AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಬೆಲ್​ ನಾಯಕರ ಭೇಟಿ ಬೆನ್ನಲ್ಲೇ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆ

ತೆಲಂಗಾಣ, ಗುಜರಾತ್​, ಮಧ್ಯ ಪ್ರದೇಶ್​ ಹಾಗೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ನಾಯಕತ್ವ ಬದಲಿಸುವ ನಿರ್ಧಾರ ತೆಗೆದುಕೊಂಡಿದೆ. ಹೈದರಾಬಾದ್ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿತ್ತು. ಇದರ, ಜವಾಬ್ದಾರಿ ಹೊತ್ತು ತೆಲಂಗಾಣ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಉತ್ತಮ್​ ಕುಮಾರ್​ ರೆಡ್ಡಿ ರಾಜೀನಾಮೆ ನೀಡಿದ್ದಾರೆ.

ರೆಬೆಲ್​ ನಾಯಕರ ಭೇಟಿ ಬೆನ್ನಲ್ಲೇ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆ
ಸೋನಿಯಾ ಗಾಂಧಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 20, 2020 | 4:28 PM

Share

ದೆಹಲಿ: ಅಧ್ಯಕ್ಷ ಹುದ್ದೆ ಬದಲಾಗಬೇಕೆಂದು 23 ರೆಬೆಲ್​ ನಾಯಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿ ಶನಿವಾರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆತ್ತು. ಈ ಸಭೆ ಬೆನ್ನಲ್ಲೇ ಕಾಂಗ್ರೆಸ್​ ವಿವಿಧ ರಾಜ್ಯಗಳ ನಾಯಕತ್ವ ಬದಲಾವಣೆಗೆ ಒತ್ತು ನೀಡಲು ಆರಂಭಿಸಿದೆ. ಉತ್ತಮ ಪ್ರದರ್ಶನ ನೀಡದ ರಾಜ್ಯಗಳಲ್ಲಿ ತಕ್ಷಣವೇ ಕಾಂಗ್ರೆಸ್​ ಅಧ್ಯಕ್ಷ ಹುದ್ದೆ ಬದಲಾವಣೆಗೆ ‘ಕೈ’ ಮುಂದಾಗಿದೆ.

ತೆಲಂಗಾಣ, ಗುಜರಾತ್​, ಮಧ್ಯ ಪ್ರದೇಶ್​ ಹಾಗೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ನಾಯಕತ್ವ ಬದಲಿಸುವ ನಿರ್ಧಾರ ತೆಗೆದುಕೊಂಡಿದೆ. ಹೈದರಾಬಾದ್ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿತ್ತು. ಇದರ, ಜವಾಬ್ದಾರಿ ಹೊತ್ತು ತೆಲಂಗಾಣ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಉತ್ತಮ್​ ಕುಮಾರ್​ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಗುಜರಾತ್​ ಉಪಚುನಾವಣೆಯ ಕಳಪೆ ಪ್ರದರ್ಶನದ ಕಾರಣ ನೀಡಿ, ಅಲ್ಲಿನ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಅಮಿತ್​ ಚಾವ್ಡಾ ಕೂಡ ಸ್ಥಾನ ತೊರೆದಿದ್ದಾರೆ.

ಮಧ್ಯ ಪ್ರದೇಶ ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸಿಎಲ್‌ಪಿ ನಾಯಕ ಹುದ್ದೆಯನ್ನು ಅಲಂಕರಿಸಿದ್ದಾರೆ. ಜಿ -23 ಜೊತೆ ಉನ್ನತ ಮಟ್ಟದ ನಾಯಕರು ಸಭೆ ಸೇರುವಂತೆ ಮಾಡುವಲ್ಲಿ ಕಮಲ್​ನಾಥ್​ ಪ್ರಮುಖ ಪಾತ್ರವಹಿಸಿದ್ದರು ಎನ್ನಲಾಗಿದೆ. ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷರಾಗಿರುವ ಬಾಲಾಸಾಹೇಬ್ ಥೋರತ್ ಅವರಿಗೆ ರಾಜ್ಯ ಶಾಸಕಾಂಗ ಪಕ್ಷದ ನಾಯಕ ಸ್ಥಾನ ನೀಡಲಾಗಿದೆ.

ಮುಂದಿನ ವರ್ಷ ಕೇರಳ ಹಾಗೂ ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಎರಡು ರಾಜ್ಯಗಳಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ.

ನಿನ್ನೆಯ ಸಭೆಯಲ್ಲೇನಾಗಿತ್ತು? ಕಾಂಗ್ರೆಸ್​ ಅಧ್ಯಕ್ಷ ಸ್ಥಾನ ಗಾಂಧಿ ಕುಟುಂಬದ ಕೈಯಲ್ಲಿರುವುದಕ್ಕೆ ಕೈ ಪಕ್ಷದ ಪ್ರಮುಖ ನಾಯಕರು ಆಕ್ರೋಶ ಹೊರ ಹಾಕಿದ್ದರು. ಅಷ್ಟೇ ಅಲ್ಲ, ಕೂಡಲೇ ನಾಯಕತ್ವ ಬದಲಾವಣೆ ಆಗಬೇಕು, ಗಾಂಧಿ ಕುಟುಂಬದ ಹೊರತಾದ ನಾಯಕರು ಪಕ್ಷದ ನೇತೃತ್ವ ವಹಿಸಬೇಕು ಎಂದು ಆಗ್ರಹಿಸಿದ್ದರು. ಅಚ್ಚರಿ ಎಂಬಂತೆ 7 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಯಾರೊಬ್ಬರೂ ರಾಹುಲ್​ ಗಾಂಧಿಯನ್ನು ಟೀಕೆ ಮಾಡಿಲ್ಲವಂತೆ. ಬದಲಿಗೆ ಅವರನ್ನು ಬೆಂಬಲಿಸಿದ್ದರು. ಈ ಮೂಲಕ ರಾಹುಲ್​ ಎಐಸಿಸಿ ಅಧ್ಯಕ್ಷರಾಗಲು ಯಾವುದೇ ತೊಂದರೆ ಇಲ್ಲ ಎಂದು ರೆಬೆಲ್​ ನಾಯಕರು ಪರೋಕ್ಷವಾಗಿ ಸಮ್ಮತಿಸಿದ್ದರು.

ಗಾಂಧಿ ಕುಟುಂಬದ ನಾಯಕತ್ವ ವಿರೋಧಿಸಿದವರೇ ಈಗ ರಾಹುಲ್​ ಬೆಂಬಲಿಸಿದರು

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್