ್ಲ. ಈ ಬಾರಿಯೂ ಅತಿಹೆಚ್ಚು ಮತಗಳನ್ನು ಗಳಿಸಿ ಗೋವಾದಲ್ಲಿ ಅಧಿಕಾರಕ್ಕೇರಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ನಾಯಕರು ಈಗಾಗಲೇ ಕಾರ್ಯತಂತ್ರ ರೂಪಿಸಿದ್ದಾರೆ.

40 ಸದಸ್ಯರಿರುವ ಗೋವಾ ವಿಧಾನಸಭೆಗೆ ಮುಂದಿನ ವರ್ಷ ಅಂದರೆ 2022ರ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಎದುರಾಗಲಿದೆ ಚುನಾವಣೆ ಸವಾಲು; ಪಾಲಿಕೆ, ನಗರಸಭೆಗಳಿಗೆ ಚುನಾವಣೆ ಘೋಷಿಸಿ ಎಂದ ಹೈಕೋರ್ಟ್

ಗೋವಾ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಗಾಂಧಿ ಸಭೆ, ಮುಂಬರುವ ವಿಧಾನ ಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ

(Congress Appoints P Chidambaram as Senior Election Observer for Goa Assembly Election in 2022)

Published On - 6:47 pm, Mon, 9 August 21

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ