AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಆಪ್ತರು ಜಾರ್ಜ್ ಸೊರೊಸ್ ಹೇಳಿಕೆಯನ್ನು ಟ್ವೀಟ್ ಮಾಡಿದ್ದೇಕೆ?: ಬಿಜೆಪಿ ಪ್ರಶ್ನೆ

ಮೋದಿ ಅವರು ಸಂಸತ್ತಿನಲ್ಲಿ ಮತ್ತು ಭಾರತದಲ್ಲಿ ಅದಾನಿ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸಲು ತಪ್ಪಿಸಿಕೊಳ್ಳಬಹುದು. ಆದರೆ ಅವರು ವಿದೇಶಿ ಹೂಡಿಕೆದಾರರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಜಾರ್ಜ್ ಸೊರೊಸ್ ಹೇಳಿಕೆ ಕುರಿತು ಫೈನಾನ್ಷಿಯಲ್ ಟೈಮ್ಸ್ ವರದಿಯನ್ನು ಪ್ರವೀಣ್ ಚಕ್ರವರ್ತಿ ಹಂಚಿಕೊಂಡಿದ್ದಾರೆ.

ರಾಹುಲ್ ಗಾಂಧಿ ಆಪ್ತರು ಜಾರ್ಜ್ ಸೊರೊಸ್ ಹೇಳಿಕೆಯನ್ನು ಟ್ವೀಟ್ ಮಾಡಿದ್ದೇಕೆ?: ಬಿಜೆಪಿ ಪ್ರಶ್ನೆ
ಶೆಹಜಾದ್ ಪೂನವಾಲಾ
ರಶ್ಮಿ ಕಲ್ಲಕಟ್ಟ
|

Updated on: Feb 17, 2023 | 9:00 PM

Share

ಬಿಲಿಯನೇರ್ ಹೂಡಿಕೆದಾರ ಜಾರ್ಜ್ ಸೊರೊಸ್(George Soros) ಹೇಳಿಕೆಯಿಂದ ಕಾಂಗ್ರೆಸ್ (Congress) ದೂರವಿರಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಶುಕ್ರವಾರ ಹೇಳಿದ್ದಾರೆ. ಗೌತಮ್ ಅದಾನಿ (Gautham Adani) ಅವರ ವ್ಯಾಪಾರ ಸಾಮ್ರಾಜ್ಯವನ್ನು ಆವರಿಸಿರುವ ಪ್ರಕ್ಷುಬ್ಧತೆಯು ಶಿಕ್ಷಾರ್ಹ ಷೇರು ಮಾರುಕಟ್ಟೆಯ ಮಾರಾಟವನ್ನು ಹುಟ್ಟುಹಾಕಿದೆ ಮತ್ತು ಹೂಡಿಕೆಯ ಅವಕಾಶವಾಗಿ ಭಾರತದಲ್ಲಿ ನಂಬಿಕೆಗೆ ಧಕ್ಕೆ ತಂದಿದೆ ಎಂದು ಬಿಲಿಯನೇರ್ ಹೂಡಿಕೆದಾರ ಜಾರ್ಜ್ ಸೊರೊಸ್ ಹೇಳಿದ್ದಾರೆ. ಸೊರೊಸ್ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆಪ್ತ ಪ್ರವೀಣ್ ಚಕ್ರವರ್ತಿ ಟ್ವೀಟ್ ಮಾಡಿದ್ದರು.

“ಇದು ಹಮ್ ಸಾಥ್ ಸಾಥ್ ಹೇ. ರಾಹುಲ್ ಗಾಂಧಿಯವರ ಆಪ್ತ ಸಹಾಯಕ ಮತ್ತು ಕಾಂಗ್ರೆಸ್ ಪರಿಸರ ವ್ಯವಸ್ಥೆ ಮತ್ತು ಪರಿವಾರದ ಅಗ್ರಗಣ್ಯ ನಾಯಕ ಪ್ರವೀಣ್ ಚಕ್ರವರ್ತಿ ಅವರು ಜಾರ್ಜ್ ಸೊರೊಸ್ ಅವರ ಅಜೆಂಡಾವನ್ನು ಟ್ವೀಟ್ ಮಾಡಿದ್ದು ಇದು ಕಾಂಗ್ರೆಸ್ ಪಕ್ಷ ಮುಗ್ಧ ವೀಕ್ಷಕ ಅಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಶೆಹಜಾದ್ ಪೂನವಾಲಾ ಹೇಳಿದ್ದಾರೆ.

ಮೋದಿ ಅವರು ಸಂಸತ್ತಿನಲ್ಲಿ ಮತ್ತು ಭಾರತದಲ್ಲಿ ಅದಾನಿ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸಲು ತಪ್ಪಿಸಿಕೊಳ್ಳಬಹುದು. ಆದರೆ ಅವರು ವಿದೇಶಿ ಹೂಡಿಕೆದಾರರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಜಾರ್ಜ್ ಸೊರೊಸ್ ಹೇಳಿಕೆ ಕುರಿತು ಫೈನಾನ್ಷಿಯಲ್ ಟೈಮ್ಸ್ ವರದಿಯನ್ನು ಪ್ರವೀಣ್ ಚಕ್ರವರ್ತಿ ಹಂಚಿಕೊಂಡಿದ್ದಾರೆ.

ಇದು ಭಾರತದ ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಕೇಂದ್ರ ಸಚಿವೆ ಸ್ಮೃತಿ ಪ್ರತಿಕ್ರಿಯಿಸಿದ್ದಾರೆ. ಈ ವಿಚಾರ ಬಿಜೆಪಿ-ಕಾಂಗ್ರೆಸ್ ವಾಗ್ದಾಳಿ ನಡೆಸುವ ಮುನ್ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೊರೊಸ್ ವಿರುದ್ಧ ವಾಗ್ದಾಳಿ ನಡೆಸಿದರು. “ಪ್ರಧಾನಿ-ಸಂಬಂಧಿತ ಅದಾನಿ ಹಗರಣವು ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನವನ್ನು ಉಂಟುಮಾಡುತ್ತದೆಯೇ ಎಂಬುದು ಸಂಪೂರ್ಣವಾಗಿ ಕಾಂಗ್ರೆಸ್, ವಿರೋಧ ಪಕ್ಷಗಳು ಮತ್ತು ನಮ್ಮ ಚುನಾವಣಾ ಪ್ರಕ್ರಿಯೆಯ ಮೇಲೆ ಅವಲಂಬಿತವಾಗಿದೆ. ಜಾರ್ಜ್ ಸೊರೊಸ್‌ನೊಂದಿಗೆ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಮ್ಮ ನೆಹರೂವಿಯನ್ ಪರಂಪರೆಯು ಸೊರೊಸ್‌ನಂತಹ ಜನರು ನಮ್ಮ ಚುನಾವಣಾ ಫಲಿತಾಂಶಗಳನ್ನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಖಚಿತಪಡಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿ: Shiv Sena Symbol ಏಕನಾಥ್ ಶಿಂಧೆ ಬಣ ಪಾಲಾದ ಬಿಲ್ಲು ಬಾಣ ಚಿಹ್ನೆ, ಉದ್ಧವ್ ಠಾಕ್ರಗೆ ಶಾಕ್ ಕೊಟ್ಟ ಚುನಾವಣಾ ಆಯೋಗ

ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸ್ಮೃತಿ ಇರಾನಿ, ಜಾರ್ಜ್ ಸೊರೊಸ್ ಅವರು ಪ್ರಧಾನಿ ಮೋದಿಯವರನ್ನು ಮಾತ್ರವಲ್ಲದೆ ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೂ ದಾಳಿ ಮಾಡಿದ್ದಾರೆ. ಕೆಲವು “ಆಯ್ಕೆಯಾದ” ಜನರು ಇಲ್ಲಿ ಸರ್ಕಾರವನ್ನು ನಡೆಸಬೇಕೆಂದು ಸೊರೊಸ್ ಬಯಸುತ್ತಾರೆ “ತನ್ನ ನೀಚ ಯೋಜನೆಗಳನ್ನು ಯಶಸ್ವಿಗೊಳಿಸಲು ಅವರ ಅಗತ್ಯಗಳಿಗೆ ಹೊಂದಿಕೊಳ್ಳುತ್ತಾರೆ” ಎಂದು ಸ್ಮೃತಿ ಇರಾನಿ ಹೇಳಿದರು.

ಮ್ಯೂನಿಚ್ ಸೆಕ್ಯುರಿಟಿ ಕಾನ್ಫರೆನ್ಸ್‌ಗೆ ಮುನ್ನ ಜಾರ್ಜ್ ಸೊರೊಸ್ ನೀಡಿದ ಹೇಳಿಕೆಯು ವೈರಲ್ ಆಗಿದ್ದು, ಅನೇಕ ಗಣ್ಯ ವ್ಯಕ್ತಿಗಳು ಅದನ್ನು ಹಂಚಿಕೊಂಡಿದ್ದಾರೆ. ಚಲನಚಿತ್ರ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ “ನಿಮ್ಮ ಶತ್ರುಗಳನ್ನು ತಿಳಿದುಕೊಳ್ಳಿ. ಇಲ್ಲಿ, ಸ್ವತಃ ಸೂತ್ರಧಾರಿ. ಜಾರ್ಜ್ ಸೊರೊಸ್ ಇಲ್ಲದಿದ್ದರೆ, ಭಾರತದಲ್ಲಿ ಅನೇಕ ಅರ್ಬನ್ ನಕ್ಸಲರು ನಿರುದ್ಯೋಗ ಮತ್ತು ಹಸಿವಿನಿಂದ ಸಾಯುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಜಾರ್ಜ್ ಸೊರೊಸ್ ಯಾರು ಮತ್ತು ಬಿಜೆಪಿಯ ಟ್ರೋಲ್ ಮಂತ್ರಾಲಯವು ಸಂಪೂರ್ಣ ಪತ್ರಿಕಾಗೋಷ್ಠಿಯನ್ನು ಏಕೆ ಮೀಸಲಿಟ್ಟಿದೆ. ಅಂದಹಾಗೆ ಮಂತ್ರಿಜಿ ಭಾರತದ ಚುನಾವಣಾ ಪ್ರಕ್ರಿಯೆಯಲ್ಲಿ ಇಸ್ರೇಲ್ ಏಜೆನ್ಸಿಯ ಹಸ್ತಕ್ಷೇಪದ ಬಗ್ಗೆ ಯಾವುದೇ ಕಾಮೆಂಟ್? ಅದು ಭಾರತದ ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಾಯವಾಗಿದೆ ಎಂದು ಸಂಸದೆ ಪ್ರಿಯಾಂಕಾ ಚತುರ್ವೇದಿ ಟ್ವೀಟ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ