AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್ ಗಾಂಧಿ​ ಖೇಲ್​ ರತ್ನ ಹೆಸರು ಬದಲಿಸಿದ್ದಕ್ಕೆ ಕಾಂಗ್ರೆಸ್​ ಟೀಕೆ: ನರೇಂದ್ರ ಮೋದಿ ವಿರುದ್ಧ ಹರಿಹಾಯ್ದ ದಿಗ್ವಿಜಯ್ ಸಿಂಗ್

ಕ್ರೀಡಾ ಸಾಧಕರಿಗೆ ನೀಡುವ ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಯ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಬದಲಿಸಿರುವುದು ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ.

ರಾಜೀವ್ ಗಾಂಧಿ​ ಖೇಲ್​ ರತ್ನ ಹೆಸರು ಬದಲಿಸಿದ್ದಕ್ಕೆ ಕಾಂಗ್ರೆಸ್​ ಟೀಕೆ: ನರೇಂದ್ರ ಮೋದಿ ವಿರುದ್ಧ ಹರಿಹಾಯ್ದ ದಿಗ್ವಿಜಯ್ ಸಿಂಗ್
ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್
TV9 Web
| Edited By: |

Updated on: Aug 06, 2021 | 9:26 PM

Share

ದೆಹಲಿ: ಕ್ರೀಡಾ ಸಾಧಕರಿಗೆ ನೀಡುವ ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಯ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಬದಲಿಸಿರುವುದು ಕಾಂಗ್ರೆಸ್ ನಾಯಕರಲ್ಲಿ ಅಸಮಾಧಾನ ಮೂಡಿಸಿದೆ. ಈ ಕುರಿತು ಟ್ವಿಟರ್​ನಲ್ಲಿ ಅಸಮಾಧಾನ ಹೊರಹಾಕಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ‘ಅಹಮದಾಬಾದ್​ನ ಸರ್ದಾರ್ ಪಟೇಲ್ ಕ್ರಿಕೆಟ್ ಕ್ರೀಡಾಂಗಣದ ಹೆಸರು ಬದಲಿಸಿದಂತೆ ಖೇಲ್​ ರತ್ನ ಹೆಸರನ್ನೂ ಮೋದಿ ತಮ್ಮ ಹೆಸರು ಕೊಟ್ಟುಕೊಳ್ಳುತ್ತಾರೆ ಎಂದುಕೊಂಡಿದ್ದೆ’ ಎಂದು ವ್ಯಂಗ್ಯವಾಡಿದ್ದಾರೆ.

ಮೊದಲಿಗೆ ಅಹಮದಾಬಾದ್​ನ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿತ್ತು. ಅವರು ರಾಜೀವ್ ಗಾಂಧಿ ಖೇಲ್​ ರತ್ನ ಪುರಸ್ಕಾರಕ್ಕೂ ತಮ್ಮ ಹೆಸರು ಕೊಟ್ಟುಕೊಳ್ಳುತ್ತಾರೆ ಎಂದುಕೊಂಡಿದ್ದೆ. ಅದಕ್ಕೆ ಮೇಜರ್ ಧ್ಯಾನ್​ ಚಂದ್ ಹೆಸರು ನೀಡಿದ್ದು ತಿಳಿದು ಅಚ್ಚರಿಯಾಯಿತು ಎಂದು ದಿಗ್ವಿಜಯ ಸಿಂಗ್ ಟ್ವೀಟ್​ನಲ್ಲಿ ಹೇಳಿದ್ದಾರೆ.

ಮೋದಿ ವಿರುದ್ಧ ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಕಾಂಗ್ರೆಸ್ ನಾಯಕರು ದನಿಯೆತ್ತಿದ್ದಾರೆ. ಲೋಕಸಭೆ ಸದಸ್ಯ ಗೌರವ್ ಗೊಗೊಯ್ ಸಹ ನರೇಂದ್ರ ಮೋದಿ ಕ್ರೀಡಾಂಗಣಕ್ಕೆ ಮತ್ತೆ ಅದರ ಮೂಲ ಹೆಸರು ಇರಿಸಬೇಕು ಎಂದು ಆಗ್ರಹಿಸಿದ್ದಾರೆ. ಮೇಜರ್ ಧ್ಯಾನ್​ ಚಂದ್ ಹಲವು ಯುವ ಭಾರತೀಯರಿಗೆ ಸ್ಫೂರ್ತಿ ನೀಡಿದ್ದರು. ನಮ್ಮ ಈಗಿನ ಒಲಿಂಪಿಕ್ ತಂಡವೂ ಯುವ ಜನರನ್ನು ಹಾಕಿಯತ್ತ ಸೆಳೆಯಲಿದೆ. ಮೇಜರ್​ ಧ್ಯಾನ್​ ಚಂದ್​ಗೆ ಸರ್ಕಾರವು ಭಾರತರತ್ನ ಪುರಸ್ಕಾರ ನೀಡಲಿದೆ ಎಂದು ನಾನು ಆಶಿಸುತ್ತೇನೆ ಎಂದು ಗೊಗೊಯ್ ಟ್ವಿಟರ್​ನಲ್ಲಿ ಹೇಳಿದ್ದಾರೆ.

ಕ್ರೀಡಾ ಸಾಧಕರಿಗೆ ನೀಡುವ ದೇಶದ ಅತ್ಯುನ್ನತ ಪ್ರಶಸ್ತಿಯನ್ನು ಹಾಕಿ ದಂತಕಥೆ ಮೇಜರ್ ಧ್ಯಾನ್​ ಚಂದ್ ಪುರಸ್ಕಾರ ಎಂದು ಮರುನಾಮಕರಣ ಮಾಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಘೋಷಿಸಿದ್ದರು. ಹಲವಾರು ಜನರು ಖೇಲ್ ರತ್ನ ಪುರಸ್ಕಾರಕ್ಕೆ ಮೇಜರ್ ಧ್ಯಾನ್​ ಚಂದ್ ಹೆಸರು ಇರಿಸುವಂತೆ ಕೋರಿದ್ದ ಬಗ್ಗೆ ಪ್ರಸ್ತಾಪಿಸಿದ್ದ ಮೋದಿ, ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರವನ್ನು ಧ್ಯಾನ್​ ಚಂದ್ ಹೆಸರಿನಲ್ಲಿ ನೀಡುವುದು ಖುಷಿಯ ವಿಚಾರ ಎಂದು ಹೇಳಿದ್ದರು.

ಟೊಕಿಯೊ ಒಲಿಂಪಿಕ್ಸ್​ನಲ್ಲಿ ಭಾರತದ ಮಹಿಳಾ ಹಾಕಿ ತಂಡವು 4ನೇ ಸ್ಥಾನ ಪಡೆದ ಕೆಲವೇ ಗಂಟೆಗಳ ನಂತರ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ. 2016ರಲ್ಲಿ ಚಿನ್ನದ ಪದಕ ಪಡೆದಿದ್ದ ಇಂಗ್ಲೆಂಡ್ ತಂಡದ ಎದುರು ಭಾರತದ ಮಹಿಳಾ ಹಾಕಿತಂಡವು 4-3 ಅಂತರದಲ್ಲಿ ಸೋಲು ಅನುಭವಿಸಿತ್ತು. ಒಂದು ವೇಳೆ ಭಾರತದ ಮಹಿಳಾ ತಂಡ ಇಂಗ್ಲೆಂಡ್ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಗಿದ್ದರೆ, ಭಾರತ ಮಹಿಳಾ ತಂಡದ ಮೊದಲ ಒಲಿಂಪಿಕ್ ಪದ ಎನಿಸುತ್ತಿತ್ತು. ಭಾರತದ ಪುರುಷರ ತಂಡವು ಜರ್ಮನಿ ತಂಡವನ್ನು 5-4 ಅಂತರದಲ್ಲಿ ಮಣಿಸುವ ಮೂಲಕ ಕಳೆದ 41 ವರ್ಷಗಳಲ್ಲಿ ಮೊದಲ ಬಾರಿಗೆ ಪದಕ ಗಳಿಸಿತು.

1991-92ರಲ್ಲಿ ಖೇಲ್​ ರತ್ನ ಪುರಸ್ಕಾರವನ್ನು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಿನಲ್ಲಿ ಆರಂಭಿಸಲಾಗಿತ್ತು. ಅಹಮದಾಬಾದ್​ನಲ್ಲಿ ಆಧುನೀಕರಣಗೊಂಡ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಅವರ ಹೆಸರನ್ನು ಇರಿಸಲಾಗಿದೆ. ಕಳೆದ ಫೆಬ್ರುವರಿಯಲ್ಲಿ ಈ ಕ್ರೀಡಾಂಗಣವನ್ನು ಉದ್ಘಾಟಿಸಲಾಗಿತ್ತು. ಈ ಕ್ರೀಡಾಂಗಣದಲ್ಲಿ 1,30,000 ಜನರು ಕುಳಿತುಕೊಳ್ಳಬಹುದಾಗಿದೆ. ಇದು ಆಸ್ಟ್ರೇಲಿಯಾದ ಮೆಲ್ಬೊರ್ನ್​ ಕ್ರಿಕೆಟ್​ ಕ್ರೀಡಾಂಗಣಕ್ಕಿಂತಲೂ ದೊಡ್ಡದು.

(Congress condemns Narendra Modis decision to rename Rajiv Gandhi Khel Ratna Award after Major Dhyan Chand)

ಇದನ್ನೂ ಓದಿ: Khel Ratna Award: ರಾಜೀವ್​ ಗಾಂಧಿ ಖೇಲ್​ ರತ್ನ ಪ್ರಶಸ್ತಿಗೆ ಹಾಕಿ ಮಾಂತ್ರಿಕ ಧ್ಯಾನ್​ ಚಂದ್​ ಹೆಸರಿಟ್ಟ ಪ್ರಧಾನಿ ಮೋದಿ; ಟ್ವಿಟರ್​​ನಲ್ಲಿ ಘೋಷಣೆ

ಇದನ್ನೂ ಓದಿ: ಹಿಟ್ಲರ್​​ನ ಮೋಟು ಮೀಸೆ ಮಣ್ಣಾಗುವಂತೆ ‘ಭಾರತ ಮಾರಾಟಕ್ಕೆ ಇಲ್ಲ’ ಎಂದು ಧ್ಯಾನ್​ ಚಂದ್ ದಿಟ್ಟ ಉತ್ತರ ಕೊಟ್ಟಿದ್ದನ್ನು ಸ್ಮರಿಸಬೇಕಾದ ದಿನ ಇಂದು!

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ