ರೆಬೆಲ್​ ನಾಯಕರ ಭೇಟಿ ಬೆನ್ನಲ್ಲೇ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆ

ತೆಲಂಗಾಣ, ಗುಜರಾತ್​, ಮಧ್ಯ ಪ್ರದೇಶ್​ ಹಾಗೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ನಾಯಕತ್ವ ಬದಲಿಸುವ ನಿರ್ಧಾರ ತೆಗೆದುಕೊಂಡಿದೆ. ಹೈದರಾಬಾದ್ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿತ್ತು. ಇದರ, ಜವಾಬ್ದಾರಿ ಹೊತ್ತು ತೆಲಂಗಾಣ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಉತ್ತಮ್​ ಕುಮಾರ್​ ರೆಡ್ಡಿ ರಾಜೀನಾಮೆ ನೀಡಿದ್ದಾರೆ.

ರೆಬೆಲ್​ ನಾಯಕರ ಭೇಟಿ ಬೆನ್ನಲ್ಲೇ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆ
ಸೋನಿಯಾ ಗಾಂಧಿ
Edited By:

Updated on: Dec 20, 2020 | 4:28 PM

ದೆಹಲಿ: ಅಧ್ಯಕ್ಷ ಹುದ್ದೆ ಬದಲಾಗಬೇಕೆಂದು 23 ರೆಬೆಲ್​ ನಾಯಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿ ಶನಿವಾರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆತ್ತು. ಈ ಸಭೆ ಬೆನ್ನಲ್ಲೇ ಕಾಂಗ್ರೆಸ್​ ವಿವಿಧ ರಾಜ್ಯಗಳ ನಾಯಕತ್ವ ಬದಲಾವಣೆಗೆ ಒತ್ತು ನೀಡಲು ಆರಂಭಿಸಿದೆ. ಉತ್ತಮ ಪ್ರದರ್ಶನ ನೀಡದ ರಾಜ್ಯಗಳಲ್ಲಿ ತಕ್ಷಣವೇ ಕಾಂಗ್ರೆಸ್​ ಅಧ್ಯಕ್ಷ ಹುದ್ದೆ ಬದಲಾವಣೆಗೆ ‘ಕೈ’ ಮುಂದಾಗಿದೆ.

ತೆಲಂಗಾಣ, ಗುಜರಾತ್​, ಮಧ್ಯ ಪ್ರದೇಶ್​ ಹಾಗೂ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ನಾಯಕತ್ವ ಬದಲಿಸುವ ನಿರ್ಧಾರ ತೆಗೆದುಕೊಂಡಿದೆ. ಹೈದರಾಬಾದ್ ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿತ್ತು. ಇದರ, ಜವಾಬ್ದಾರಿ ಹೊತ್ತು ತೆಲಂಗಾಣ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಉತ್ತಮ್​ ಕುಮಾರ್​ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಗುಜರಾತ್​ ಉಪಚುನಾವಣೆಯ ಕಳಪೆ ಪ್ರದರ್ಶನದ ಕಾರಣ ನೀಡಿ, ಅಲ್ಲಿನ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಅಮಿತ್​ ಚಾವ್ಡಾ ಕೂಡ ಸ್ಥಾನ ತೊರೆದಿದ್ದಾರೆ.

ಮಧ್ಯ ಪ್ರದೇಶ ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾಗಿರುವ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸಿಎಲ್‌ಪಿ ನಾಯಕ ಹುದ್ದೆಯನ್ನು ಅಲಂಕರಿಸಿದ್ದಾರೆ. ಜಿ -23 ಜೊತೆ ಉನ್ನತ ಮಟ್ಟದ ನಾಯಕರು ಸಭೆ ಸೇರುವಂತೆ ಮಾಡುವಲ್ಲಿ ಕಮಲ್​ನಾಥ್​ ಪ್ರಮುಖ ಪಾತ್ರವಹಿಸಿದ್ದರು ಎನ್ನಲಾಗಿದೆ. ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷರಾಗಿರುವ ಬಾಲಾಸಾಹೇಬ್ ಥೋರತ್ ಅವರಿಗೆ ರಾಜ್ಯ ಶಾಸಕಾಂಗ ಪಕ್ಷದ ನಾಯಕ ಸ್ಥಾನ ನೀಡಲಾಗಿದೆ.

ಮುಂದಿನ ವರ್ಷ ಕೇರಳ ಹಾಗೂ ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಎರಡು ರಾಜ್ಯಗಳಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ.

ನಿನ್ನೆಯ ಸಭೆಯಲ್ಲೇನಾಗಿತ್ತು?
ಕಾಂಗ್ರೆಸ್​ ಅಧ್ಯಕ್ಷ ಸ್ಥಾನ ಗಾಂಧಿ ಕುಟುಂಬದ ಕೈಯಲ್ಲಿರುವುದಕ್ಕೆ ಕೈ ಪಕ್ಷದ ಪ್ರಮುಖ ನಾಯಕರು ಆಕ್ರೋಶ ಹೊರ ಹಾಕಿದ್ದರು. ಅಷ್ಟೇ ಅಲ್ಲ, ಕೂಡಲೇ ನಾಯಕತ್ವ ಬದಲಾವಣೆ ಆಗಬೇಕು, ಗಾಂಧಿ ಕುಟುಂಬದ ಹೊರತಾದ ನಾಯಕರು ಪಕ್ಷದ ನೇತೃತ್ವ ವಹಿಸಬೇಕು ಎಂದು ಆಗ್ರಹಿಸಿದ್ದರು. ಅಚ್ಚರಿ ಎಂಬಂತೆ 7 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಯಾರೊಬ್ಬರೂ ರಾಹುಲ್​ ಗಾಂಧಿಯನ್ನು ಟೀಕೆ ಮಾಡಿಲ್ಲವಂತೆ. ಬದಲಿಗೆ ಅವರನ್ನು ಬೆಂಬಲಿಸಿದ್ದರು. ಈ ಮೂಲಕ ರಾಹುಲ್​ ಎಐಸಿಸಿ ಅಧ್ಯಕ್ಷರಾಗಲು ಯಾವುದೇ ತೊಂದರೆ ಇಲ್ಲ ಎಂದು ರೆಬೆಲ್​ ನಾಯಕರು ಪರೋಕ್ಷವಾಗಿ ಸಮ್ಮತಿಸಿದ್ದರು.

 

ಗಾಂಧಿ ಕುಟುಂಬದ ನಾಯಕತ್ವ ವಿರೋಧಿಸಿದವರೇ ಈಗ ರಾಹುಲ್​ ಬೆಂಬಲಿಸಿದರು

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us