AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಬೆಲ್​ ನಾಯಕರ ಭೇಟಿ ಬೆನ್ನಲ್ಲೇ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆ

ತೆಲಂಗಾಣ, ಗುಜರಾತ್​, ಮಧ್ಯ ಪ್ರದೇಶ್​ ಹಾಗೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ನಾಯಕತ್ವ ಬದಲಿಸುವ ನಿರ್ಧಾರ ತೆಗೆದುಕೊಂಡಿದೆ. ಹೈದರಾಬಾದ್ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿತ್ತು. ಇದರ, ಜವಾಬ್ದಾರಿ ಹೊತ್ತು ತೆಲಂಗಾಣ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಉತ್ತಮ್​ ಕುಮಾರ್​ ರೆಡ್ಡಿ ರಾಜೀನಾಮೆ ನೀಡಿದ್ದಾರೆ.

ರೆಬೆಲ್​ ನಾಯಕರ ಭೇಟಿ ಬೆನ್ನಲ್ಲೇ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆ
ಸೋನಿಯಾ ಗಾಂಧಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 20, 2020 | 4:28 PM

Share

ದೆಹಲಿ: ಅಧ್ಯಕ್ಷ ಹುದ್ದೆ ಬದಲಾಗಬೇಕೆಂದು 23 ರೆಬೆಲ್​ ನಾಯಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿ ಶನಿವಾರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆತ್ತು. ಈ ಸಭೆ ಬೆನ್ನಲ್ಲೇ ಕಾಂಗ್ರೆಸ್​ ವಿವಿಧ ರಾಜ್ಯಗಳ ನಾಯಕತ್ವ ಬದಲಾವಣೆಗೆ ಒತ್ತು ನೀಡಲು ಆರಂಭಿಸಿದೆ. ಉತ್ತಮ ಪ್ರದರ್ಶನ ನೀಡದ ರಾಜ್ಯಗಳಲ್ಲಿ ತಕ್ಷಣವೇ ಕಾಂಗ್ರೆಸ್​ ಅಧ್ಯಕ್ಷ ಹುದ್ದೆ ಬದಲಾವಣೆಗೆ ‘ಕೈ’ ಮುಂದಾಗಿದೆ.

ತೆಲಂಗಾಣ, ಗುಜರಾತ್​, ಮಧ್ಯ ಪ್ರದೇಶ್​ ಹಾಗೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ನಾಯಕತ್ವ ಬದಲಿಸುವ ನಿರ್ಧಾರ ತೆಗೆದುಕೊಂಡಿದೆ. ಹೈದರಾಬಾದ್ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿತ್ತು. ಇದರ, ಜವಾಬ್ದಾರಿ ಹೊತ್ತು ತೆಲಂಗಾಣ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಉತ್ತಮ್​ ಕುಮಾರ್​ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಗುಜರಾತ್​ ಉಪಚುನಾವಣೆಯ ಕಳಪೆ ಪ್ರದರ್ಶನದ ಕಾರಣ ನೀಡಿ, ಅಲ್ಲಿನ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಅಮಿತ್​ ಚಾವ್ಡಾ ಕೂಡ ಸ್ಥಾನ ತೊರೆದಿದ್ದಾರೆ.

ಮಧ್ಯ ಪ್ರದೇಶ ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸಿಎಲ್‌ಪಿ ನಾಯಕ ಹುದ್ದೆಯನ್ನು ಅಲಂಕರಿಸಿದ್ದಾರೆ. ಜಿ -23 ಜೊತೆ ಉನ್ನತ ಮಟ್ಟದ ನಾಯಕರು ಸಭೆ ಸೇರುವಂತೆ ಮಾಡುವಲ್ಲಿ ಕಮಲ್​ನಾಥ್​ ಪ್ರಮುಖ ಪಾತ್ರವಹಿಸಿದ್ದರು ಎನ್ನಲಾಗಿದೆ. ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷರಾಗಿರುವ ಬಾಲಾಸಾಹೇಬ್ ಥೋರತ್ ಅವರಿಗೆ ರಾಜ್ಯ ಶಾಸಕಾಂಗ ಪಕ್ಷದ ನಾಯಕ ಸ್ಥಾನ ನೀಡಲಾಗಿದೆ.

ಮುಂದಿನ ವರ್ಷ ಕೇರಳ ಹಾಗೂ ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಎರಡು ರಾಜ್ಯಗಳಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ.

ನಿನ್ನೆಯ ಸಭೆಯಲ್ಲೇನಾಗಿತ್ತು? ಕಾಂಗ್ರೆಸ್​ ಅಧ್ಯಕ್ಷ ಸ್ಥಾನ ಗಾಂಧಿ ಕುಟುಂಬದ ಕೈಯಲ್ಲಿರುವುದಕ್ಕೆ ಕೈ ಪಕ್ಷದ ಪ್ರಮುಖ ನಾಯಕರು ಆಕ್ರೋಶ ಹೊರ ಹಾಕಿದ್ದರು. ಅಷ್ಟೇ ಅಲ್ಲ, ಕೂಡಲೇ ನಾಯಕತ್ವ ಬದಲಾವಣೆ ಆಗಬೇಕು, ಗಾಂಧಿ ಕುಟುಂಬದ ಹೊರತಾದ ನಾಯಕರು ಪಕ್ಷದ ನೇತೃತ್ವ ವಹಿಸಬೇಕು ಎಂದು ಆಗ್ರಹಿಸಿದ್ದರು. ಅಚ್ಚರಿ ಎಂಬಂತೆ 7 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಯಾರೊಬ್ಬರೂ ರಾಹುಲ್​ ಗಾಂಧಿಯನ್ನು ಟೀಕೆ ಮಾಡಿಲ್ಲವಂತೆ. ಬದಲಿಗೆ ಅವರನ್ನು ಬೆಂಬಲಿಸಿದ್ದರು. ಈ ಮೂಲಕ ರಾಹುಲ್​ ಎಐಸಿಸಿ ಅಧ್ಯಕ್ಷರಾಗಲು ಯಾವುದೇ ತೊಂದರೆ ಇಲ್ಲ ಎಂದು ರೆಬೆಲ್​ ನಾಯಕರು ಪರೋಕ್ಷವಾಗಿ ಸಮ್ಮತಿಸಿದ್ದರು.

ಗಾಂಧಿ ಕುಟುಂಬದ ನಾಯಕತ್ವ ವಿರೋಧಿಸಿದವರೇ ಈಗ ರಾಹುಲ್​ ಬೆಂಬಲಿಸಿದರು

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ