AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹಂಚಿಕೊಂಡ ಫೊಟೊ ಟ್ವಿಟರ್​ನಲ್ಲಿ ವೈರಲ್

Tamil Nadu Elections 2021: ಅತ್ಯಂತ ಪ್ರಾಮಾಣಿಕತೆಯಿಂದ ಹೇಳಬೇಕೆಂದರೆ ಚುನಾವಣಾ ಪ್ರಚಾರದ ಅಂತ್ಯದಲ್ಲಿ ನಾನು ಕೊನೆಗೆ ಉಳಿಸಿದ್ದು ಅಂದರೆ ಕೇವಲ ಇದೊಂದನ್ನೇ. ದೇವರಲ್ಲಿ ನಾವು ನಂಬಿಕೆ ಇಡುತ್ತೇವೆ. ಆ ದೇವರು ಎಲ್ಲಾ ಆಕಾರ ಮತ್ತು ಗಾತ್ರದಲ್ಲಿ ನಮ್ಮೆದುರಿಗೆ ಬರುತ್ತಾನೆ’ ಎಂದು ಮೋಹನ್ ಅವರು ಬರೆದುಕೊಂಡಿದ್ದಾರೆ.

ತಮಿಳುನಾಡು ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹಂಚಿಕೊಂಡ ಫೊಟೊ ಟ್ವಿಟರ್​ನಲ್ಲಿ ವೈರಲ್
ಕಾಂಗ್ರೆಸ್ ಅಭ್ಯರ್ಥಿ ಬಹಿರಂಗ ಪ್ರಚಾರದ ನಂತರ ಏನಂತ ಪೋಸ್ಟ್ ಮಾಡಿದ್ದಾರೆ ಗೊತ್ತಾ?
guruganesh bhat
| Edited By: |

Updated on: Apr 05, 2021 | 6:56 PM

Share

ಚೆನ್ನೈ: ಚುನಾವಣಾ ಪ್ರಚಾರ ಮಾಡಿದ ನಂತರ ಅಭ್ಯರ್ಥಿಗಳು ವಿಧವಿಧದ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ. ತಾವು ಭಾಗವಹಿಸಿದ ಸಭೆ, ಮೆರವಣಿಗೆ, ನೆರೆದ ಅಪಾರ ಪ್ರಮಾಣದ ಜನ..ಹೀಗೆ ಪ್ರತಿಯೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ. ಚುನಾವಣಾ ಪ್ರಚಾರದ ನವ ಮಾಧ್ಯಮವಾಗಿ ಅತ್ಯಂತ ಶಕ್ತಿಯುತ ಮಾಧ್ಯಮವಾಗಿ ಸಾಮಾಜಿಕ ಜಾಲತಾಣಗಳು ಬಳಕೆಯಾಗುತ್ತಿವೆ ಎಂಬುದು ಯಾರಿಗೂ ಗೊತ್ತಿಲ್ಲದ್ದೇನೂ ಅಲ್ಲ. ಹೀಗಿರುವಾಗ, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮುಗಿಸಿದ ಕಾಂಗ್ರೆಸ್ ಅಭ್ಯರ್ಥಿಯೋರ್ವರು ಹಂಚಿಕೊಂಡ ಫೋಟೊ ಅಚ್ಚರಿ ಮೂಡಿಸಿದೆ.

ಇನ್ನೇನು, ನಾಳೆ ಬೆಳಗ್ಗೆ ಆದರೆ ಸಾಕು ತಮಿಳುನಾಡಿನ ಮತದಾರರು ತಮ್ಮ ಹಕ್ಕು ಚಲಾಯಿಸಲು ಶುರುಮಾಡುತ್ತಾರೆ. ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆಹಾಡಲಾಗಿದೆ. ಒಮಲೂರ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ 42 ವರ್ಷದ ಮೋಹನ್ ಕುಮಾರಮಂಗಲಮ್, ತಮ್ಮ ಟ್ವಿಟರ್ ಖಾತೆಯಲ್ಲಿ ತಮ್ಮ ಸ್ಲಿಪ್ಪರ್​ನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಹೊರಭಾಗದಲ್ಲಿ ಅಲ್ಲಲ್ಲಿ ಹರಿದುಹೋಗಿರುವ ಕಪ್ಪು ಬಣ್ಣದ ಚಪ್ಪಲಿಯು ಟ್ವಿಟರ್​ನಲ್ಲಿ ಸಂಚಲನ ಮೂಡಿಸಿದೆ.

ಅತ್ಯಂತ ಪ್ರಾಮಾಣಿಕತೆಯಿಂದ ಹೇಳಬೇಕೆಂದರೆ ಚುನಾವಣಾ ಪ್ರಚಾರದ ಅಂತ್ಯದಲ್ಲಿ ನಾನು ಕೊನೆಗೆ ಉಳಿಸಿದ್ದು ಅಂದರೆ ಕೇವಲ ಇದೊಂದನ್ನೇ. ದೇವರಲ್ಲಿ ನಾವು ನಂಬಿಕೆ ಇಡುತ್ತೇವೆ. ಆ ದೇವರು ಎಲ್ಲಾ ಆಕಾರ ಮತ್ತು ಗಾತ್ರದಲ್ಲಿ ನಮ್ಮೆದುರಿಗೆ ಬರುತ್ತಾನೆ’ ಎಂದು ಮೋಹನ್ ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಮುಖ್ಯಮಂತ್ರಿ ಇಪಿಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಡಿಎಂಕೆ ನಾಯಕ ಎ.ರಾಜಾಗೆ 2 ದಿನ ಚುನಾವಣಾ ಪ್ರಚಾರದಿಂದ ನಿರ್ಬಂಧ

Tamil Nadu Elections 2021: ತಮಿಳುನಾಡು ಸಿಎಂ ಪಳನಿಸ್ವಾಮಿ ಅವರು ನರೇಂದ್ರ ಮೋದಿ ಪಾದಕ್ಕೆ ನಮಸ್ಕರಿಸುವುದನ್ನು ನೋಡಲಾಗುತ್ತಿಲ್ಲ: ರಾಹುಲ್ ಗಾಂಧಿ

Follow Us
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
OTD: ಭಯೋತ್ಪಾದಕರ ದಾಳಿ: ಕ್ರಿಕೆಟ್ ಇತಿಹಾಸದ ಕರಾಳ ದಿನ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಅಮೆರಿಕದ ಟ್ರಂಪ್ ಟವರ್​​ನಲ್ಲಿ ಅನುಮಾನಾಸ್ಪದ ಬಾಕ್ಸ್​ ಪತ್ತೆ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್