AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಬೆಲ್​ ನಾಯಕರ ಭೇಟಿ ಬೆನ್ನಲ್ಲೇ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆ

ತೆಲಂಗಾಣ, ಗುಜರಾತ್​, ಮಧ್ಯ ಪ್ರದೇಶ್​ ಹಾಗೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ನಾಯಕತ್ವ ಬದಲಿಸುವ ನಿರ್ಧಾರ ತೆಗೆದುಕೊಂಡಿದೆ. ಹೈದರಾಬಾದ್ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿತ್ತು. ಇದರ, ಜವಾಬ್ದಾರಿ ಹೊತ್ತು ತೆಲಂಗಾಣ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಉತ್ತಮ್​ ಕುಮಾರ್​ ರೆಡ್ಡಿ ರಾಜೀನಾಮೆ ನೀಡಿದ್ದಾರೆ.

ರೆಬೆಲ್​ ನಾಯಕರ ಭೇಟಿ ಬೆನ್ನಲ್ಲೇ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆ
ಸೋನಿಯಾ ಗಾಂಧಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 20, 2020 | 4:28 PM

Share

ದೆಹಲಿ: ಅಧ್ಯಕ್ಷ ಹುದ್ದೆ ಬದಲಾಗಬೇಕೆಂದು 23 ರೆಬೆಲ್​ ನಾಯಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿ ಶನಿವಾರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆತ್ತು. ಈ ಸಭೆ ಬೆನ್ನಲ್ಲೇ ಕಾಂಗ್ರೆಸ್​ ವಿವಿಧ ರಾಜ್ಯಗಳ ನಾಯಕತ್ವ ಬದಲಾವಣೆಗೆ ಒತ್ತು ನೀಡಲು ಆರಂಭಿಸಿದೆ. ಉತ್ತಮ ಪ್ರದರ್ಶನ ನೀಡದ ರಾಜ್ಯಗಳಲ್ಲಿ ತಕ್ಷಣವೇ ಕಾಂಗ್ರೆಸ್​ ಅಧ್ಯಕ್ಷ ಹುದ್ದೆ ಬದಲಾವಣೆಗೆ ‘ಕೈ’ ಮುಂದಾಗಿದೆ.

ತೆಲಂಗಾಣ, ಗುಜರಾತ್​, ಮಧ್ಯ ಪ್ರದೇಶ್​ ಹಾಗೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ನಾಯಕತ್ವ ಬದಲಿಸುವ ನಿರ್ಧಾರ ತೆಗೆದುಕೊಂಡಿದೆ. ಹೈದರಾಬಾದ್ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿತ್ತು. ಇದರ, ಜವಾಬ್ದಾರಿ ಹೊತ್ತು ತೆಲಂಗಾಣ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಉತ್ತಮ್​ ಕುಮಾರ್​ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಗುಜರಾತ್​ ಉಪಚುನಾವಣೆಯ ಕಳಪೆ ಪ್ರದರ್ಶನದ ಕಾರಣ ನೀಡಿ, ಅಲ್ಲಿನ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಅಮಿತ್​ ಚಾವ್ಡಾ ಕೂಡ ಸ್ಥಾನ ತೊರೆದಿದ್ದಾರೆ.

ಮಧ್ಯ ಪ್ರದೇಶ ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸಿಎಲ್‌ಪಿ ನಾಯಕ ಹುದ್ದೆಯನ್ನು ಅಲಂಕರಿಸಿದ್ದಾರೆ. ಜಿ -23 ಜೊತೆ ಉನ್ನತ ಮಟ್ಟದ ನಾಯಕರು ಸಭೆ ಸೇರುವಂತೆ ಮಾಡುವಲ್ಲಿ ಕಮಲ್​ನಾಥ್​ ಪ್ರಮುಖ ಪಾತ್ರವಹಿಸಿದ್ದರು ಎನ್ನಲಾಗಿದೆ. ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷರಾಗಿರುವ ಬಾಲಾಸಾಹೇಬ್ ಥೋರತ್ ಅವರಿಗೆ ರಾಜ್ಯ ಶಾಸಕಾಂಗ ಪಕ್ಷದ ನಾಯಕ ಸ್ಥಾನ ನೀಡಲಾಗಿದೆ.

ಮುಂದಿನ ವರ್ಷ ಕೇರಳ ಹಾಗೂ ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಎರಡು ರಾಜ್ಯಗಳಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ.

ನಿನ್ನೆಯ ಸಭೆಯಲ್ಲೇನಾಗಿತ್ತು? ಕಾಂಗ್ರೆಸ್​ ಅಧ್ಯಕ್ಷ ಸ್ಥಾನ ಗಾಂಧಿ ಕುಟುಂಬದ ಕೈಯಲ್ಲಿರುವುದಕ್ಕೆ ಕೈ ಪಕ್ಷದ ಪ್ರಮುಖ ನಾಯಕರು ಆಕ್ರೋಶ ಹೊರ ಹಾಕಿದ್ದರು. ಅಷ್ಟೇ ಅಲ್ಲ, ಕೂಡಲೇ ನಾಯಕತ್ವ ಬದಲಾವಣೆ ಆಗಬೇಕು, ಗಾಂಧಿ ಕುಟುಂಬದ ಹೊರತಾದ ನಾಯಕರು ಪಕ್ಷದ ನೇತೃತ್ವ ವಹಿಸಬೇಕು ಎಂದು ಆಗ್ರಹಿಸಿದ್ದರು. ಅಚ್ಚರಿ ಎಂಬಂತೆ 7 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಯಾರೊಬ್ಬರೂ ರಾಹುಲ್​ ಗಾಂಧಿಯನ್ನು ಟೀಕೆ ಮಾಡಿಲ್ಲವಂತೆ. ಬದಲಿಗೆ ಅವರನ್ನು ಬೆಂಬಲಿಸಿದ್ದರು. ಈ ಮೂಲಕ ರಾಹುಲ್​ ಎಐಸಿಸಿ ಅಧ್ಯಕ್ಷರಾಗಲು ಯಾವುದೇ ತೊಂದರೆ ಇಲ್ಲ ಎಂದು ರೆಬೆಲ್​ ನಾಯಕರು ಪರೋಕ್ಷವಾಗಿ ಸಮ್ಮತಿಸಿದ್ದರು.

ಗಾಂಧಿ ಕುಟುಂಬದ ನಾಯಕತ್ವ ವಿರೋಧಿಸಿದವರೇ ಈಗ ರಾಹುಲ್​ ಬೆಂಬಲಿಸಿದರು

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!