ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್ 1 ಮೇಲ್ಛಾವಣಿ ಕುಸಿತಕ್ಕೆ ಮೋದಿ ಸರ್ಕಾರವೇ ಕಾರಣ: ಮಲ್ಲಿಕಾರ್ಜುನ ಖರ್ಗೆ

ದೆಹಲಿಯಲ್ಲಿ  ಭಾರೀ ಮಳೆಯ ನಡುವೆ ಟರ್ಮಿನಲ್ 1 ರ ಮೇಲ್ಛಾವಣಿ  ಕುಸಿದು ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ. ಈ ಘಟನೆಗೆ ಮೋದಿ ಸರ್ಕಾರವನ್ನು ದೂಷಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1 ಬಳಿ ಕಟ್ಟಡವನ್ನು ಉದ್ಘಾಟಿಸಿದ ವೇಳೆ ಮೋದಿ ಅವರ ಆಡಳಿತವನ್ನು ಹೊಗಳಿದ್ದರು ಎಂದಿದ್ದಾರೆ. ಆದರೆ, ಪ್ರಧಾನಿ ಮೋದಿ ಉದ್ಘಾಟಿಸಿದ ಕಟ್ಟಡ ಇದಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್ 1 ಮೇಲ್ಛಾವಣಿ ಕುಸಿತಕ್ಕೆ ಮೋದಿ ಸರ್ಕಾರವೇ ಕಾರಣ: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Follow us
|

Updated on: Jun 28, 2024 | 1:39 PM

ದೆಹಲಿ ಜೂನ್ 28: ದೆಹಲಿ ವಿಮಾನ ನಿಲ್ದಾಣದ (Delhi airport) ಟರ್ಮಿನಲ್ 1 ರ ಮೇಲ್ಛಾವಣಿ ಕುಸಿತಕ್ಕೆ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರವನ್ನು ಕಾಂಗ್ರೆಸ್ (Congress) ಶುಕ್ರವಾರ ದೂಷಿಸಿದೆ. “ಭ್ರಷ್ಟ, ಅಸಮರ್ಥ ಮತ್ತು ಸ್ವಾರ್ಥಿ ಸರ್ಕಾರದ” ಕ್ರಮಗಳಿಂದಾಗಿ ಸಂತ್ರಸ್ತರು ಈ ಸ್ಥಿತಿ ಅನುಭವಿಸಬೇಕಾಯಿತು ಎಂದು ಹೇಳಿದ ಕಾಂಗ್ರೆಸ್   ಕೇಂದ್ರದ ಭ್ರಷ್ಟಾಚಾರ ಮತ್ತು ಕ್ರಿಮಿನಲ್ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದಿದೆ. ದೆಹಲಿಯಲ್ಲಿ  ಭಾರೀ ಮಳೆಯ ನಡುವೆ ಟರ್ಮಿನಲ್ 1 ರ ಮೇಲ್ಛಾವಣಿ  ಕುಸಿದು ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1 ಬಳಿ ಕಟ್ಟಡವನ್ನು ಉದ್ಘಾಟಿಸಿದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಹೊಗಳಿದ್ದರು ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.   ಆದರೆ, ಪ್ರಧಾನಿ ಮೋದಿ ಉದ್ಘಾಟಿಸಿದ ಕಟ್ಟಡ ಇದಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಮಲ್ಲಿಕಾರ್ಜುನ ಖರ್ಗೆ ಟ್ವೀಟ್

ಪ್ರಧಾನಿ ಮೋದಿಯವರ ಆಡಳಿತದಲ್ಲಿ ಭಾರತವು ವಿಶ್ವ ದರ್ಜೆಯ ಮೂಲಸೌಕರ್ಯವನ್ನು ಹೊಂದಿದೆ ಎಂಬ ಮೋದಿಯವರ ಹೇಳಿಕೆಗಳಿಗೆ ಈ ಅಪಘಾತ ಕಪ್ಪು ಚುಕ್ಕಿ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಳೆದ 10 ವರ್ಷಗಳ ಮೋದಿ ಸರ್ಕಾರದ ಅವಧಿಯಲ್ಲಿ ಕಳಪೆ ಮೂಲಸೌಕರ್ಯಗಳು ಕಾರ್ಡ್‌ಗಳ ಗೋಪುರದಂತೆ ಕುಸಿಯಲು ಭ್ರಷ್ಟಾಚಾರ ಮತ್ತು ಕ್ರಿಮಿನಲ್ ನಿರ್ಲಕ್ಷ್ಯವೇ ಕಾರಣ ಎಂದು ಖರ್ಗೆ ತಮ್ಮ ಎಕ್ಸ್ ಪೋಸ್ಟ್  ನಲ್ಲಿ ಬರೆದಿದ್ದಾರೆ.

ಮೋದಿಯವರ 10 ವರ್ಷಗಳ ಸುದೀರ್ಘ ಆಡಳಿತದಲ್ಲಿ ಅಪಘಾತಗಳನ್ನು ಪಟ್ಟಿ ಮಾಡಿದ ಖರ್ಗೆ, ಈ ನಿದರ್ಶನಗಳು ಮೋದಿಯವರ ಹೇಳಿಕೆಗಳಲ್ಲಿ ಎಷ್ಟು ಸತ್ಯ ಇದೆ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.

ಮಾರ್ಚ್ 10 ರಂದು, ಮೋದಿ ಜಿ ದೆಹಲಿ ವಿಮಾನ ನಿಲ್ದಾಣ T1 ಅನ್ನು ಉದ್ಘಾಟಿಸಿದಾಗ, ಅವರು ತಮ್ಮನ್ನು “ದೂಸ್ರಿ ಮಿಟ್ಟಿ ಕಾ ಇನ್ಸಾನ್…” ಎಂದು ಕರೆದರು, ಈ ಎಲ್ಲಾ ಸುಳ್ಳು ಧೈರ್ಯ ಮತ್ತು ವಾಕ್ಚಾತುರ್ಯಗಳು ಚುನಾವಣೆಯ ಮೊದಲು ರಿಬ್ಬನ್ ಕತ್ತರಿಸುವ ಸಮಾರಂಭಗಳಲ್ಲಿ ತ್ವರಿತವಾಗಿ ತೊಡಗಿಸಿಕೊಳ್ಳಲು ಮಾತ್ರ! ದೆಹಲಿ ವಿಮಾನ ನಿಲ್ದಾಣದ ದುರಂತದ ಸಂತ್ರಸ್ತರು ಭ್ರಷ್ಟ, ಅಸಮರ್ಪಕ ಮತ್ತು ಸ್ವಾರ್ಥಿ ಸರ್ಕಾರದ ಭಾರ ಹೊರಬೇಕಾಗಿ ಬಂತು ಎಂದು ಖರ್ಗೆ ಹೇಳಿದ್ದಾರೆ.

ಏತನ್ಮಧ್ಯೆ, ಅಪಘಾತವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಹೇಳಿದ್ದಾರೆ.

ಇದನ್ನೂ ಓದಿ: Delhi Airport Roof Collapse: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಛಾವಣಿ ಕುಸಿದು ಓರ್ವ ಸಾವು, ಹಲವರಿಗೆ ಗಾಯ!

ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಕಟ್ಟಡವು ಇನ್ನೊಂದು ಬದಿಯಲ್ಲಿದೆ. ಇಲ್ಲಿ ಕುಸಿದ ಕಟ್ಟಡವು 2009 ರಲ್ಲಿ ಕಾರ್ಯನಿರ್ವಹಿಸಲು ತೊಡಗಿದ  ಹಳೆಯದು ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ. ಸಚಿವರು ಮೃತರಿಗೆ ₹ 20 ಲಕ್ಷ ಹಾಗೂ ಗಾಯಗೊಂಡವರಿಗೆ ₹ 3 ಲಕ್ಷ ಪರಿಹಾರ ಘೋಷಿಸಿದರು.

ಅಪಘಾತದಿಂದಾಗಿ ವಿಮಾನ ಕಾರ್ಯಾಚರಣೆಗೆ ತೀವ್ರ ಹೊಡೆತ ಬಿದ್ದಿದೆ. ಅಧಿಕಾರಿಗಳು ಟರ್ಮಿನಲ್ 1 ರಿಂದ ನಿರ್ಗಮನವನ್ನು ಸ್ಥಗಿತಗೊಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್
T20 World Cup: ಶಾಂಪೆನ್​ ಬಾಟಲ್​ ಓಪನ್​ ಮಾಡಿ ಸಂಭ್ರಮಿಸಿದ ನಾಯಕ ರೋಹಿತ್